ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಸಂಚಾರಕ್ಕೆ 2 ವರ್ಷ ಕಾಯ್ಬೇಕಂತೆ!
Recommended Video

ಬೆಂಗಳೂರು: ಎರಡನೇ ಹಂತದ ಕನಕಪುರ ರಸ್ತೆ - ಯಲಚೇನಹಳ್ಳಿ ಮತ್ತು ನಾಯಂಡಹಳ್ಳಿ-ಕೆಂಗೇರಿ ನಡುವೆ ನಮ್ಮ ಮೆಟ್ರೋ ಕಾಮಗಾರಿ 2020ಕ್ಕೆ ಕೊನೆಗೊಂಡು ಸಂಚಾರಕ್ಕೆ ಮುಕ್ತವಾಗಲಿದೆ ಎಂದು ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ತಿಳಿಸಿದ್ದಾರೆ.
ಎರಡನೇ ಆರು ಬೋಗಿಗಳ ಮೆಟ್ರೋ ರೈಲು ಉದ್ಘಾಟನಎ ಬಳಿಕ ಮಾತನಾಡಿದ ಅವರು, ಈಗಾಗಲೇ 2019ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು ಹಲವು ಕಾರಣಗಳಿಂದಾಗಿ 2020ಕ್ಕೆ ಕಾಮಗಾರಿ ಮುಗಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎರಡೂ ಮಾರ್ಗದಲ್ಲೂ ಒಂದೇ ಸಮಯದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಹಸಿರು ಮಾರ್ಗದಲ್ಲಿ ಆರು ಬೋಗಿಗಳ ಮಟ್ರೋ ಸಂಚಾರ ಸಧ್ಯಕ್ಕಿಲ್ಲ
ಬೈಯಪ್ಪನಹಳ್ಳಿ- ನಾಯಂಡಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆಯು ಹೆಚ್ಚಾಗಿರುವುದರಿಂದ ಸಿಕ್ಸ್ ಕಾರ್ ಗಳ ಒಟ್ಟು 5 ರೈಲುಗಳ ಸಂಚಾರ ಆರಂಭಿಸಿದ ಬಳಿಕವಷ್ಟೇ ನಾಗಸಂದ್ರ-ಯಲಚೇನಹಳ್ಳಿ ನಡುವಣ ಹಸಿರು ಮಾರ್ಗದಲ್ಲಿ ಸಿಕ್ಸ್ ಕಾರ್ ರೈಲು ಸಂಚಾರ ಆರಂಭಿಸಲಾಗುವುದು ಎಂದರು.

ನವೆಂಬರ್ ನಲ್ಲಿ ಮೂರು ಸಿಕ್ಸ್ ಕಾರ್ಸ್ ಮೆಟ್ರೋ
ಇನ್ನು ಮುಂದೆ ಪ್ರತಿ ತಿಂಗಳು ಒಂದು ಅಥವಾ ಎರಡು ಸಿಕ್ಸ್ ಕಾರ್ ಮೆಟ್ರೊ ಅಳವಡಿಸಲಾಗುತ್ತದೆ. ಮೂರನೇ ಸಿಕ್ಸ್ ಕಾರ್ ಮೆಟ್ರೊ ಇದೇ ಮಾಸಾಂತ್ಯಕ್ಕೆ ಶುರುವಾಗಲಿದೆ ಎಂದರು.

ಪೀಕ್ ಅವಧಿಯಲ್ಲಿ ನೇರಳೆ ಮಾರ್ಗದಲ್ಲಿ 19 ಸಾವಿರ ಮಂದಿ ಪ್ರಯಾಣ
ಬೆಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣದಿಂದ ಮೆಟ್ರೊ ನಿಲ್ದಾಣವರೆಗೆ ಫುಟ್ ಓವರ್ ಬ್ರಿಜ್ ಜನವರಿ ವೇಳೆಗೆ ಪೂರ್ಣ ಗೊಳ್ಳಲಿದೆ. ಯಶವಂತಪುರ ನಿಲ್ದಾಣದಿಂದ ಮೆಟ್ರೊ ವರೆಗೆ ಫುಟ್ ಓವರ್ ಬ್ರಿಜ್ ನಿರ್ಮಾಣ ಡಿಸೆಂಬರ್ ನಲ್ಲಿ ಆರಂಭವಾಗಲಿದೆ ಎಂದರು.
ಹಸಿರು ಮಾರ್ಗದಲ್ಲಿ ಬೆಳಗ್ಗೆ 9 ರಿಂದ 10.30ರ ಅವಧಿಯಲ್ಲಿ ಸರಿಸುಮಾರು 9 ಸಾವಿರ ಪ್ರಯಾಣಿಕರು ಸಂಚರಿಸಿದರೆ ನೇರಳೆ ಮಾರ್ಗದಲ್ಲಿ 19 ಸಾವಿರ ಪ್ರಯಾಣಿಕರು ಸಂಚರಿಸುತ್ತಾರೆ. ಹೀಗಾಗಿ ಮೊದಲು ಸಿಕ್ಸ್ ಕಾರ್ ರೈಲುಗಳ ಸೇವೆಯನ್ನು ನೇರಳೆ ಮಾರ್ಗದಲ್ಲಿ ವಿಸ್ತರಿಸಿ, ಎರಡನೇ ಹಂತದಲ್ಲಿ ಹಸಿರು ಮಾರ್ಗದಲ್ಲಿ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಕನಕಪುರ- ಯಲಚೇನಹಳ್ಳಿ ಮೆಟ್ರೋ ಮಾರ್ಗ 2020ಕ್ಕೆ ಪೂರ್ಣ
ಕನಕಪುರ -ಯಲಚೇನಹಳ್ಳಿ ಎರಡನೇ ಹಂತದ ಮೆಟ್ರೋ ಕಾಮಗಾರಿ ಇನ್ನಷ್ಟು ತಡವಾಗಲಿದ್ದು, 2020ರವರೆಗೆ ಕಾಯಲೇ ಬೇಕು ಎನ್ನುತ್ತಿದ್ದಾರೆ ಮೆಟ್ರೋ ಎಂಡಿ, ಈಗಾಗಲೇ ತಿಳಿಸಿರುವಂತೆ 2019ರ ಮಾರ್ಚ್ ವೇಳೆಗೆ ಎಲ್ಲಾ ಕಾಮಗಾರಿ ಅಂತ್ಯಗೊಳ್ಳಬೇಕಿತ್ತು ಆದರೆ ಆ ಸಮಯದಲ್ಲಿ ಮುಗಿಯುವುದು ಕಷ್ಟ 2019ರ ಅಂತ್ಯದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, 2020ರ ವೇಳೆ ಸಂಚಾರ ಆರಂಭಗೊಳ್ಳಲಿದೆ ಎಂದು ಹೇಳಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ









Click it and Unblock the Notifications