ಬ್ರಾಹ್ಮಣರಿಗೂ ಜಾತಿ ಪ್ರಮಾಣಪತ್ರ ಸಿಕ್ಕಿದ್ದು ನಮ್ಮ ಸರ್ಕಾರದಿಂದ: ಕಂದಾಯ ಸಚಿವ ಆರ್ ಅಶೋಕ್
ಬೆಂಗಳೂರು, ಜು. 05: "ಬ್ರಾಹ್ಮಣ ಸಮುದಾಯದಲ್ಲಿ ಎಲ್ಲಾ ಬ್ರಾಹ್ಮಣರು ಶ್ರೀಮಂತರಾಗಿಲ್ಲ, ಅನೇಕರು ಬಡವರು ಇದ್ದಾರೆ. ನಾವು ಅವರಿಗೆ ಸಹಾಯ ಮಾಡಬೇಕಾಗಿದೆ" ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ಕೋವಿಡ್ ನಿಂದ ಸಂಕಷ್ಟಕ್ಕೆ ಒಳಗಾದ ಬ್ರಾಹ್ಮಣ ಸಮುದಾಯದ ಒಂದು ಸಾವಿರ ಜನರಿಗೆ ದಿನಸಿ ಕಿಟ್ಗಳನ್ನು ವಿತರಿಸಿ ಮಾತನಾಡಿದರು. "ಜನರು ನನ್ನ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ ಮತ್ತು ನನಗೆ ಮತ ಹಾಕಿದ್ದಾರೆ. ಇದು ನನ್ನ ಜವಾಬ್ದಾರಿಯಾಗಿದೆ. ನಾನು ಜನರ ಸೇವೆಯನ್ನು ಮುಂದುವರಿಸುತ್ತೇನೆ.
ಬ್ರಾಹ್ಮಣರಿಗೆ ಈ ಹಿಂದೆ ಇಲ್ಲದಿದ್ದ ಜಾತಿ ಪ್ರಮಾಣಪತ್ರವನ್ನು ನೀಡಲು ಸ್ವಯಂಪ್ರೇರಣೆಯಿಂದ ಆದೇಶ ಹೊರಡಿಸಿದ್ದೇನೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ತಿಳಿಸಲಾಗಿದೆ. ಬಡ ಬ್ರಾಹ್ಮಣ ಬಾಲಕಿಯರ ಉಚಿತ ಶಿಕ್ಷಣಕ್ಕಾಗಿ ನಾವು ಪದ್ಮನಾಭನಗರ ಕ್ಷೇತ್ರದಲ್ಲಿ ಕಟ್ಟಡವನ್ನು ನಿರ್ಮಿಸಿದ್ದೇವೆ ಮತ್ತು ಭೂಮಿ ಮತ್ತು ಆರ್ಥಿಕ ನೆರವು ನೀಡಿದ್ದೇವೆ" ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

"ಕೋವಿಡ್ ನಿಂದ ತಮ್ಮ ಕುಟುಂಬದವರನ್ನು ಕಳೆದುಕೊಂಡವರು ದೇಹಗಳನ್ನು ಪಡೆಯಲು ವಿಫಲರಾಗಿದ್ದಾರೆ. ಮತ್ತು ಕೆಲವರು ಹೆದರಿ ಮೃತದೇಹವನ್ನು ಪಡೆಯಲು ಮುಂದೆ ಬಂದಿರಲಿಲ್ಲ. ಆದ್ದರಿಂದ, ನಾವು ಅಸ್ತಿ ವಿಸರ್ಜನೆ ಮಾಡಲು ನಿರ್ಧರಿಸಿದೆವು. ನಾನು ಮೂರು ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಂಡ ಧಾರ್ಮಿಕ ಕಾರ್ಯವನ್ನ ಮುಗಿಸಿದೆ. ಅದು ನನ್ನ ಕರ್ತವ್ಯ ಎಂದು ಬಲವಾಗಿ ನಂಬಿದ್ದೆ. ಈಗ ನಾನು ಇನ್ನೂ ಒಂದು ಧಾರ್ಮಿಕ ಆಚರಣೆ ಮಾಡುವುದಿದೆ.

Recommended Video
ಅದಕ್ಕಾಗಿ ನಾನು ಕೇರಳದ ವಿಷ್ಣು ಪಾಡಾಗೆ ಅಥವಾ ವಾರಣಾಸಿಗೆ ಭೇಟಿ ನೀಡಬೇಕಿದೆ. ನಾನು ಈ ಎಲ್ಲಾ ಕೆಲಸಗಳನ್ನು ಮಾಡುತ್ತೇನೆ, ನನ್ನ ಜನ ನನಗೆ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ಶೀಘ್ರದಲ್ಲೇ ಈ ಕಾರ್ಯವನ್ನು ಸಹ ಮಾಡಿ ಮುಗಿಸುತ್ತೇನೆ" ಎಂದು ಇದೇ ಸಂದರ್ಭದಲ್ಲಿ ಆರ್. ಅಶೋಕ್ ಹೇಳಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications