ಸಿಎಂ-ಡಿಸಿಎಂ ಕುರ್ಚಿ ಫೈಟ್: ಎಲ್ಲ ಸಚಿವರಿಗೂ ಸಿಎಂ ಆಗುವ ಮಹಾದಾಸೆ: ಬಿಜೆಪಿ
ಬೆಂಗಳೂರು, ಡಿಸೆಂಬರ್ 06: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆ, ಎರಡು ಬಣಗಳ ಕಸರತ್ತು ದೆಹಲಿ ಭೇಟಿಯ ಬಳಿಕವೂ ಕುರ್ಚಿ ಕಿತ್ತಾಟ ಮುಂದುವರಿದಿದೆ. ಈ ಬಗ್ಗೆ ಬಿಜೆಪಿಯು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಾವಧಿ ಅಂತ್ಯಗೊಂಡಿದೆ. ಸಿಎಂ ಕುರ್ಚಿಗೆ ಕಾಂಗ್ರೆಸ್ ಪಕ್ಷದೊಳಗೆ ಕಿತ್ತಾಟ ಆರಂಭವಾಗಿದೆ ಎಂದು ಸಚಿವರ ಸಿಎಂ ಸ್ಥಾನ ಬಗ್ಗೆ ಹೇಳಿಕೆಯನ್ನು ಮರುವ್ಯಾಕ್ಯಾನಿಸಿ ಕುಟುಕಿದೆ.
ಕರ್ನಾಟಕ ಬಿಜೆಪಿ ಶನಿವಾರ ಎಕ್ಸ್ ಪೋಸ್ಟ್ ಮಾಡಿದ್ದು, ಶುಕ್ರವಾರ ರಾಜ್ಯ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಸಿಎಂ ನನಗೂ ಸಿಎಂ ಆಗುವಾಸೆ ಇದೆ ಎಂದಿದ್ದರು. ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದರು. ಇದೇ ವಿಚಾರ ಇಟ್ಟುಕೊಂಡು ಬಿಜೆಪಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರವನ್ನು ಲೇವಡಿ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರಾವಧಿ ಅಂತ್ಯಗೊಂಡಿದೆ. ಎರಡೂವರೆ ವರ್ಷಗಳ ಅವಧಿಯನ್ನು ಮುಗಿಸುತ್ತಲೇ ಸಿಎಂ ಕುರ್ಚಿಗೆ ಕಾಂಗ್ರೆಸ್ ಪಕ್ಷದೊಳಗೆ ಕಿತ್ತಾಟ ಆರಂಭವಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಧಿಕೃತವಾಗಿ ಸಿಎಂ ಕುರ್ಚಿಯ ಮೇಲೆ ಹಕ್ಕು ಪ್ರತಿಪಾದಿಸುತ್ತಿದ್ದಾರೆ. ಉಳಿದವರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ.
ಇದೀಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನನಗೂ ಸಿಎಂ ಆಗುವಾಸೆ ಇದೆ ಎಂದು ಹೇಳುವ ಮೂಲಕ ಕುರ್ಚಿ ಗುದ್ದಾಟದಲ್ಲಿ ತನ್ನ ಇರುವಿಕೆಯನ್ನೂ ಸ್ಪಷ್ಟಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಎಲ್ಲಾ ಸಚಿವರೂ ಸಿಎಂ ಆಗುವ ಮಹದಾಸೆ ಎದ್ದುಕಾಣುತ್ತಿದೆ.
ಆದರೆ ಯಾವೊಬ್ಬ ಸಚಿವರೂ ಕೂಡಾ ಕರ್ನಾಟಕವನ್ನು ಪ್ರಗತಿ ಮಾಡುತ್ತೇನೆ. ತನ್ನ ಸಚಿವಾಲಯದಲ್ಲಿ ಜನಸೇವೆಯ ಕ್ರಾಂತಿ ಮಾಡುತ್ತೇನೆ ಎಂದು ಹೇಳುತ್ತಿಲ್ಲ, ಎಲ್ಲರಿಗೂ ಅಧಿಕಾರವೇ ಮುಖ್ಯವಾಗಿದೆ ಎಂದು ಬಿಜೆಪಿ ಸರ್ಕಾರದ ಮಟ್ಟದಲ್ಲಿನ ಬೆಳವಣಿಗೆಯನ್ನು ಟೀಕಿಸಿದೆ.
ದಿನೇಶ್ ಗುಂಡೂರಾವ್ ಅವರು ಹೇಳಿದ್ದೇನು?
ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ. ನನಗೆ ಸಿಎಂ ಆಗುವ ಆಸೆ ಇದೆ. ಸಮಯ ಬಂದಾಗ ಅದನ್ನು ಪಕ್ಷ ನಿರ್ಧರಿಸುತ್ತದೆ. ಸದ್ಯ ನಾಯಕತ್ವ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಸಿಎಂ, ಡಿಸಿಎಂ ಸೇರಿದಂತೆ ಎಲ್ಲರೂ ಹೈಕಮಾಂಡ ನಿರ್ಧಾರಕ್ಕೆ ಬದ್ಧ. ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು. ನೀವು ಸಿಎಂ ರೇಸಿನಲ್ಲಿದ್ಧೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದರಲ್ಲಿ ನನ್ನನ್ನು ಯಾಕೆ ಎಳೆದು ತರುತ್ತೀರಿ. ಎಲ್ಲರಿಗೂ ಆಸೆ ಇದೆ ಎಂದು ಅವರು ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications