ಆರ್. ಆರ್. ನಗರ ಉಪ ಚನಾವಣೆ; ಬಿಜೆಪಿಯ ಮುನಿರತ್ನ ಜಯಭೇರಿ
ಬೆಂಗಳೂರು, ನವೆಂಬರ್ 10 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ 3ನೇ ಬಾರಿಗೆ ಆರ್. ಆರ್. ನಗರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು.
Recommended Video
ಮಂಗಳವಾರ ಆರ್. ಆರ್. ನಗರ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಿತು. ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಮೊದಲ ಸುತ್ತಿನಿಂದಲೇ ಮುನಿರತ್ನ ಅವರು ಮುನ್ನಡೆ ಕಾಯ್ದುಕೊಂಡರು.

ಕಾಂಗ್ರೆಸ್ ಅಭ್ಯರ್ಥಿ ಹೆಚ್. ಕುಸುಮಾ ಮತ್ತು ಮುನಿರತ್ನ ನಡುವೆ ಭಾರಿ ಪೈಪೋಟಿ ನಿರೀಕ್ಷೆ ಮಾಡಲಾಗಿತ್ತು. ಆದರೆ, ಮುನಿರತ್ನ ಅವರು ಭಾರಿ ಮುನ್ನಡೆಯೊಂದಿಗೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ 3ನೇ ಬಾರಿಗೆ ಗೆದ್ದಿದ್ದಾರೆ.
ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಿಜೆಪಿಯ ಮುನಿರತ್ನ ಅವರು 1,25,734 ಮತಗಳನ್ನು ಪಡೆದು 57,936 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
25ನೇ (ಕೊನೆ) ಸುತ್ತಿನ ಎಣಿಕೆ ಮುಕ್ತಾಯವಾಗಿದೆ. ಮುನಿರತ್ನ1,25,734 ಮತ. ಕಾಂಗ್ರೆಸ್ನ ಹೆಚ್. ಕುಸುಮಾ 67,798 ಮತ. ಜೆಡಿಎಸ್ನ ಕೃಷ್ಣಮೂರ್ತಿ10251 ಮತ ಪಡೆದಿದ್ದಾರೆ. ಒಟ್ಟು ಚಲಾವಣೆಯಾದ ನೋಟಾ ಮತಗಳು 2,494.
ಮುನಿರತ್ನ ಹ್ಯಾಟ್ರಿಕ್ ಗೆಲುವು : ಆರ್. ಆರ್. ನಗರ ಕ್ಷೇತ್ರದಲ್ಲಿ ಮುನಿರತ್ನ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 2013 ಮತ್ತು 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುನಿರತ್ನ ಆರ್. ಆರ್. ನಗರದಲ್ಲಿ ಗೆಲುವು ಸಾಧಿಸಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications