ಮಹದೇವಪುರ ಕ್ಷೇತ್ರದಲ್ಲಿ ವಿಜಯೇಂದ್ರ, ಮೊದಲ ಭೇಟಿಯಲ್ಲೇ ಸಭೆ
ಬೆಂಗಳೂರು, ಸೆಪ್ಟೆಂಬರ್ 23: ''ಯುವಕರು ಹೆಚ್ಚಿನ ರೀತಿಯಲ್ಲಿ ಪಕ್ಷದ ಬಗ್ಗೆ ಒಲವು ತೋರಿಸುವಂತೆ ಪಕ್ಷದ ಸಂಘಟನೆಗೆ ಒತ್ತು ನೀಡಿ'' ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ವಿಜಯೇಂದ್ರ ಅವರು ಕರೆ ನೀಡಿದರು.
ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಮಹದೇವಪುರ ಕ್ಷೇತ್ರಕ್ಕೆ ಆಗಮಿಸಿದ್ದ ಅವರು ಮಾಜಿ ಪಾಲಿಕೆ ಸದಸ್ಯರಾದ ಶ್ವೇತಾ ಹೂಡಿ ವಿಜಯಕುಮಾರ್ ಅವರ ಎಐಸಿಎಸ್ ಲೇಔಟ್ ನ ಮನೆಗೆ ಭೇಟಿ ನೀಡಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು.
ಮಹದೇವಪುರ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಚರ್ಚೆ ನಡೆಸಿದ ಅವರು ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಹಾಗೂ ರಾಜ್ಯದಲ್ಲಿರುವ ಬಿ ಎಸ್ ಯಡಿಯೂರಪ್ಪ ನವರ ನೇತೃತ್ವದ ಸರಕಾರ ಜನಪರ ಆಡಳಿತವನ್ನು ನೀಡುತ್ತಿದೆ. ಇದರ ಪರಿಣಾಮ ಪಕ್ಷದತ್ತ ಜನರು ಒಲವು ತೋರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಯುವಕರು ಪಕ್ಷದತ್ತ ಒಲವು ತೋರಿಸುವಂತೆ ಪಕ್ಷವನ್ನು ಸಂಘಟಿಸಿ ಎಂದು ಕರೆ ನೀಡಿದರು.

ಇದೇ ವೇಳೆ ಬೆಂಗಳೂರು ನಗರ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಸೇರಿದ ನೀಲಸಂದ್ರ ಗ್ರಾಮದ ಸರ್ವೇ ನಂ 79 ರ 15 ಏಕರೆ 12 ಗುಂಟೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಕಟ್ಟಡಗಳನ್ನು ತೆರವುಗೊಳಿಸಿ ದೇವಾಲಯದ ವಶಕ್ಕೆ ನೀಡುವಂತೆ ಮನವಿ ಸಲ್ಲಿಸಲಾಯಿತು ಎಂದು ಕರ್ನಾಟಕ ರಾಜ್ಯ ತಿಗಳ (ವಹ್ನಿಕುಲ ಕ್ಷತ್ರೀಯರ) ಸಂಘ ಖಜಾಂಚಿ ಹೂಡಿ ವಿಜಯ ಕುಮಾರ್ ತಿಳಿಸಿದರು.
ಮೊದಲ ಬಾರಿ ಕ್ಷೇತ್ರಕ್ಕೆ ಆಗಮಿಸಿದ್ದ ಬಿ ವೈ ವಿಜಯೇಂದ್ರ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದು ವಿಶೇಷವಾಗಿತ್ತು. ನೂರು ಮೀಟರ್ ಗೂ ಹೆಚ್ಚು ರಸ್ತೆಯನ್ನು ಹೂವನ್ನು ಹಾಸಲಾಗಿತ್ತು. ಖಡ್ಗವನ್ನು ನೀಡಿ ವಿಶೇಷವಾಗಿ ಸ್ವಾಗತಿಸಲಾಯಿತು.

ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ತಿಗಳ (ವಹ್ನಿಕುಲ ಕ್ಷತ್ರೀಯರ) ಸಂಘ ಅಧ್ಯಕ್ಷರಾದ ಜಯರಾಜ್, ಬಿಎಂಟಿಸಿ ಅಧ್ಯಕ್ಷರಾದ ನಂದೀಶ್ ರೆಡ್ಡಿ, ತಮೇಶ್ ಗೌಡ, ಮಾಜಿ ಬಿಬಿಎಂಪಿ ಸದಸ್ಯರಾದ ರಮೇಶ್, ಮಾರ್ಕೇಟ್ ರಮೇಶ್ ರಾಜಶೇಖರ ರೆಡ್ಡಿ, ಬಿಜೆಪಿ ಮುಖಂಡ ಕೈಕೊಂಡ್ರಹಳ್ಳಿ ಶೇಖರ್ ರೆಡ್ಡಿ, ಕುಂದೇನಹಳ್ಳೀ ರಮೇಶ್ ರೆಡ್ಡಿ, ಮಿಥುನ್ ರೆಡ್ಡಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications