BBMP: ಬೆಂಗಳೂರು ವಿವಿ ಕ್ಯಾಂಪಸ್ನಲ್ಲಿ ತ್ಯಾಜ್ಯ ಸಂಗ್ರಹ ಸ್ಥಗಿತ
ನವೆಂಬರ್ 26, ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಮುಂದಿನ ಜನವರಿಯಿಂದ ಕಸ ಸಂಗ್ರಹಿಸದೇ ಇರಲು ತೀರ್ಮಾನಿಸಿದೆ. ಈ ಸಂಬಂಧ ಬಿಬಿಎಂಪಿ ವಿಶ್ವವಿದ್ಯಾಲಯಕ್ಕೆ ನೋಟಿಸ್ ನೀಡಿದೆ.
ಬೆಂಗಳೂರು ವಿಶ್ವವಿದ್ಯಾಲಯದ (ಜ್ಞಾನಭಾರತಿ) ಎಲ್ಲ ವಿಭಾಗಗಳು ಸೇರಿದಂತೆ ಸಾವಿರಾರು ವಿದ್ಯಾರ್ಥಿನಿಲಯಗಳಿಂದ ಪ್ರತಿನಿತ್ಯ ಉತ್ಪತ್ತಿಯಾಗುವ ಘನತ್ಯಾಜ್ಯ ಪ್ರತ್ಯೇಕಿಸಲಾಗುತ್ತಿಲ್ಲ. ಉತ್ಪತ್ತಿಯಾಗುವ ಹಸಿ, ಒಣ, ಜೈವಿಕ ಎಂದು ಪ್ರತ್ಯೇಕವಾಗಿ ವಿಂಗಡಿಸಬೇಕು. ಆದರೆ ವಿಶ್ವವಿದ್ಯಾಲಯ ಈ ರೀತಿ ತ್ಯಾಜ್ಯ ಸಂಸ್ಕರಣೆಗೆ ಯಾವುದೇ ಕ್ರಮ ಕೈಗೊಳ್ಳದೇ ಹಾಗೇಯೇ ಬಿಡುತ್ತಿದೆ. ಈ ಕಾರಣದಿಂದ ಘನತ್ಯಾಜ್ಯ ಸಂಗ್ರಹ ಸೇವೆಯನ್ನು ಬಿಬಿಎಂಪಿ ಮುಂದಿನ ವರ್ಷದಿಂದ ನಿಲ್ಲಿಸಲಿದೆ. ಈ ಕುರಿತು ರಾಜರಾಜೇಶ್ವರಿನಗರ ವಲಯದ ಜಂಟಿ ಆಯುಕ್ತರು ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿಯವರಿಗೆ ಪತ್ರ ಬರೆದಿದ್ದಾರೆ.
ಈ ಹಿಂದೆ ಜ್ಞಾನಭಾರತಿಯಲ್ಲಿ ಕೆಲವೆಡೆ ತ್ಯಾಜ್ಯ ಪ್ರತ್ಯೇಕಿಸದೇ ಹಾಗೆ ಬಿಟ್ಟಿದ್ದ ಕಸದ ರಾಶಿಗೆ ಬೆಂಕಿ ಹಚ್ಚಲಾಗಿತ್ತು. ಈ ಕುರಿತು ಮಾಧ್ಯಮಗಳಲ್ಲಿ ವರದಿಯೂ ಆಗಿತ್ತು. ಅದಾಗಿಯೂ ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡದೇ ನಿರ್ಲಕ್ಷ್ಯ ವಹಿಸಲಾಗಿದೆ.

ವಿದ್ಯಾರ್ಥಿ ನಿಲಯಗಳಲ್ಲಿ ತ್ಯಾಜ್ಯವನ್ನು ವಿಶ್ವವಿದ್ಯಾಲಯದ ಆವರಣದಲ್ಲೇ ಸಂಸ್ಕರಿಸಲು ಸರ್ಕಾರದ ಆದೇಶವಿದ್ದರೂ ಅದನ್ನು ಪಾಲಿಸುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು 2021ರ ಏಪ್ರಿಲ್ನಿಂದಲೂ ಬಿಬಿಎಂಪಿ ಅನೇಕ ಪತ್ರಗಳನ್ನು ವಿಶ್ವವಿದ್ಯಾಲಯಕ್ಕೆ ಕಳುಹಿಸಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ.
ಬಿಬಿಎಂಪಿ ಪತ್ರಗಳಿಗೆ ಸ್ಪಂದನೆ ಇಲ್ಲ
ಆದರೆ ಒಂಬತ್ತು ವಿದ್ಯಾರ್ಥಿನಿಲಯಗಳಿದ್ದು, ಹೆಚ್ಚಿನ ಗಾಡಿಯನ್ನು ಒದಗಿಸಬೇಕು ಎಂದು ಕುಲಸಚಿವರು ಪತ್ರ ಬರೆದಿದ್ದಾರೆ. ಆದರೆ, ಸರ್ಕಾರ ಹಾಗೂ ಬಿಬಿಎಂಪಿ ಸೂಚಿಸಿದಂತೆ ತ್ಯಾಜ್ಯ ಸಂಸ್ಕರಿಸುವ ಘಟಕ ಸ್ಥಾಪನೆ ಬಗ್ಗೆ ಯಾವುದೇ ಮಾಹಿತಿಯನ್ನು ವಿಶ್ವವಿದ್ಯಾಲಯ ಈವರೆಗೂ ನೀಡಿಲ್ಲ.

ವಿಶ್ವವಿದ್ಯಾಲಯ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳು, ಎಂಜಿನಿಯರಿಂಗ್, ಸ್ನಾತಕೋತ್ತರ ವಿಭಾಗ ಹಾಗೂ ಆಡಳಿತ ವಿಭಾಗದಿಂದ ದಿನನಿತ್ಯ ಹೆಚ್ಚಿನ ತ್ಯಾಜ್ಯ ಸಂಗ್ರಹವಾಗುತ್ತಿದೆ. ಇದು ಬೃಹತ್ ಪ್ರಮಾಣದ ತ್ಯಾಜ್ಯ ಉತ್ಪಾದಕ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ವಿಶ್ವವಿದ್ಯಾಲಯ ಆವರಣದಲ್ಲೇ ತ್ಯಾಜ್ಯ ಪ್ರತ್ಯೇಕಿಸಲು, ಸಮರ್ಪಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕಳೆದ ಮಾರ್ಚ್ನಲ್ಲಿ ಆರ್ಆರ್ ನಗರದ ಜಂಟಿ ಆಯುಕ್ತರು ಸೂಚಿಸಿದ್ದರು. ಆದರೆ ಕಸ ಪ್ರತ್ಯೇಕಿಸದ ಕಾರಣ ಜನವರಿಯಿಂದ ತ್ಯಾಜ್ಯ ಸಂಗ್ರಹಿಸದಿರಲು ಬಿಬಿಎಂಪಿ ತಿಳಿಸಿದೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications