BMTC News: ಬೆಂಗಳೂರನಲ್ಲಿ 921 ಹೊಸ ಎಲೆಕ್ಟ್ರಿಕ್ ಬಸ್ ಕಾರ್ಯಾಚರಣೆಗೆ ಸಂಪುಟ ಒಪ್ಪಿಗೆ
ಬೆಂಗಳೂರು, ಡಿಸೆಂಬರ್ 09: ಬೆಂಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ಫೇಮ್ 2 ಯೋಜನೆ ಅಡಿಯಲ್ಲಿ ಸಿಇಎಸ್ಎಲ್ ಟೆಂಡರ್ ಕಂಪನಿ ಮೂಲಕ ಒಟ್ಟು 921 ಹವಾ ನಿಯಂತ್ರಣ ರಹಿತ ಎಲೆಕ್ಟ್ರಿಕ್ ಹೊಸದಾಗಿ ಬಸ್ಗಳು ಮುಂದಿನ ದಿನಗಳಲ್ಲಿ ಓಡಾಡಲಿವೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈ ಹೊಸ 921 ಹವಾ ನಿಯಂತ್ರಣ ರಹಿತ ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆಗೆ ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ರಾಜ್ಯ ರಾಜಧಾನಿಗೆ 921 ಬಸ್ಗಳನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ. ಅದಕ್ಕಾಗಿ ಸಹಾಯ ಧನವನ್ನೂ ನೀಡಲಿದೆ. ಅಲ್ಲದೇ ಇಷ್ಟು ಬಸ್ಗಳ ಖರೀದಿಗೆ ರಾಜ್ಯ ಸರ್ಕಾರವು ಸಹಾಯಧನ ನೀಡಲಿದೆ.
ಈ ಬಗ್ಗೆ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಈ ಬಸ್ಸುಗಳಿಗೆ ರಾಜ್ಯ ಸರ್ಕಾರವೂ ಧನಸಹಾಯ ನೀಡಲಿದೆ. ಇದನ್ನು ಬಳಸಿಕೊಂಡು ಬಿಎಂಟಿಸಿ ಈ ಬಸ್ಗಳನ್ನು ಸಿಇಎಸ್ಎಲ್ ಮೂಲಕ ಕಾರ್ಯಚರಣೆ ನಡೆಸಲಿವೆ ಎಂದು ತಿಳಿಸಿದರು.
ಒಂದು ಎಲೆಕ್ಟ್ರಿಕ್ ಬಸ್ಸಿಗೆ ಸರಿ ಸುಮಾರು 1.50 ಕೋಟಿ ಬೆಲೆ ಇದೆ. ಅದರನ್ವಯ ಕೇಂದ್ರ ಸರ್ಕಾರ ಪ್ರತಿ ಬಸ್ಗೆ 39.08 ಲಕ್ಷ ರೂ.ಸಹಾಯಧನ ನೀಡಲಿದೆ. ಕೇಂದ್ರ ಈ ಹಣವನ್ನು ಬಸ್ ಒದಗಿಸುವ ಕಂಪನಿಗೆ ನೀಡಲಾಗುವುದು. ಬಾಕಿ ಮೊತ್ತವನ್ನು ಸಿಇಎಸ್ಎಲ್ ಟೆಂಡರ್ ಕಂಪನಿಯೇ ಭರಿಸಿ ಬಸ್ ಖರೀದಿ ಮಾಡಲಿದೆ. ಬಿಎಂಟಿಸಿ ಪ್ರತಿ ಕಿ.ಮೀಗೆ 40ರೂ. ನಿಗದಿ ಮಾಡಿದ್ದು, ಆ ಮೊತ್ತವನ್ನು ಸಿಇಎಸ್ಎಲ್ಗೆ ನೀಡಲಾಗುತ್ತದೆ. ಚಾಲಕನನ್ನು ಕಂಪನಿಯೇ ಒದಗಿಸುತ್ತದೆ. ನಿರ್ವಾಹಕರು ಮಾತ್ರ ಬಿಎಂಟಿಸಿ ನಿಗದವರು ಇರಲಿದ್ದಾರೆ ಎಂದು ಅವರು ವಿವರಿಸಿದರು.

ಸಂಪುಟ ಸಭೆಯ ಇತರ ನೀರ್ಣಯಗಳು
ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ನಗರದ ಹೊರವಲಯದಲ್ಲಿರುವ ಉಪನಗರಗಳನ್ನು ಸಂಪರ್ಕಿಸುವಂತೆ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದಕ್ಕೆ ಮಧ್ಯಂತರ ವರ್ತುಲ ರಸ್ತೆಯ ಗ್ರೇಡ್ ಸಪರೇಟರ್ ಮರುನಿಗದಿಪಡಿಸಲು ರಾಜ್ಯ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.
ನಗರದಲ್ಲಿ ಕಳೆದ ಮೇ ತಿಂಗಳಿನಿಂದ ಸೆಪ್ಟೆಂಬರ್ವರೆಗೆ ಸುರಿದ ಭಾರಿ ಮಳೆಯಿಂದ ಉಂಟಾಗಿದ್ದ ಪ್ರವಾಹ ಹಾನಿಯನ್ನು ತಡೆಗಟ್ಟುವ ಕಾಮಗಾರಿಗಳ ಕ್ರಿಯಾ ಯೋಜನೆಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ.
ಚಂದ್ರಾ ಲೇಔಟ್ನಲ್ಲಿ ಸುಮಾರು 2924.89 ಚದರ ಮೀಟರ್ ವಿಸ್ತೀರ್ಣದಲ್ಲಿ ಬಿಬಿಎಂಪಿ ನಿರ್ಮಿಸಿರುವ ಕನಕ ಭವನದ ಕಟ್ಟಡವನ್ನು ಕಾಗಿನೆಲೆ ಮಹಾಸಂಸ್ಥಾನದ ಕನಕಪೀಠಕ್ಕೆ 30 ವರ್ಷಗಳಿಗೆ ಗುತ್ತಿಗೆ ಆಧಾರದಲ್ಲಿ ಹಸ್ತಾಂತರಿಸಲು ಅನುಮೋದನೆ ದೊರೆತಿದೆ.
ಇನ್ನೂ ಯಲಹಂಕ ತಾಲ್ಲೂಕು ತಿಮ್ಮಸಂದ್ರ ಗ್ರಾಮದಲ್ಲಿನ 7 ಎಕರೆ ಜಮೀನನ್ನು ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್ಗೆ ಅಂತಾರಾಷ್ಟ್ರೀಯ ದರ್ಜೆ ಟೆನ್ನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications