ಪ್ರತಾಪ್ ಸಿಂಹ ಬಂಧನ : ಬೆಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಪ್ರತಿಭಟನೆ
ಬೆಂಗಳೂರು, ಡಿಸೆಂಬರ್ 04 : ಹುಣಸೂರಿನಲ್ಲಿ ಹನುಮ ಮಾಲಾ ಧಾರಿಗಳ ಮೇಲೆ ಲಾಠಿ ಝಳಪಿಸಿ ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸಿದ ಪೊಲೀಸ್ ಅತಿರೇಕದ ಕ್ರಮ ಖಂಡಿಸಿ ಬೆಂಗಳೂರು ಬಿಜೆಪಿ ಯುವ ಮೋರ್ಚಾ ಕಾರ್ಯರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಪ್ತಗಿರಿ ಗೌಡ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಹುಣಸೂರಿನಲ್ಲಿ ನಿಷೇಧಾಜ್ಞೆ ಮಧ್ಯೆಯೂ ಹನುಮ ಜಯಂತಿ ಮೆರವಣಿಗೆಗೆ ಮುಂದಾದ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಭಾನುವಾರ ತಡೆದಿದ್ದು, ಮೆರವಣಿಗೆಗೆ ಹೊರಡುವ ಮುನ್ನವೇ ಭಕ್ತರು ಹಾಗೂ ಸಂಸದಪ್ರತಾಪ್ ಸಿಂಹ ಅವರನ್ನು ಬಂಧಿಸಲಾಗಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ನೇತೃತ್ವದಲ್ಲಿ ಬೆಳಗ್ಗೆಯೇ ಕಾರ್ಯಾಚರಣೆ ನಡೆಸಿ, ಹನುಮ ಭಕ್ತರನ್ನು ವಶಕ್ಕೆ ಪಡೆದಿದ್ದರು. ಮೆರವಣಿಗೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಂಸದ ಪ್ರತಾಪ್ ಸಿಂಹ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದರು. ಹನುಮ ಜಯಂತಿಯ ಮೆರವಣಿಗೆಗೆ ಸಿದ್ಧವಾಗಿದ್ದ ಐವತ್ತಕ್ಕೂ ಅಧಿಕ ಭಕ್ತರನ್ನು ಕೂಡ ಬಂಧಿಸಲಾಗಿತ್ತು.
ಇನ್ನು ಹನುಮಜಯಂತಿ ಮೆರವಣಿಗೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ಬಂಧಿಸಲು ಮುಂದಾದಾಗ ವೇಗವಾಗಿ ಕಾರು ಡ್ರೈವಿಂಗ್ ಮಾಡಿದ್ದರು.

ಪ್ರತಾಪ್ ಸಿಂಹ ಅತ್ಯಂತ ವೇಗದಿಂದ ಕಾರನ್ನು ಪೊಲೀಸರ ಬ್ಯಾರಿ ಕೇಡ್ ಮೇಲೆ ಹತ್ತಿಸಿದ್ದಾರೆ. ಹುಣಸೂರಿನಲ್ಲಿ ಹನುಮ ಜಯಂತಿ ಮೆರವಣಿಗೆಯಲ್ಲಿ ಭಾಗವಹಿಸಲು ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದರು. ಈ ಘಟನೆ ಬಳಿಕ ಮೈಸೂರಿನಲ್ಲಿಯೇ ಹಮುಮ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ಇಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಾಪ್ ಸಿಂಹ ಬಂಧನದ ವಿರುದ್ಧ ಪ್ರತಿಭಟನೆ ನಡೆಸಿದರು.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಗಂಟೆಗಟ್ಟಲೆ ಕ್ಯೂ ನಿಂತರೂ ಸಿಗದ ಗ್ಯಾಸ್: ಮೊಬೈಲ್ ಟವರ್ ಏರಿ ಆಟೋ ಚಾಲಕನ ಆಕ್ರೋಶ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications