BREAKING: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ: ಯುವಕ ಸಾವು
ಬೆಂಗಳೂರು, ಏಪ್ರಿಲ್ 10: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಸ್ನೇಹತನನ್ನು ಭೇಟಿಯಾಗಲು ತೆರಳಿದ್ದ ಯುವಕನಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ.
ಸ್ನೇಹಿತನನ್ನು ಭೇಟಿ ಮಾಡಲು ತೆರಳಿದ್ದ ವೇಳೆ ಯುವಕ ಕಮಲೇಶ್ ಜೀವನ ಧಾರುಣ ಅಂತ್ಯ ಕಂಡಿದೆ. ದ್ವಿಚಕ್ರ ವಾಹನದಲ್ಲಿ ಬಸ್ ಓವರ್ ಟೆಕ್ ಮಾಡುವಾಗ ಬಸ್ ಯುವಕನಿಗೆ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವವಾದ ಹಿನ್ನೆಲೆ ಆಸ್ಪತ್ರೆಗೆ ಸೇರಿಸಲಾಯಿತು. ಆದರೂ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ರಾಜಸ್ಥಾನ ಮೂಲದ ಯುವಕ
ರಾಜಸ್ಥಾನ ಮೂಲಕ ಯುವಕ ಕಮಲೇಶ್ ಎಂದು ತಿಳಿದು ಬಂದಿದೆ. ಮೃತ ಯುವಕ ಎಂದಿನಂತೆ ಸ್ನೇಹಿತನನ್ನು ಭೇಟಿಗೆ ತೆರಳಿದ್ದಾನೆ. ಈ ವೇಳೆ ಶಿವಾಜಿನಗರದ ವೆಂಕಟೇಶ್ ಸ್ವಾಮಿ ನಾಯ್ಡು ರಸ್ತೆಯಲ್ಲಿ ಬಿಎಂಟಿಸಿ ಬಸ್ ಅನ್ನು ಓವರ್ ಟೆಕ್ ಮಾಡುವಾಗ ಈ ದುರ್ಘಟನೆ ನಡೆದಿದೆ.
ಬಸ್ ಮತ್ತು ಯುವಕನ ಸ್ಕೂಟರ್ ಮಧ್ಯೆ ರಭಸದ ಡಿಕ್ಕಿ ಸಂಭವಿಸಿದೆ. ಪರಿಣಾಮ ತಲೆಗೆ ಗಾಯವಾಗಿದ್ದರಿಂದ ಯುವಕನಿಗೆ ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ನಿಂದ ಉಂಟಾಗುತ್ತಿರುವ ಸರಣಿ ಸಾವು ಮುಂದುವರಿದಿದೆ.
ರಸ್ತೆ ಗುಂಡಿ ತಪ್ಪಿಸಲು ಹೋಗಿ, ಓವರ್ ಟೆಕ್ ವೇಳೆ, ಮುಂದಿನ ವಾಹನ ಸವಾರರು ರಸ್ತೆ ಮೇಲೆ ಬಿದ್ದು, ಹೀಗೆ ಹಲವು ಕಾರಣಗಳಿಂದ ಬಿಂಎಂಟಿಸಿ ಬಸ್ ಗೆ ಸಿಲುಕಿ ಮೃತಪಡುವ ಘಟನೆಗಳು ವರದಿಯಾಗುತ್ತಲೆ ಬಂದಿವೆ. ಇದೀಗ ಯುವಕ ಕಮಲೇಶ್ ಸ್ಕೂಟರ್ನಲ್ಲಿ ಬರುವಾಗ ಡಿಕ್ಕಿ ಆಗಿ ಸಾವಿಗೀಡಾಗಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಪ್ರಯಾಣಿಕರಿಗೆ ಸಿಹಿ ಸುದ್ದಿ: ಬಿಎಂಟಿಸಿ ಹೊಸ ಮಾರ್ಗಗಳ ಪರಿಚಯ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications