Get Updates
Get notified of breaking news, exclusive insights, and must-see stories!

ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣ: ಕಾಂಗ್ರೆಸ್ ಸದಸ್ಯೆ ಬಂಧನ

ಬೆಂಗಳೂರು , ಮಾರ್ಚ್ 16: ಮಾರ್ಚ್ 14 ರಂದು ಬೆಳಗ್ಗೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಆರ್ ಎಸ್ ಎಸ್, ಬಿಜೆಪಿ ಕಾರ್ಯಕರ್ತ, ಪುರಸಭೆ ಸದಸ್ಯ ಶ್ರೀನಿವಾಸ್ ಪ್ರಸಾದ್ ಅವರ ಹತ್ಯೆಗೆ ಸಂಬಂಧಿಸಿದಂತೆ ಬೊಮ್ಮಸಂದ್ರ ಪುರಸಭೆಯ ಕಾಂಗ್ರೆಸ್ ಸದಸ್ಯೆ ಸರೋಜಮ್ಮ ಎಂಬುವವರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.[ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ಮುಖಂಡನ ಹತ್ಯೆ]

ಶ್ರೀನಿವಾಸ್ ಮತ್ತು ಸರೋಜಮ್ಮ ನಡುವೆ ಹಲವು ದಿನಗಳಿಂದ ರಾಜಕೀಯ ದ್ವೇಷ ಇತ್ತು ಎನ್ನಲಾಗುತ್ತಿದೆ. ಈ ಹತ್ಯೆಯಲ್ಲಿ ಸರೋಜಮ್ಮ ಅವರ ಪುತ್ರ ಮಂಜು ಕೈವಾಡವಿದೆ ಎಂದೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರಿಗೆ ಸಿಕ್ಕಿಹಾಕಿಕೊಂಡ ಮಧು, ನಾರಾಯಣಸ್ವಾಮಿ, ಮಂಜುನಾಥ್ ಮತ್ತು ಮುರಳೀ ಎಂಬುವವರು ತಾವು ಸರೋಜಮ್ಮನ ಮಗ ಮಂಜುನ ಸ್ನೇಹಿತರು, ಹಣದಾಸೆಗಾಗಿ ಈ ಕೆಲಸ ಮಾಡಿದ್ದೇವೆಂದು ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.[ಬಿಜೆಪಿ ಮುಖಂಡನ ಹತ್ಯೆ: ತನಿಖೆಗೆ ತಂಡ ರಚನೆ]

BJP workes' murder: Police arrest Congress member

ಬೊಮ್ಮಸಂದ್ರ ಪುರಸಭೆಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಸರೋಜಮ್ಮಗೆ ಶ್ರೀನಿವಾಸ್ ಪ್ರಸಾದ್ ಪ್ರಬಲ ಪ್ರತಿಸ್ಪರ್ಧಿಯಾಗಿದ್ದರು. ಅದೂ ಅಲ್ಲದೆ ಇಬ್ಬರ ನಡುವೆ ನಡೆದಿದ್ದ ಕಾನೂನು ಹೋರಾಟವೊಂದರಲ್ಲೂ ಶ್ರೀನಿವಾಸ್ ಪ್ರಸಾದ್ ಗೆದ್ದಿದ್ದರು. ಕೊಲೆಗೆ ಈ ಎಲ್ಲವೂ ಕಾರಣವಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರಾದರೂ ಮತ್ತಷ್ಟು ತನಿಖೆ ನಡೆದ ನಂತರವಷ್ಟೇ ಸತ್ಯ ಹೊರಬೀಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+