ಆ ಪೋಟೋ ಕಳಿಸ್ತೀನಿ ಅಂದ ಮಾತ್ರಕ್ಕೆ 1.25 ಕೋಟಿ ರೂ. ಕೊಟ್ಟ ಮಹಿಳೆ!
ಬೆಂಗಳೂರು: ಮಹಿಳೆಗೆಯೊಬ್ಬರಿಗೆ ಅಶ್ಲೀಲ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಬಿಡುವುದಾಗಿ ಹೆದರಿಸಿ1.25 ಕೋಟಿ ರೂಪಾಯಿ ಸುಲಿಗೆ ಮಾಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಈ ಸಂಬಂಧ ಕೇಸು ದಾಖಲಿಸಿಕೊಂಡಿರುವ ವೈಟ್ ಫೀಲ್ಡ್ ಪೊಲೀಸರು ಆರೋಪಿಗಳಾದ ಮಹೇಶ್ ಹಾಗೂ ಅಪರ್ಣ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ವಿವಾಹ ಪೂರ್ವ ಸಂಬಂಧ !
ವೈಟ್ ಫೀಲ್ಡ್ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ಹತ್ತು ವರ್ಷಗಳ ಹಿಂದೆಯೇಮದುವೆಯಾಗಿದ್ದು, ಎಂಟು ವರ್ಷದ ಮಗನಿದ್ದಾನೆ.

ಮದುವೆಗೂ ಮುನ್ನ ಮಹಿಳೆ, ಯುವಕನೊಬ್ಬನನ್ನು ಪ್ರೀತಿಸುತ್ತಿದ್ದರು. ಮನೆಯವರು ಒಪ್ಪದಿದ್ದರಿಂದ ಮದುವೆ ಆಗಿರಲಿಲ್ಲ ಎನ್ನಲಾಗಿದೆ.
ಅದೇ ಯುವಕನ ಹೆಸರಿನಲ್ಲಿ ಮಹಿಳೆಗೆ ಸಂದೇಶ ಕಳುಹಿಸಿದ್ದ ಆರೋಪಿ, ಆತ್ಮಿಯವಾಗಿ ಮಾತನಾಡಿದ್ದರು. ಇತ್ತೀಚೆಗೆ ಮಹಿಳೆ ಮೊಬೈಲ್ ಗೆ ಸಂದೇಶ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ನಿಮ್ಮ ಅಶ್ಲೀಲ ಫೋಟೊಗಳು ನನ್ನ ಬಳಿ ಇದೆ. ನಾನು ಕೇಳಿದಷ್ಟು ಹಣವನ್ನು ಅಪರ್ಣಾ ಎಂಬುವರ ಖಾತೆಗೆ ವರ್ಗಾವಣೆ ಮಾಡಬೇಕು. ತಪ್ಪಿದರೆ, ಫೋಟೊ ಹಾಗೂ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದಾಗಿ ಹೆದರಿಸಿದ್ದ.
ಆರೋಪಿ ಖಾತೆಗೆ ಹಣ ವರ್ಗ
ಪ್ರತಿಷ್ಟಿತ ಕುಟುಂಬಕ್ಕೆ ಸೇರಿದ್ದ ಮಹಿಳೆ ಹೆದರಿ 1.25 ಕೋಟಿ ಹಣವನ್ನು ಆರೋಪಿ ಖಾತೆಗೆ ವರ್ಗಾಯಿಸಿದ್ದರು ಎನ್ನಲಾಗಿದೆ.
ಇಷ್ಟಾಗಿಯೂ ಮತ್ತೆ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ನಡೆದ ಘಟನೆಯನ್ನು ಪತ್ನಿ ತನ್ನ ಪತಿ ಬಳಿ ಹೇಳಿಕೊಂಡಿದ್ದು, ಪತಿಯೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿವಾಹಕ್ಕಿಂತಲೂ ಮೊದಲು ಮಹಿಳೆ ಯುವಕನನ್ನು ಪ್ರೀತಿಸುತ್ತಿದ್ದ ವಿಷಯ ತಿಳಿದುಕೊಂಡು ಆತನ ಹೆಸರಿನಲ್ಲಿ ಕೃತ್ಯ ಎಸಗಿರುವುದು ಪ್ರಾಥಮಿಕ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಮತ್ತಷ್ಟು ಜನರಿಗೆ ಇದೇ ರೀತಿ ಬ್ಲಾಕ್ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ವೈಟ್ ಫೀಲ್ಡ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications