ಸ್ವಾತಂತ್ರ್ಯ ಹೋರಾಟಗಾರ ಬಗ್ಗೆ ವಿಶೇಷ ಬ್ಲಾಗ್ ಇಲ್ಲಿದೆ ಓದಿ!
ಬೆಂಗಳೂರು, ಆಗಸ್ಟ್ 30: ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರನ್ನು ಸ್ಮರಿಸಲು ಪ್ರತ್ಯೇಕವಾದ ಬ್ಲಾಗ್ ಹಾಗೂ ಫೇಸ್ ಬುಕ್ ಪುಟವನ್ನು ಉತ್ಸಾಹಿಗಳು ನಿರ್ಮಿಸಿದ್ದಾರೆ. ಈ ಬಗ್ಗೆ ವಿವರಣೆ ಮುಂದಿದೆ.
ಆಗಸ್ಟ್ ತಿಂಗಳೆಂದರೆ ಭಾರತೀಯರಿಗೆ ವಿಶೇಷವಾದ ತಿಂಗಳು. ಪರಕೀಯರ ಆಳ್ವಿಕೆಯಿಂದ, ದಾಸ್ಯದ ಸಂಕೋಲೆಯಿಂದ ದೇಶ ಬಿಡುಗಡೆಗೊಂಡ ತಿಂಗಳಿದು. ಆದರೆ ಆ ಸ್ವಾತಂತ್ರ್ಯ ಅಷ್ಟು ಸುಲಭಕ್ಕೆ ದಕ್ಕಿದ್ದಲ್ಲ. ಅದರ ಹಿಂದೆ ಲಕ್ಷಾಂತರ ಜನರ ತ್ಯಾಗ ಬಲಿದಾನಗಳಿವೆ. ಸ್ವಾತಂತ್ರ್ಯ ಬಂದ ಅರವತ್ತೇ ವರ್ಷದಲ್ಲಿ ನಾವು ಅವರೆಲ್ಲರನ್ನೂ ಮರೆತೇಬಿಟ್ಟಿದ್ದೇವೆ.[ಸ್ವತಂತ್ರ ಸಂಗ್ರಾಮದಲ್ಲಿ ಬಿಜೆಪಿ, ಆರೆಸ್ಸೆಸ್ ಭಾಗವಹಿಸಿಲ್ಲ: ರಮ್ಯಾ]
ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರನ್ನು ಕನಿಷ್ಠ ಈ ತಿಂಗಳಾದರೂ ನೆನೆಯಬೇಕಾದ್ದು ನಮ್ಮೆಲ್ಲರ ಕರ್ತವ್ಯ ಅಲ್ವಾ?. ಹಾಗಾಗಿ ಕಳೆದ ಆಗಸ್ಟ್ 1 ರಿಂದ ವಾಟ್ಸಾಪ್ ಹಾಗೂ ಫೇಸ್ ಬುಕ್ ನಲ್ಲಿ 'ಸುಮ್ಮನೇ ಬರಲಿಲ್ಲ ಸ್ವಾತಂತ್ರ್ಯ - ದಿನಕ್ಕೊಬ್ಬರು ದೇಶಭಕ್ತರ ಸ್ಮರಣೆ' ಯ ಎಂಬ ಸರಣಿಯನ್ನು ನಡೆಸುತ್ತಿದ್ದೇನೆ. ಬಹುತೇಕರಿಗೆ ಗೊತ್ತೇ ಇಲ್ಲದ ಅಜ್ಞಾತ ಬಲಿದಾನಿಗಳನ್ನು ಸ್ಮರಿಸುವ ಪ್ರಯತ್ನವಿದು.

ವಿದುರಾಶ್ವತ್ಥದ ಬಲಿದಾನಿಗಳು, ಕಾರ್ನಾಡ ಸದಾಶಿವರಾಯರು, ಮೈಲಾರ ಮಹಾದೇವ, ದೋಂಡಿಯಾ ವಾಘ್, ಹಲಗಲಿಯ ಬೇಡರು, ಸಂಗೊಳ್ಳಿ ರಾಯಣ್ಣ ಮುಂತಾದ ಕನ್ನಡ ನೆಲದ ವೀರರೂ ಸೇರಿದಂತೆ ಇಲ್ಲಿಯವರೆಗಿನ 24 ದೇಶಭಕ್ತರ ಕುರಿತ ಬರಹಗಳು ಈಗ 'ಭಾರತಪ್ರೇಮಿ ಬ್ಲಾಗ್' ನಲ್ಲಿ ಲಭ್ಯ. ಈ ಬ್ಲಾಗ್ ನ ಬರಹಗಳನ್ನು ಓದಿ, ಓದಿಸಿ,
ಈ ಅಜ್ಞಾತ ಸ್ವಾತಂತ್ರ್ಯ ವೀರರ ಕುರಿತು ಅರಿಯೋಣ. ವಿಶೇಷವಾಗಿ ಮಕ್ಕಳಿಗೆ ಈ ದೇಶಭಕ್ತರ ಕುರಿತು ಹೇಳುವ ಪ್ರಯತ್ನ ಮಾಡೋಣ. ಫೇಸ್ ಬುಕ್ ಪುಟ 'ದೇಶಾಭಿಮಾನಿ' ಯಲ್ಲೂ ಈ ಬರಹಗಳು ಲಭ್ಯವಿವೆ. ಈ ಸರಣಿ ಆಗಸ್ಟ್ 31 ರವರೆಗೆ ಪ್ರತಿದಿನ ಮುಂದುವರೆಯಲಿದೆ. ಈ ಬರಹಗಳ ಮೂಲಕ ಸ್ವಾತಂತ್ರ್ಯದ ಶ್ರಾವಣ ಅರ್ಥಪೂರ್ಣವಾಗಲಿ.
ಈ ವಿಶೇಷ ಬ್ಲಾಗ್(ಭಾರತಪ್ರೇಮಿ) ಲಿಂಕ್ ಇಲ್ಲಿದೆ ಕ್ಲಿಕ್ ಮಾಡಿ
ಫೇಸ್ ಬುಕ್ ಪುಟದ ಲಿಂಕ್ ಇಲ್ಲಿದೆ ಕ್ಲಿಕ್
(ಒನ್ ಇಂಡಿಯಾ ಸುದ್ದಿ)
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications