ಆ ಪೋಟೋ ಕಳಿಸ್ತೀನಿ ಅಂದ ಮಾತ್ರಕ್ಕೆ 1.25 ಕೋಟಿ ರೂ. ಕೊಟ್ಟ ಮಹಿಳೆ!
ಬೆಂಗಳೂರು: ಮಹಿಳೆಗೆಯೊಬ್ಬರಿಗೆ ಅಶ್ಲೀಲ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಬಿಡುವುದಾಗಿ ಹೆದರಿಸಿ1.25 ಕೋಟಿ ರೂಪಾಯಿ ಸುಲಿಗೆ ಮಾಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಈ ಸಂಬಂಧ ಕೇಸು ದಾಖಲಿಸಿಕೊಂಡಿರುವ ವೈಟ್ ಫೀಲ್ಡ್ ಪೊಲೀಸರು ಆರೋಪಿಗಳಾದ ಮಹೇಶ್ ಹಾಗೂ ಅಪರ್ಣ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ವಿವಾಹ ಪೂರ್ವ ಸಂಬಂಧ !
ವೈಟ್ ಫೀಲ್ಡ್ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ಹತ್ತು ವರ್ಷಗಳ ಹಿಂದೆಯೇಮದುವೆಯಾಗಿದ್ದು, ಎಂಟು ವರ್ಷದ ಮಗನಿದ್ದಾನೆ.

ಮದುವೆಗೂ ಮುನ್ನ ಮಹಿಳೆ, ಯುವಕನೊಬ್ಬನನ್ನು ಪ್ರೀತಿಸುತ್ತಿದ್ದರು. ಮನೆಯವರು ಒಪ್ಪದಿದ್ದರಿಂದ ಮದುವೆ ಆಗಿರಲಿಲ್ಲ ಎನ್ನಲಾಗಿದೆ.
ಅದೇ ಯುವಕನ ಹೆಸರಿನಲ್ಲಿ ಮಹಿಳೆಗೆ ಸಂದೇಶ ಕಳುಹಿಸಿದ್ದ ಆರೋಪಿ, ಆತ್ಮಿಯವಾಗಿ ಮಾತನಾಡಿದ್ದರು. ಇತ್ತೀಚೆಗೆ ಮಹಿಳೆ ಮೊಬೈಲ್ ಗೆ ಸಂದೇಶ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ನಿಮ್ಮ ಅಶ್ಲೀಲ ಫೋಟೊಗಳು ನನ್ನ ಬಳಿ ಇದೆ. ನಾನು ಕೇಳಿದಷ್ಟು ಹಣವನ್ನು ಅಪರ್ಣಾ ಎಂಬುವರ ಖಾತೆಗೆ ವರ್ಗಾವಣೆ ಮಾಡಬೇಕು. ತಪ್ಪಿದರೆ, ಫೋಟೊ ಹಾಗೂ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದಾಗಿ ಹೆದರಿಸಿದ್ದ.
ಆರೋಪಿ ಖಾತೆಗೆ ಹಣ ವರ್ಗ
ಪ್ರತಿಷ್ಟಿತ ಕುಟುಂಬಕ್ಕೆ ಸೇರಿದ್ದ ಮಹಿಳೆ ಹೆದರಿ 1.25 ಕೋಟಿ ಹಣವನ್ನು ಆರೋಪಿ ಖಾತೆಗೆ ವರ್ಗಾಯಿಸಿದ್ದರು ಎನ್ನಲಾಗಿದೆ.
ಇಷ್ಟಾಗಿಯೂ ಮತ್ತೆ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ನಡೆದ ಘಟನೆಯನ್ನು ಪತ್ನಿ ತನ್ನ ಪತಿ ಬಳಿ ಹೇಳಿಕೊಂಡಿದ್ದು, ಪತಿಯೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿವಾಹಕ್ಕಿಂತಲೂ ಮೊದಲು ಮಹಿಳೆ ಯುವಕನನ್ನು ಪ್ರೀತಿಸುತ್ತಿದ್ದ ವಿಷಯ ತಿಳಿದುಕೊಂಡು ಆತನ ಹೆಸರಿನಲ್ಲಿ ಕೃತ್ಯ ಎಸಗಿರುವುದು ಪ್ರಾಥಮಿಕ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಮತ್ತಷ್ಟು ಜನರಿಗೆ ಇದೇ ರೀತಿ ಬ್ಲಾಕ್ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ವೈಟ್ ಫೀಲ್ಡ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications