Lalbagh Flower Show .ಬೆಂಗಳೂರು ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಜ.26ಕ್ಕೆ ಮೆಟ್ರೋ ಪ್ರಯಾಣಿಕರಿಗೆ ಪೇಪರ್ ಟಿಕೆಟ್
ಬೆಂಗಳೂರು, ಜನವರಿ 23: ಗಣರಾಜ್ಯೋತ್ಸವ (ಜ.26) ಪ್ರಯುಕ್ತ ಬೆಂಗಳೂರಿನ ಲಾಲ್ಬಾಗ್ ಉದ್ಯಾನಕ್ಕೆ '213ನೇ ಫಲಪುಷ್ಪ ಪ್ರದರ್ಶನ' ಕಣ್ತುಂಬಿಕೊಳ್ಳಲು ಬರುವವರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ (BMRCL) ಪೇಪರ್ ಟಿಕೆಟ್ ಪರಿಚಯಿಸಿದೆ.
ಜನವರಿ 26ರಂದು ಗುರುವಾರ ಒಂದು ದಿನ ಲಾಲ್ ಬಾಗ್ ಉದ್ಯಾನಕ್ಕೆ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಅಲ್ಲಿನ ಜನದಟ್ಟಣೆ ಕಡಿಮೆ ಮಾಡಲು ಹಾಗೂ ಉದ್ಯಾನಕ್ಕೆ ಫಲಪುಷ್ಪ ಪ್ರದರ್ಶನ ನೋಡಲು ಬರುವವರಿಗೆ ಸಹಾಯಾರ್ಥವಾಗಿ ಬಿಎಂಆರ್ಸಿಎಲ್ ಪೇಪರ್ ಟಿಕೆಟ್ ನೀಡಲಿದೆ.
ಅಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 08 ಗಂಟೆವರೆಗೆ ಲಾಲ್ ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು 30ರೂ. ನೀಡಿ ಪೇಪರ್ ಟಿಕೆಟ್ ಪಡೆದು ಸಂಚರಿಸಬಹುದಾಗಿದೆ. ಈ ವ್ಯವಸ್ಥೆ ಸದರಿ ದಿನ ಮಾತ್ರ ಮಾನ್ಯವಾಗಿರುತ್ತದೆ. ಜೊತೆಗೆ ಬೆಳಗ್ಗೆ 08 ಗಂಟೆಯಿಂದ ಸಂಜೆ 06 ಗಂಟೆವರೆಗೆ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಈ ಪೇಪರ್ ಟಿಕೆಟ್ ಖರೀದಿಸಬಹುದಾಗಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರೋ ಪ್ರಯಾಣಿಕರು ಲಾಲ್ ಬಾಗ್ ನಿಲ್ದಾಣದ ಎಎಫ್ಸಿ ಗೇಟ್ ಪ್ರವೇಶಿಸಲು ಮತ್ತು ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಈ ಪೇಪರ್ ಟಿಕೆಟ್ ಹಾಜರುಪಡಿಸುವುದು ಕಡ್ಡಾಯವಾಗಿರುತ್ತದೆ. ಸಾರ್ವಜನಿಕರು ಈ ಸೇವೆಯ ಸದುಪರಯೋಗ ಮಾಡಿಕೊಳ್ಳುವಂತೆ ಬಿಎಂಆರ್ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಗಣರಾಜ್ಯೋತ್ಸವ (ಜ.26) ಪ್ರಯುಕ್ತ ರಾಜ್ಯ ತೋಟಗಾರಿಕೆ ಇಲಾಖೆಯು ಬೆಂಗಳೂರಿನ ಲಾಲ್ಬಾಗ್ ಉದ್ಯಾನದಲ್ಲಿ ಜನವರಿ 20ರಿಂದ 31ರವರೆಗೆ ಹನ್ನೊಂದು ದಿನಗಳ ಕಾಲ 'ಫಲಪುಷ್ಪ ಪ್ರದರ್ಶನ' ನಡೆಸುತ್ತಿದೆ. ಸುಮಾರು 15ಲಕ್ಷಕ್ಕೂ ಹೆಚ್ಚು ಮಂದಿ ಉದ್ಯಾನಕ್ಕೆ ಬರುವ ನಿರೀಕ್ಷೆ ಇದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದ್ದಾರೆ. ಹೀಗಾಗಿ ಲಾಲ್ ಮೆಟ್ರೋ ನಿಲ್ದಾಣ, ಉದ್ಯಾನದ ಸುತ್ತಮುತ್ತಲಿನ ರಸ್ತರೆಗಳಲ್ಲಿ ಜನದಟ್ಟಣೆ ಕಡಿಮೆ ಮಾಡಲು, ಸರಿತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಿ ಸಮಯ ಉಳಿತಾಯ ಮಾಡಲು ಬೆಂಗಳೂರು ಮೆಟ್ರೋ ರೈಲ್ ಕಾಪೋರೇಷನ್ ಲಿಮಿಟೆಡ್ ಈ ಪೇಪರ್ ಟಿಕೆಟ್ ಪರಿಚಯಿಸಿದೆ.
-
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications