ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೈಲ್ವೆ ನಿಲ್ದಾಣದಿಂದ ಬಿಎಂಟಿಸಿ ಬಸ್ ಸಂಚಾರ ಆರಂಭ

|
Google Oneindia Kannada News

ಬೆಂಗಳೂರು, ಡಿಸೆಂಬರ್ 16 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಬಸ್ ಸೇವೆಯನ್ನು ಆರಂಭಿಸಿದೆ. ಸಾವಿರಾರು ಜನರಿಗೆ ಇದರಿಂದಾಗಿ ಸಹಾಯಕವಾಗಲಿದೆ.

ಸೋಮವಾರ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಬೆಂಗಳೂರು ಕೇಂದ್ರದ ಬಿಜೆಪಿ ಸಂಸದ ಪಿ. ಸಿ. ಮೋಹನ್ ಬಿಎಂಟಿಸಿ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದರು. ಬಿಎಂಟಿಸಿ ಎಂಡಿ ಸಿ. ಶಿಖಾ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ ಕೊಟ್ಟ ಬಿಎಂಟಿಸಿರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ ಕೊಟ್ಟ ಬಿಎಂಟಿಸಿ

ಬಿಎಂಟಿಸಿ ಬಸ್‌ಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ (ಮೆಜೆಸ್ಟಿಕ್) ನಿಂದ ನಗರದ ವಿವಿಧ ಭಾಗಗಳಿಗೆ ನೇರವಾಗಿ ಸಂಪರ್ಕ ಕಲ್ಪಿಸಲಿವೆ. ಇದರಿಂದಾಗಿ ರೈಲು ನಿಲ್ದಾಣದಿಂದ ವಿವಿಧ ಪ್ರದೇಶಗಳಿಗೆ ಸಾಗಲು ಆಟೋ, ಕ್ಯಾಬ್ ಅವಲಂಬಿಸಿದ್ದ ಜನರಿಗೆ ಅನುಕೂಲವಾಗಲಿದೆ.

'ಚಿಲ್ಲರೆ' ಕಾರಣಕ್ಕೆ ಪ್ರಯಾಣಿಕನ ಮೇಲೆ ತೀವ್ರ ಹಲ್ಲೆ ನಡೆಸಿದ ಬಸ್ ನಿರ್ವಾಹಕ'ಚಿಲ್ಲರೆ' ಕಾರಣಕ್ಕೆ ಪ್ರಯಾಣಿಕನ ಮೇಲೆ ತೀವ್ರ ಹಲ್ಲೆ ನಡೆಸಿದ ಬಸ್ ನಿರ್ವಾಹಕ

ನೈಋತ್ಯ ರೈಲ್ವೆಯ ಅಧಿಕಾರಿಗಳು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡ ಕೆಲವು ದಿನಗಳ ಹಿಂದೆ ಬಸ್ ಸೇವೆ ಆರಂಭಿಸುವ ಕುರಿತು ಮಾತುಕತೆ ನಡೆಸಿದ್ದರು. ಬಿಎಂಟಿಸಿ ಬಸ್ ಸೇವೆ ಆರಂಭಿಸುವ ಕುರಿತು ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗಿತ್ತು.

ಫಾಸ್‌ಟ್ಯಾಗ್ ಕಡ್ಡಾಯ; ಕೆಎಸ್ಆರ್‌ಟಿಸಿ, ಬಿಎಂಟಿಸಿ ಕಥೆ ಏನು? ಫಾಸ್‌ಟ್ಯಾಗ್ ಕಡ್ಡಾಯ; ಕೆಎಸ್ಆರ್‌ಟಿಸಿ, ಬಿಎಂಟಿಸಿ ಕಥೆ ಏನು?

ಗೇಟ್ ನಂಬರ್ 3ರಿಂದ ಸಂಪರ್ಕ

ಗೇಟ್ ನಂಬರ್ 3ರಿಂದ ಸಂಪರ್ಕ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‌ಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ 3ನೇ ಗೇಟ್‌ನಿಂದ ಸಂಚಾರ ನಡೆಸಲಿವೆ. ಬೆಂಗಳೂರು ನಗರದ ವಿವಿಧ ಬಡಾವಣೆಗಳಿಗೆ ಬಸ್‌ಗಳು ನೇರವಾಗಿ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಿವೆ.

1.7 ಕೋಟಿ ವೆಚ್ಚದ ಪ್ರವೇಶ ದ್ವಾರ

1.7 ಕೋಟಿ ವೆಚ್ಚದ ಪ್ರವೇಶ ದ್ವಾರ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ 1.7 ಕೋಟಿ ವೆಚ್ಚದಲ್ಲಿ 3ನೇ ಪ್ರವೇಶ ದ್ವಾರವನ್ನು ನಿರ್ಮಾಣ ಮಾಡಲಾಗಿದೆ. ಜೂನ್‌ನಲ್ಲಿ ಇದು ಉದ್ಘಾಟನೆಗೊಂಡಿದ್ದು, ಇಲ್ಲಿಗೆ ಈಗ ಬಿಎಂಟಿಸಿ ಬಸ್ ಆಗಮಿಸಲಿದೆ. ಇದರಿಂದಾಗಿ ಜನರು ನೇರವಾಗಿ ರೈಲು ನಿಲ್ದಾಣ ತಲುಪಬಹುದಾಗಿದೆ.

ಫ್ಲಾಟ್‌ ಫಾರಂ ಸಂಪರ್ಕ

ಫ್ಲಾಟ್‌ ಫಾರಂ ಸಂಪರ್ಕ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಗೇಟ್ ನಂಬರ್ 3 ನೇರವಾಗಿ ರೈಲು ನಿಲ್ದಾಣದ ಫ್ಲಾಟ್‌ ಫಾರಂ ನಂಬರ್ 1ಕ್ಕೆ ಸಂಪರ್ಕ ಕಲ್ಪಿಸುತ್ತದೆ. ಇಲ್ಲಿಯೇ ರೈಲ್ವೆ ಇಲಾಖೆ ಟಿಕೆಟ್ ಕೌಂಟರ್ ತೆರೆದಿದೆ. ಆದ್ದರಿಂದ, ಬಿಎಂಟಿಸಿ ಬಸ್‌ಗೆ ಬರುವ ಪ್ರಯಾಣಿಕರು ಇಲ್ಲಿ ಟಿಕೆಟ್ ಪಡೆದು ರೈಲಿನಲ್ಲಿ ಸಂಚಾರ ನಡೆಸಲು ಅನುಕೂಲವಾಗಲಿದೆ.

ಮೆಜೆಸ್ಟಿಕ್‌ನಿಂದ ನಡೆಯಬೇಕಿತ್ತು

ಮೆಜೆಸ್ಟಿಕ್‌ನಿಂದ ನಡೆಯಬೇಕಿತ್ತು

ಸ್ಥಳಾವಕಾಶದ ಕೊರತೆ ಕಾರಣ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದೊಳಕ್ಕೆ ಬಿಎಂಟಿಸಿ ಬಸ್ ಸಂಚಾರಕ್ಕೆ ಅವಕಾಶ ನೀಡಿರಲಿಲ್ಲ. ಇದರಿಂದಾಗಿ ಜನರು ಮೆಜೆಸ್ಟಿಕ್ ನಿಲ್ದಾಣದಲ್ಲಿ ಇಳಿದು ಸುರಂಗ ಮಾರ್ಗದ ಮೂಲಕ ರೈಲ್ವೆ ನಿಲ್ದಾಣಕ್ಕೆ ಬರಬೇಕಿತ್ತು. ಇದಕ್ಕಾಗಿ ಸುಮಾರು ದೂರ ನಡೆಯಬೇಕಿತ್ತು. ಈಗ ಬಸ್ ನೇರವಾಗಿ ರೈಲು ನಿಲ್ದಾಣಕ್ಕೆ ಹೋಗಲಿದೆ.

English summary
Bangalore Metropolitan Transport Corporation (BMTC) began bus service from Krantiveera Sangolli Rayanna Railway station. Bus will operate from 3rd entrance of the railway station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X