ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಗಳೇ ಇವು: ಬಿಜೆಪಿ ತಿಳಿಸಿದ್ದೇನು
ಬೆಂಗಳೂರು, ಅಕ್ಟೋಬರ್ 23: ಕರ್ನಾಟಕ ರಾಜ್ಯ ಸರ್ಕಾರ ಅಧಿಕಾರ ಹಿಡಿದು ಈಗಾಗಲೇ ನಾಲ್ಕು ಐದು ತಿಂಗಳು ಪೂರೈಸುತ್ತಾ ಬಂದಿದೆ. ಈ ಮಧ್ಯೆ ಸರ್ಕಾರ ಹೇಗೆ ಅಧಿಕಾರಕ್ಕೆ ಬಂತು ಎಂಬುದರ ಕುರಿತು ಕರ್ನಾಟಕ ಬಿಜೆಪಿ ಮತ್ತೆ ಲೇವಡಿ ಮಾಡಿದೆ. ನಕಲಿ ಮತದಾರರ ಪಟ್ಟಿಯಿಂದಲೇ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿದೆ.
ಸೋಮವಾರ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿರುವ ಬಿಜೆಪಿಯು, ಕರ್ನಾಟಕದಲ್ಲಿ #ATMSarkara ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಸಾಧ್ಯವಾದ ಅಂಶಗಳು ಇವು ಎಂದು ವಾಗ್ದಾಳಿ ನಡೆಸಿದೆ.

* ನಕಲಿ ಮತದಾರರ ಪಟ್ಟಿ ವಿಚಾರವಾಗಿ ಭೈರತಿ ಸುರೇಶ್ ಆಪ್ತನ ಬಂಧನವಾಗಿದೆ.
* ಸುಳ್ಳು ಗ್ಯಾರಂಟಿಗಳ ಪುಕಾರು ಹಬ್ಬಿಸಿದೆ. ಗ್ಯಾರಂಟಿಗಳ ಹಣ ಜನತೆ ಕೈ ಸೇರಿಲ್ಲ.
* ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಕುಕ್ಕರ್ ಇಸ್ತ್ರಿ ಪೆಟ್ಟಿಗೆ, ಹಣ ಹಂಚಲಾಗಿದೆ
* ವಿದ್ಯುತ್, ಕಾವೇರಿ, ರೈತರ ವಿಚಾರದಲ್ಲಿ ಕಿವಿ ಮೇಲೆ ಕಲರ್ ಕಲರ್ ಹೂ ಇಡಲಾಗಿದೆ.
* ಜಾತಿ, ಭ್ರಷ್ಟಾಚಾರ ವಿಚಾರದಲ್ಲಿ ನಿರಂತರ ಸುಳ್ಳು ಸುದ್ದಿಗಳ ಹರಡಲಾಗುತ್ತಿದೆ.
ನಾವು ಕಾಂಗ್ರೆಸ್ಗೆ ಮತ ಹಾಕಿಲ್ಲ, ಆದರೂ ಹೇಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು ಎನ್ನುವ ಜನರ ಪ್ರಶ್ನೆಗೆ ಸಿದ್ದರಾಮ್ಯಯ್ಯ ಅವರ ಆಪ್ತ ಭೈರತಿ ಸುರೇಶ್ ಅವರ ನಕಲಿ ಮತದಾರರ ಪಟ್ಟಿಯೇ ಉತ್ತರ ಎಂದು ಕರ್ನಾಟಕ ಬಿಜೆಪಿ ತಿಳಿಸಿದೆ.

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಬಂದಿದ್ದ ಬಿಜೆಪಿಗೆ ಇದೀಗ ನಕಲಿ ಮತದಾರರ ಪಟ್ಟಿ ವಿಚಾರದಲ್ಲಿ ಕಾಂಗ್ರೆಸ್ ನಾಯಕನ ಬಂಧನವು ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಅಸ್ತ್ರವಾಗಲಿದೆ.
ಈ ಹಿಂದೆ ವರುಣಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಗೂ ಮುನ್ನ ಕುಕ್ಕರ್, ಹಣ ಹಂಚಿದ್ದಾರೆ ಎಂಬ ವಿಚಾರ ಸಾಕಷ್ಟು ಚರ್ಚೆ ಆಗಿತ್ತು. ಇದು ನಿಮ್ಮ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಮಾತಿನಿಂದಲೇ ಸಾಬೀತಾಗಿದೆ ಎಂದು ಬಿಜೆಪಿ ಗುಡುಗಿತ್ತು
ನಕಲಿ ವೋಟರ್ ಐಡಿ ತಯಾರಿಕೆ: ಬಂಧನ
ಜಾತಿ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಕಾಂಗ್ರೆಸ್, ಕಾವೇರಿ ನೀರು, ವಿದ್ಯುತ್, ರೈತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸದ್ಯ ಸಚಿವ ಬೈರತಿ ಸುರೇಶ್ ಆಪ್ತನನ್ನು ನಕಲಿ ಮತದಾರರ ಚೀಟಿ ಕುರಿತು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೈರತಿ ಸುರೇಶ್ ಆಪ್ತನಾದ ಮೌನೇಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು ಆತನ ಜತೆ ಶಾಮೀಲಾಗಿದ್ದ ಭಗತ್ ಹಾಗೂ ರಾಘವೇಂದ್ರ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ. ಆರೋಪಿಗಳು ಹಣ ಕೊಟ್ಟರೆ ನಕಲಿ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಡಿಎಲ್ನ್ನು ಮಾಡಿಕೊಡುತ್ತಿದ್ದರು ಎಂಬ ಆರೋಪಗಳು ಕೇಳಿ ಬಂದಿವೆ. ಸದ್ಯ ಪ್ರಕರಣದ ತನಿಖೆ ಮುಂದುವರಿದಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications