ತೇಜಸ್ವಿನಿ ಮಾತಿಗೆ ಬಿಜೆಪಿಯಲ್ಲೇ ಅಸಮಾಧಾನ
ಬೆಂಗಳೂರು, ನ. 13: ಬಿಜೆಪಿ ವಕ್ತಾರೆ ತೇಜಸ್ವಿನಿ ರಮೇಶ ಹೇಳಿಕೆಗೆ ಅವರ ಪಕ್ಷದ ವರಿಷ್ಠರೇ ಬೇಸರ ವ್ಯಕ್ತಪಡಿಸಿದ್ದು, ಪಕ್ಷದ ಘನತೆಗೆ ಧಕ್ಕೆಯಾಗುವಂತೆ ಹೇಳಿಕೆ ನೀಡಬೇಡಿ ಎಂದು ಸೂಚಿಸಿದ್ದಾರೆ. ಇದರಿಂದ ಕಾಂಗ್ರೆಸ್ ಕಾಲೆಳೆಯಲು ಹೋದ ತೇಜಸ್ವಿನಿ ಸ್ವತಃ ಜಾರಿಬಿದ್ದು ನಗೆಪಾಟಲಿಗೀಡಾಗಿದ್ದಾರೆ.
ತೇಜಸ್ವಿನಿ ರಮೇಶ ಹಾಗೂ ಸಚಿವೆ ಉಮಾಶ್ರೀ ಜಟಾಪಟಿ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೊಂಡ ಹಿನ್ನೆಲೆಯಲ್ಲಿ ಪ್ರಹ್ಲಾದ ಜೋಶಿ ಪ್ರತಿಕ್ರಿಯೆ ನೀಡಿದರು.

ರಾಜಕೀಯಕ್ಕಿಂತ ವ್ಯಕ್ತಿಯ ವರ್ಚಸ್ಸು ಮುಖ್ಯವಾಗಿರುತ್ತದೆ. ಸಚಿವೆಯಾಗಿರುವ ಉಮಾಶ್ರೀ ಅವರನ್ನು ಗೌರವಿಸಬೇಕು. ಹೆಣ್ಣು ಮಕ್ಕಳ ಕುರಿತು ಮಾತನಾಡುವಾಗ ಯೋಚಿಸಬೇಕು ಎಂದು ಸೂಚಸಿದ್ದಾರೆ. [ಅಸಭ್ಯ ಹೇಳಿಕೆ: ತೇಜಸ್ವಿನಿ-ಉಮಾಶ್ರೀ ಜಟಾಪಟಿ]
ಅಲ್ಲದೆ, ಇನ್ನು ಮುಂದೆ ಮಾಧ್ಯಮಗಳ ಜತೆ ಮಾತನಾಡುವಾಗ ಶಬ್ದಗಳ ಬಳಕೆ ಸರಿಯಾಗಿರಬೇಕು, ವರಿಷ್ಠರ ಜತೆ ಚರ್ಚಿಸಬೇಕು ಎಂದು ತಮ್ಮದೇ ಪಕ್ಷದ ವಕ್ತಾರಿಗೆ ಜೋಶಿ ಸ್ಪಷ್ಟ ಸೂಚನೆ ನೀಡಿದ್ದಾರೆ.
ಸಚಿವ ವಿನಯಕುಮಾರ ಸೊರಕೆ ವಾಗ್ದಾಳಿ: ತೇಜಸ್ವಿನಿ ರಮೇಶ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ. ಅವರಿಗೆ ಬಿಜೆಪಿ ಹೊಸದು. ಅವರಿಗಿನ್ನೂ ಆ ಪಕ್ಷದ ಸಂಸ್ಕೃತಿ ಗೊತ್ತಿಲ್ಲ. ಆದ್ದರಿಂದ ಅಲ್ಲಿ ಹೀರೊ ಆಗಲು ಹೊರಟಿದ್ದಾರೆ. ಬಿಜೆಪಿ ಈಗಾಗಲೇ ಬಂಗಾರಪ್ಪ, ಆಳ್ವಾ, ತಾರಾದೇವಿ ಅವರನ್ನು ಬಳಸಿ ಬೀಸಾಡಿದೆ. ತೇಜಸ್ವಿನಿ ಅವರಿಗೂ ಶೀಘ್ರ ಈ ಗತಿ ಬರಲಿದೆ ಎಂದು ಸಚಿವ ವಿನಯಕುಮಾರ ಸೊರಕೆ ಎಚ್ಚರಿಕೆ ನೀಡಿದ್ದಾರೆ.
ತೇಜಸ್ವಿನಿ ಹೇಳಿದ್ದೇನು?: ಕಾಂಗ್ರೆಸ್ನಲ್ಲಿ ಸುಂದರ ಮಹಿಳೆಯರನ್ನು ವಸ್ತುವಿನಂತೆ ಬಳಸಿಕೊಳ್ಳಲಾಗುತ್ತಿದೆ. ಆ ಪಕ್ಷದಲ್ಲಿ ದುಶ್ಯಾಸನನಂತಹ ಮಹಿಳಾ ಪೀಡಕರಿದ್ದಾರೆ. ಪುರುಷರು ಹೇಳಿದಂತೆ ಕೇಳಿದರೆ ಮಾತ್ರ ಮಹಿಳೆಯರಿಗೆ ಪದವಿ ಸಿಗುತ್ತದೆ. ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ, ಅಧಿಕಾರ ನೀಡುವುದಿಲ್ಲ. ಚಿತ್ರನಟಿ ರಮ್ಯಾ ಸುಂದರಿಯಾಗಿದ್ದು, ಸೆಲೆಬ್ರಿಟಿಯಾಗಿರುವ ಕಾರಣ ಅವರಿಗೆ ಟಿಕೆಟ್ ನೀಡಲಾಗಿದೆ. ಆದ್ದರಿಂದ ಮಹಿಳೆಯರು ಕಾಂಗ್ರೆಸ್ ಸೇರುವ ಮೊದಲು ಎಚ್ಚರಿಕೆ ವಹಿಸಬೇಕು ಎಂದು ತೇಜಸ್ವಿನಿ ರಮೇಶ ಮಂಡ್ಯದಲ್ಲಿ ಹೇಳಿದ್ದರು.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications