ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜಪೇಟೆ ಬಳಿ ಹೊತ್ತಿ ಉರಿದ ಬಸ್ : 30 ಪ್ರಯಾಣಿಕರು ಸೇಫ್

|
Google Oneindia Kannada News

ಬೆಂಗಳೂರು, ಜ. 21: ಶಾರ್ಟ್ ಸರ್ಕ್ಯೂಟ್‌ ನಿಂದ ಬೆಂಕಿ ಕಾಣಿಸಿಕೊಂಡು ಬಿಎಂಟಿಸಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚಾಮರಾಜಪೇಟೆ ಬಳಿ ನಡೆದಿದೆ. ಬಸ್‌ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಯಾವುದೇ ಪ್ರಾಣಾಪಾಯ ಇಲ್ಲದೇ ಪಾರಾಗಿದ್ದಾರೆ.

ಹೊಸಕೆರೆಹಳ್ಳಿಯಿಂದ ಕೆ.ಆರ್. ಮಾರ್ಕೆರ್ಟ್‌ಗೆ ಹೋಗುತ್ತಿದ್ದ KA 57 F 1592 ನಂಬರಿನ ಬಿಎಂಟಿಸಿ ಬಸ್ ಚಾಮರಾಜಪೇಟೆ ಮೂಲಕ ಮಾರ್ಕೆಟ್ ಗೆ ತೆರಳುತ್ತಿದ್ದು. ಮಕ್ಕಳ ಕೂಟ ಬಸ್ ನಿಲ್ದಾಣ ಸಮೀಪ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ನೀಡಿದ ಎಚ್ಚರಿಕೆ ಮೇಲೆ ಬಸ್‌ನಲ್ಲಿದ್ದ 30 ಪ್ರಯಾಣಿಕರು ಇಳಿದಿದ್ದಾರೆ. ಶಾರ್ಟ್ ಸರ್ಕ್ಯೂಟ್‌ ನಿಂದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮಕ್ಕಳ ಕೂಟದ ಪಾರ್ಕ್ ನ ನಲ್ಲಿಯಿಂದ ನೀರು ಬಿಟ್ಟು ಬಸ್ ಬೆಂಕಿ ನಂದಿಸುವ ಕಾರ್ಯ ನಡೆಸಿದರೂ ಪ್ರಯೋಜನವಾಗಲಿಲ್ಲ.

Bengaluru: BMTC bus caught fire in Chamarajpet Around 30 passengers escaped unhurt

ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಬಸ್ ಗೆ ಬಿದ್ದಿದ್ದ ಬೆಂಕಿ ನಂದಿಸಿದರು. ಅಷ್ಟರಲ್ಲಿ ಬಸ್ ಬಹುತೇಕ ಸುಟ್ಟು ಕರಕಲಾಗಿತ್ತು. ಯಾವುದೇ ಪ್ರಾಣಾಪಾಯ ಆಗಿಲ್ಲ. ಬಸ್ ನಲ್ಲಿ ಶಾರ್ಟ್ ಸರ್ಕೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಆ ಬಳಿಕ ಇಂಧನ ಟ್ಯಾಂಕ್ ಗೆ ಬೆಂಕಿ ಬಿದ್ದ ಪರಿಣಾಮ ಬಸ್ ಹೊತ್ತಿ ಹೊರಿದಿದೆ. ಸೆಂಟ್ರಲ್ ವಿಭಾಗದ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಿಕೊಳ್ಳಲಾಗಿದೆ.

English summary
Bengaluru: Around 30 passengers escaped unhurt after a moving BMTC bus caught fire due to short circuit near Makkala Koota in Chamarajpet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X