ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪುಟ ವಿಸ್ತರಣೆ: ಯಡಿಯೂರಪ್ಪ, ಬಿಎಲ್ ಸಂತೋಷ್ ಮಹತ್ವದ ಭೇಟಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 16: ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಹೊಸ್ತಿಲಲ್ಲಿರುವಾಗಲೇ ಬಿಜೆಪಿಯ ಸಂಘಟನಾ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಸೋಮವಾರ ಬೆಳಗ್ಗೆ ಸಿಎಂ ನಿವಾಸ ಧವಳಗಿರಿಯಲ್ಲಿ ಬಿಎಲ್ ಸಂತೋಷ್ ಭೇಟಿ ಕೊಟ್ಟಿದ್ದರು.ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಳಿಕ ಸಂತೋಷ್ ಮೊದಲ ಬಾರಿಗೆ ಯಡಿಯೂರಪ್ಪನವರನ್ನ ಭೇಟಿಯಾಗಿದ್ದಾರೆ.

ಉಮೇಶ್ ಕತ್ತಿ ಸಚಿವ ಸ್ಥಾನಕ್ಕೆ ಕೊಕ್ಕೆ ಇಟ್ಟ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಉಮೇಶ್ ಕತ್ತಿ ಸಚಿವ ಸ್ಥಾನಕ್ಕೆ ಕೊಕ್ಕೆ ಇಟ್ಟ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ

ಸಚಿವ ಸಂಪುಟ ವಿಸ್ತರಣೆಯ ಹೊಸ್ತಿಲ್ಲೇ ಬಿಎಸ್ ವೈ ಮತ್ತು ಸಂತೋಷ್ ಭೇಟಿ ಮಹತ್ವ ಪಡೆದುಕೊಂಡಿದೆ.ಸುಮಾರು 20 ನಿಮಿಷಗಳ ಕಾಲ ಯಡಿಯೂರಪ್ಪ ಅವರ ಜೊತೆ ಸಂತೋಷ್ ಮಾತುಕತೆ ನಡೆಸಿದ್ದಾರೆ. ಸಂಕ್ರಾಂತಿ ಬಳಿಕವೇ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನುವ ಮಹತ್ವದ ಸುದ್ದಿ ಹೊರಬಿದ್ದಿದೆ.

BL Santhosh Meet CM Yediyurappa

ಹದಿನೈದು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಹೊರಬಂದ ಬಳಿಕ ಸಂಪು ವಿಸ್ತರಣೆಯೇ ದೊಡ್ಡ ತಲೆನೋವಾಗಿ ಹೋಗಿತ್ತು. ಅನರ್ಹ ಶಾಸಕರಿಂದಲೇ ಸರ್ಕಾರ ರಚನೆಯಾಗಿದೆ ಎಂದು ಅವರಿಗೆ ಸಚಿವ ಸ್ಥಾನ ನೀಡಿದರೆ ಮೂಲ ಬಿಜೆಪಿಗರು ಮುನಿಸಿಕೊಳ್ಳುತ್ತಾರೆ ಎನ್ನುವ ತಲೆನೋವು ಕೂಡ ಇನ್ನೂ ಮುಂದುವರೆದಿದೆ.

English summary
BJP General Secretary BL Santhosh Visited CM BS Yediyurappa Residence . And discussed about Cabinet Expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X