ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣ: ಕಾಂಗ್ರೆಸ್ ಸದಸ್ಯೆ ಬಂಧನ
ಬೆಂಗಳೂರು , ಮಾರ್ಚ್ 16: ಮಾರ್ಚ್ 14 ರಂದು ಬೆಳಗ್ಗೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಆರ್ ಎಸ್ ಎಸ್, ಬಿಜೆಪಿ ಕಾರ್ಯಕರ್ತ, ಪುರಸಭೆ ಸದಸ್ಯ ಶ್ರೀನಿವಾಸ್ ಪ್ರಸಾದ್ ಅವರ ಹತ್ಯೆಗೆ ಸಂಬಂಧಿಸಿದಂತೆ ಬೊಮ್ಮಸಂದ್ರ ಪುರಸಭೆಯ ಕಾಂಗ್ರೆಸ್ ಸದಸ್ಯೆ ಸರೋಜಮ್ಮ ಎಂಬುವವರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.[ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ಮುಖಂಡನ ಹತ್ಯೆ]
ಶ್ರೀನಿವಾಸ್ ಮತ್ತು ಸರೋಜಮ್ಮ ನಡುವೆ ಹಲವು ದಿನಗಳಿಂದ ರಾಜಕೀಯ ದ್ವೇಷ ಇತ್ತು ಎನ್ನಲಾಗುತ್ತಿದೆ. ಈ ಹತ್ಯೆಯಲ್ಲಿ ಸರೋಜಮ್ಮ ಅವರ ಪುತ್ರ ಮಂಜು ಕೈವಾಡವಿದೆ ಎಂದೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರಿಗೆ ಸಿಕ್ಕಿಹಾಕಿಕೊಂಡ ಮಧು, ನಾರಾಯಣಸ್ವಾಮಿ, ಮಂಜುನಾಥ್ ಮತ್ತು ಮುರಳೀ ಎಂಬುವವರು ತಾವು ಸರೋಜಮ್ಮನ ಮಗ ಮಂಜುನ ಸ್ನೇಹಿತರು, ಹಣದಾಸೆಗಾಗಿ ಈ ಕೆಲಸ ಮಾಡಿದ್ದೇವೆಂದು ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.[ಬಿಜೆಪಿ ಮುಖಂಡನ ಹತ್ಯೆ: ತನಿಖೆಗೆ ತಂಡ ರಚನೆ]

ಬೊಮ್ಮಸಂದ್ರ ಪುರಸಭೆಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಸರೋಜಮ್ಮಗೆ ಶ್ರೀನಿವಾಸ್ ಪ್ರಸಾದ್ ಪ್ರಬಲ ಪ್ರತಿಸ್ಪರ್ಧಿಯಾಗಿದ್ದರು. ಅದೂ ಅಲ್ಲದೆ ಇಬ್ಬರ ನಡುವೆ ನಡೆದಿದ್ದ ಕಾನೂನು ಹೋರಾಟವೊಂದರಲ್ಲೂ ಶ್ರೀನಿವಾಸ್ ಪ್ರಸಾದ್ ಗೆದ್ದಿದ್ದರು. ಕೊಲೆಗೆ ಈ ಎಲ್ಲವೂ ಕಾರಣವಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರಾದರೂ ಮತ್ತಷ್ಟು ತನಿಖೆ ನಡೆದ ನಂತರವಷ್ಟೇ ಸತ್ಯ ಹೊರಬೀಳಲಿದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications