BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
ಬೆಂಗಳೂರು, ಏಪ್ರಿಲ್, 19: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ಪಾದಚಾರಿ ಸೇತುವೆ ನಿರ್ಮಾಣ ಮಾಡಲು ಬಿಎಂಆರ್ಸಿಎಲ್ ಘೋಷಣೆ ಮಾಡಿದೆ. ಈ ಯೋಜನೆಯು ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಹಾಗಾದರೆ ಇದಕ್ಕೆ ತಗಲುವ ವೆಚ್ಚ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈ ಮೇಲ್ಸೇತುವೆ ನಿರ್ಮಾಣವಾದರೆ, ಮೆಟ್ರೋ ಪ್ರಯಾಣಿಕರು ಮತ್ತು ಪಾದಚಾರಿಗಳಿಗೆ ತುಂಬಾ ಸಹಾಯ ಆಗಲಿದೆ. ಪಾದಚಾರಿ ಸೇತುವೆಯು ಹೆದ್ದಾರಿಯ ಎರಡು ಬದಿಗಳ ನಡುವೆ ಸಂಪರ್ಕ ಕಲ್ಪಿಸುತ್ತದೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಮತ್ತು ಇಲ್ಲಿನ ಸ್ತಳೀಯ ನಿವಾಸಿಗಳಿಗೆ ಯಾವುದೇ ತೊಂದರೆ ಇಲ್ಲದಂತೆ ಹೆದ್ದಾರಿಯ ಒಂದು ಕಡೆಯಿಂದ ಮತ್ತೊಂದೆಡೆಗೆ ಹೋಗಲು ಸಹಾಯ ಆದಂತಾಗುತ್ತದೆ.

ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು, ಎಸಿಎಸ್ ಎಂಜಿನಿಯರಿಂಗ್ ಕಾಲೇಜು, ರಾಜರಾಜೇಶ್ವರಿ ದಂತ ಕಾಲೇಜು, ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಆಸ್ಪತ್ರೆ, ಮತ್ತು ಐಸಿಎಫ್ಎಐ ಬಿಸಿನೆಸ್ ಸ್ಕೂಲ್ನ ವಿದ್ಯಾರ್ಥಿಗಳಿಗೆ ಈ ಸೇತುವೆ ತುಂಬಾ ಪ್ರಯೋಜನಾ ಆಗಲಿದೆ.
ಇನ್ನು ಇಲ್ಲಿನ ಮೆಟ್ರೋ ನಿಲ್ದಾಣಕ್ಕೆ ಬೆಳಗ್ಗೆಯಿಂದ ಸಂಜೆವರೆಗೆ ಸುಮಾರು 10,000ಕ್ಕೂ ಹೆಚ್ಚು ಜನರು ಭೇಟಿ ನೀಡುತ್ತಲೇ ಇರುತ್ತಾರೆ. ಸೇತುವೆ ನಿರ್ಮಾಣವಾದರೆ, ಪ್ರಯಾಣಿಕರಿಗೆ ತುಂಬಾ ಪ್ರಯೋಜನಾಕಾರಿಯಾದಂತಾಗುತ್ತದೆ.
ಇನ್ನು ಮೇಲ್ಸೇತುವೆಯು ₹2.22 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗುತ್ತಿದೆ. ಇದು ಮೆಟ್ಟಿಲುಗಳು ಮತ್ತು ಲಿಫ್ಟ್ಗಳನ್ನು ಒಳಗೊಂಡಿರುತ್ತದೆ. ಈ ಮೂಲಸೌಕರ್ಯವು ಮೆಟ್ರೋ ನಿಲ್ದಾಣದಿಂದ ಪ್ರಯಾಣಿಸುವವರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಪಾದಚಾರಿಗಳಿಗೆ ಸುರಕ್ಷತೆ ದೃಷ್ಟಿಯಿಂದ ತುಂಬಾ ಪ್ರಯೋಜನಾವಾಗಲಿದೆ ಎಂದು ಬಿಎಂಆರ್ಸಿಎಲ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಹೇಳಿದ್ದೇನು?: ಈ ಹೆದ್ದಾರಿಯ ಒಂದು ಕಡೆಯಿಂದ ಮತ್ತೊಂದೆಡೆಗೆ ದಾಟುವುದೇ ತುಂಬಾ ಕಷ್ಟಕರವಾಗಿತ್ತು. ಇನ್ನು ಈ ಸೇತುವೆ ನಿಇರ್ಮಾಣ ಆದರೆ ಸುರಕ್ಷಿತವಾಗಿ ದಾಟಲು ನಮಗೆ ತುಂಬಾ ಸುಲಭವಾಗುತ್ತದೆ ಎಂದು ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.
ಇಲ್ಲಿನ ಸಮೀಪದ ಕಾಲೇಜೊಂದರ ವಿದ್ಯಾರ್ಥಿನಿಯೊಬ್ಬರು ಮಾತನಾಡಿ, ಈ ಸೇತುವೆಯು ವಿಶೇಷವಾಗಿ ಸಂಚಾರ ದಟ್ಟಣೆ ಸಂದರ್ಭದಲ್ಲಿ ನಮ್ಮ ಸಮಯವನ್ನು ಉಳಿಸುತ್ತದೆ ಮತ್ತು ಸುರಕ್ಷತೆಯನ್ನು ಸುಧಾರಿಸುತ್ತದೆ. ಪ್ರಸ್ತುತ, ಹೆಚ್ಚೆಚ್ಚು ವಾಹನಗಳು ಬಿಡುವಿಲ್ಲದೆ ಬುರುವುದರಿಂದ ನಾವು ರಸ್ತೆ ದಾಟಲು ತುಂಬಾ ಕಷ್ಟ ಪಡುವಂತಾಗಿದೆ ಎಂದು ಹೇಳಿದ್ದಾರೆ.
"ಹೆಚ್ಚಿನ ಸಂಚಾರ ದಟ್ಟಣೆಯಿಂದಾಗಿ ಹೆದ್ದಾರಿಯನ್ನು ದಾಟುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇನ್ನು ಹೊಸ ಸೇತುವೆ ನಿರ್ಮಾವಾದರೆ, ದೊಡ್ಡ ಪರಿಹಾರ ಸಿಕ್ಕಂತಾಗುತ್ತದೆ ಮತ್ತು ನಮ್ಮ ದೈನಂದಿನ ಪ್ರಯಾಣವನ್ನು ಸುಧಾರಿಸಿದಂತಾಗುತ್ತದೆ," ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ ಅಂತಾ ದಿ ಹಿಂದೂ ವರದಿ ಮಾಡಿದೆ. ಈ ಸೇತುವೆಗೆ ಹೆಚ್ಚುವರಿಯಾಗಿ 100 ಮೀಟರ್ ಪಾದಚಾರಿ ಮಾರ್ಗವನ್ನು ನಿರ್ಮಿಸಲಾಗುವುದು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ, ಮೆಟ್ರೊ ನಿಲ್ದಾಣ ಇರುವ ಕಡೆಗೆ ಈ ಸೇತುವೆ ಸಂಪರ್ಕಿಸುತ್ತದೆ ಎಂದು ತಿಳಿದುಬಂದಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications