ಟೆಂಡರ್ ರದ್ದು: ನಾಗವಾರ ನಮ್ಮ ಮೆಟ್ರೋ ಮಾರ್ಗ ಕಾಮಗಾರಿ ಮತ್ತಷ್ಟು ತಡ
ಬೆಂಗಳೂರು,ಫೆಬ್ರವರಿ 06:ಕಾಳೇನ ಅಗ್ರಹಾರ ಹಾಗೂ ನಾಗವಾರ ನಡುವಿನ ಎರಡನೇ ಹಂತದ ನಮ್ಮ ಮೆಟ್ರೋ ಮಾರ್ಗ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಕಾರಣ ಟೆಂಡರ್ ರದ್ದುಪಡಿಸಲಾಗಿದೆ.
ಸಿಂಪ್ಲೆಕ್ಸ್ ಸಂಸ್ಥೆ ಕಲೆನ ಅಗ್ರಹಾರದಿಂದ ನಾಗವಾರ ಮಾರ್ಗದಲ್ಲಿ ಎರಡನೇ ಹಂತದ ಎಲೆವೇಟೆಡ್ ಕಾಮಗಾರಿಯನ್ನು ನಡೆಸುತ್ತಿತ್ತು. ಈ ಮಾರ್ಗ 7.5 ಕಿಲೋ ಮೀಟರ್ ಉದ್ದದ ಕಲೆನ ಅಗ್ರಹಾರದಿಂದ ತಾವರೆಕೆರೆಯವರೆಗೆ ಹೊಂದಿದ್ದು ಕಳೆದ ಜನವರಿ 29ಕ್ಕೆ ರದ್ದುಪಡಿಸಲಾಗಿದೆ.
ನಿಧಾನಗತಿಯಲ್ಲಿ ಸಾಗುತ್ತಿರುವ ಕೆಲಸದಿಂದಾಗಿ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ(ಬಿಎಂಆರ್ ಸಿಎಲ್) ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಗೆ ನೀಡಿದ್ದ 500 ಕೋಟಿ ರೂಪಾಯಿ ಮೌಲ್ಯದ ಗುತ್ತಿಗೆಯನ್ನು ರದ್ದುಗೊಳಿಸಿದೆ.

ಹೆಸರಘಟ್ಟ ಕ್ರಾಸ್ ಹಾಗೂ ಮಾದಾವರ ನಡುವೆ ಕಾಮಗಾರಿ
ಹೆಸರಘಟ್ಟ ಕ್ರಾಸ್ ಮತ್ತು ಮಾದಾವರ ಮಧ್ಯೆ 3 ಕಿಲೋ ಮೀಟರ್ ಗಳ ಹಸಿರು ಮಾರ್ಗದ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಈ ಮಾರ್ಗದಲ್ಲಿ ಮಂಜುನಾಥನಗರ, ಚಿಕ್ಕಬಿದಿರಕಲ್ಲು ಮತ್ತು ಮಾದಾವರಗಳಲ್ಲಿ ನಿಲ್ದಾಣಗಳಿರುತ್ತವೆ.

ಕೆಲಸದ ಪ್ರಗತಿ ಶೂನ್ಯ
ಕಾರ್ಯನಿರ್ವಹಿಸದಿರುವಿಕೆ ಮತ್ತು ಅನುಷ್ಠಾನ ದಿನಾಂಕವು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ರೀಚ್ -6 ಎಲಿವೇಟೆಡ್ ಲೈನ್ ಒಪ್ಪಂದವನ್ನು ಕೊನೆಗೊಳಿಸಲಾಗಿದೆ. 18 ತಿಂಗಳ ಹಿಂದೆ ಇಡೀ ಭೂಮಿಯನ್ನು ಲಭ್ಯಗೊಳಿಸಲಾಗಿದ್ದರೂ, ಇದುವರೆಗಿನ ಕೆಲಸದ ಪ್ರಗತಿಯು ಕೇವಲ 35 ಪ್ರತಿಶತದಷ್ಟಿದೆ. 500 ಕೋಟಿ ರೂ.ಗಳ ಯೋಜನೆಯಲ್ಲಿ ಇದುವರೆಗೆ ಮಾಡಿದ ಕೆಲಸವು ಕೇವಲ 175 ಕೋಟಿ ರೂಗಳದ್ದಾಗಿದೆ ಎಂದು ಬಿಎಂಆರ್ ಸಿಎಲ್ ನಿರ್ದೇಶಕ ಅಜಯ್ ಸೇಠ್ ತಿಳಿಸಿದ್ದಾರೆ.

ಮಾರ್ಚ್ ಅಂತ್ಯಕ್ಕೆ ಗುತ್ತಿಗೆ
ಸಿಲ್ಕ್ ಬೋರ್ಡ್ ಹಾಗೂ ಕೆಆರ್ ಪುರಂ ಎರಡನೇ ಹಂತದ ನಮ್ಮ ಮೆಟ್ರೋ ಕಾರಿಡಾರ್ ಗುತ್ತಿಗೆಯನ್ನು ಮಾರ್ಚ್ ಅಂತ್ಯದೊಳಗೆ ನೀಡಲಾಗುತ್ತದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.
ಮೂರು ವರ್ಷಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದ್ದ ಮೆಟ್ರೋ ಕಾರಿಡಾರ್ ಯೋಜನೆಗೆ ವೇಗ ಸಿಕ್ಕಿದಂತಾಗುತ್ತದೆ. ಮೂರು ವರ್ಷ ಟೆಂಡರ್ ರದ್ದುಗೊಳಿಸುವುದು,ಅಥವಾ ಬಿಡ್ ಮುಂದೂಡುವುದರಲ್ಲೇ ಕಳೆದುಹೋಗಿತ್ತು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಮಂಡಿಸಿದ ಬಜೆಟ್ನಲ್ಲಿ ನಮ್ಮ ಮೆಟ್ರೋ ರೈಲು ಯೋಜನೆಗೆ ಬರೋಬ್ಬರಿ 14,788 ಕೋಟಿ ರೂ. ಘೋಷಣೆ ಮಾಡುವ ಮೂಲಕ ನಗರಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.

ಮೂರನೇ ಹಂತದ ವಿಸ್ತರಣೆ ಕಾಮಗಾರಿ ಮುಂದುವರೆಯಲಿದೆ
ಆದರೆ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಜೊತೆಗೆ ಮೂರನೇ ಹಂತದ ರೀಚ್ -3 ವಿಸ್ತರಣೆ ಮಾರ್ಗದ ಕಾಮಗಾರಿ ಮುಂದುವರಿಯಲಿದೆ. ಈ ಮಾರ್ಗದಲ್ಲಿ 75 ಕೋಟಿ ರೂಪಾಯಿಗಳ ಕೆಲಸ ಮುಗಿದಿದೆ ಎಂದರು.
Recommended Video

ಟೆಂಡರ್ ರದ್ದು: ನಾಗವಾರ ನಮ್ಮ ಮೆಟ್ರೋ ಮಾರ್ಗ ಕಾಮಗಾರಿ ಮತ್ತಷ್ಟು ತಡ
ಕಾಳೇನ ಅಗ್ರಹಾರ ಹಾಗೂ ನಾಗವಾರ ನಡುವಿನ ಎರಡನೇ ಹಂತದ ನಮ್ಮ ಮೆಟ್ರೋ ಮಾರ್ಗ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಕಾರಣ ಟೆಂಡರ್ ರದ್ದುಪಡಿಸಲಾಗಿದೆ.
ಸಿಂಪ್ಲೆಕ್ಸ್ ಸಂಸ್ಥೆ ಕಲೆನ ಅಗ್ರಹಾರದಿಂದ ನಾಗವಾರ ಮಾರ್ಗದಲ್ಲಿ ಎರಡನೇ ಹಂತದ ಎಲೆವೇಟೆಡ್ ಕಾಮಗಾರಿಯನ್ನು ನಡೆಸುತ್ತಿತ್ತು. ಈ ಮಾರ್ಗ 7.5 ಕಿಲೋ ಮೀಟರ್ ಉದ್ದದ ಕಲೆನ ಅಗ್ರಹಾರದಿಂದ ತಾವರೆಕೆರೆಯವರೆಗೆ ಹೊಂದಿದ್ದು ಕಳೆದ ಜನವರಿ 29ಕ್ಕೆ ರದ್ದುಪಡಿಸಲಾಗಿದೆ.
ನಿಧಾನಗತಿಯಲ್ಲಿ ಸಾಗುತ್ತಿರುವ ಕೆಲಸದಿಂದಾಗಿ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ(ಬಿಎಂಆರ್ ಸಿಎಲ್) ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಗೆ ನೀಡಿದ್ದ 500 ಕೋಟಿ ರೂಪಾಯಿ ಮೌಲ್ಯದ ಗುತ್ತಿಗೆಯನ್ನು ರದ್ದುಗೊಳಿಸಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications