ಬೆಂಗಳೂರಿನ 'ಮಂತ್ರಿ' ಮಾಲ್ ಮತ್ತೆ ಬೀಗ: ಲೈಸೆನ್ಸ್ ರದ್ದುಗೊಳಿಸಿದ ಬಿಬಿಎಂಪಿ
ಬೆಂಗಳೂರು, ಮಾರ್ಚ್ 16: ಬಹಳ ಕಾಲದಿಂದಲೂ ಕೋಟಿ ಕೋಟಿ ತೆರಿಗೆ ಹಣ ಪಾವತಿಸದೇ ಬಾಕಿ ಉಳಿಸಿಕೊಂಡಿದ್ದ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೀಗ ಜಡಿದಿದೆ. ಲೈಸೆನ್ಸ್ ರದ್ದುಗೊಳಿಸಿದೆ ಎಂದು ತಿಳಿದು ಬಂದಿದೆ.
ಹೌದು, ಶನಿವಾರ ಬೆಳಗ್ಗೆಯೇ ಮಂತ್ರಿ ಮಾಲ್ ಗೆ ತೆರಳಿದ ಬಿಬಿಎಂಪಿ ಅಧಿಕಾರಿಗಳು ತೆರಿಗೆ ಪಾವತಿಸದ ಕಾರಣ ಮಾಲ್ ಸೀಲ್ ಮಾಡಿದ್ದಾರೆ. ಮಂತ್ರಿ ಮಾಲ್ ಒಟ್ಟು 32 ಕೋಟಿ ರೂಪಾಯಿ ತೆರಿಗೆ ಕಟ್ಟದೇ ಬಾಕಿ ಉಳಿಸಿಕೊಂಡಿತ್ತು ಎಂದು ಪಾಲಿಕೆ ಮೂಲಗಳು ಮಾಹಿತಿ ನೀಡಿವೆ.

ತೆರಿಗೆ ಬಾಕಿ ಉಳಸಿಕೊಂಡಿದ್ದ ಮಂತ್ರಿ ಮಾಲ್ಗೆ ಬಿಬಿಎಂಪಿ ಒನ್ಟೈಮ್ ಪೇಪೆಂಟ್ಗೆ ಅವಕಾಶ ನೀಡಿತ್ತು. ಆದರೂ ಸಹಿತ ತೆರಿಗೆ ಪಾವತಿಸದೇ ನಿರ್ಲಕ್ಷ್ಯ ವಹಿಸಿತ್ತು. ಹೀಗಾಗಿ ಬಿಬಿಎಂಪಿಯು ಮಾಲ್ ಅನ್ನು ಸೀಲ್ ಮಾಡಿ ಬಾಗಿಲು ಹಾಕಿತು.
ಬುದ್ಧಿ ಕಲಿಯದ ಮಾಲ್
ಈ ಹಿಂದೆಯು ಕೆಲವು ಬಾರಿ ಇದೇ ತೆರಿಗೆ ಬಾಕಿ ಪಾವತಿಸದ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ನಾಲ್ಕು ಬಾರಿ ಮಂತ್ರಿ ಮಾಲ್ಗೆ ಬೀದ್ ಜಡಿದಿತ್ತು. ಆದರೂ ಬುದ್ಧಿ ಕಲಿಯದ ಮಂತ್ರಿ ಮಾಲ್ ಆಡಳಿತ ಮಂಡಳಿ ತನ್ನ ತೆರಿಗೆ ಪಾವತಿಯಲ್ಲಿ ನಿರ್ಲಕ್ಷ್ಯ ಮುಂದುವರೆಸಿತ್ತು.
ಮಾಲ್ ಮುಂದೆ ನೋಟಿಸ್
ಮಂತ್ರಿ ಮಾಲ್ನ ಮುಖ್ಯ ದ್ವಾರಕ್ಕೆ ಬೀಗ ಹಾಕುವುದರೊಂದಿಗೆ ಬಿಬಿಎಂಪಿ ನೋಟಿಸ್ ಸಹ ಅಂಟಿಸಲಾಗಿದೆ. ಬಿಬಿಎಂಪಿ ಕಾಯ್ದೆ 2020ರ ಕಲಂ 156 ಹಾಗೂ ದಿನಾಂಕ 2023ರ ಡಿಸೆಂಬರ್ 06 ರ ಸುತ್ತೊಲೆ ಪ್ರಕಾರ, ನಿಮ್ಮ ವ್ಯಾಪಾರಕ್ಕೆ ಸಂಬಂಧಿಸಿದಂತೆ ನೀಡಿದ್ದ ಪರವಾನಗಿಯನ್ನು ಅಮಾನತು ಮಾಡಲಾಗಿದೆ.

ಬಿಬಿಎಂಪಿ ಆದೇಶ ಮೇರೆಗೆ ಬಾಕಿ ಆಸ್ತಿ ತೆರಿಗೆಗಳನ್ನು ಪಾವತಿಸದ ಕಾರಣಕ್ಕಾಗಿ ಆಸ್ತಿಯನ್ನು ಸೀಲ್ ಮಾಡಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ಮಾಲ್ ಮುಂದೆ ಬ್ಯಾನರ್ ಅಳಡಿಸಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications