Heart Attack: ಬಸ್ ಚಲಾಯಿಸುವಾಗಲೇ BMTC ಚಾಲಕ ಸಾವು: ಸಿನಿಮೀಯ ರೀತಿಯಲ್ಲಿ ಪ್ರಯಾಣಿಕರು ಬಚಾವ್
ಬೆಂಗಳೂರು, ನವೆಂಬರ್ 06: ಬಸ್ ಚಲಾಯಿಸುವಾಗಲೇ ಬಿಎಂಟಿಸಿ ಬಸ್ ಚಾಲಕ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನ ನೆಲಮಂಗಲ ಟೌನ್ ಬಿನ್ನಮಂಗಲ ಬಸ್ ನಿಲ್ದಾಣ ಬಳಿ ನಡೆದಿದೆ. ಕಿರಣ್ (39 ವರ್ಷ) ಸಾವನ್ನಪ್ಪಿದ ಚಾಲಕ ಎಂದು ಗುರುತಿಸಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್ ಡ್ರೈವ್ ಮಾಡಿಕೊಂಡು ಹೋಗುತ್ತಿರುವಾಗಲೇ ಹಾಸನ ಮೂಲದ ಚಾಲಕ ಕಿರಣ್ ಕುಮಾರ್ಗೆ ಏಕಾಏಕಿ ಹೃದಯಾಘಾತವಾಗಿದೆ. ಕೂಡಲೇ ಕಂಡಕ್ಟರ್ ಒಬಳೇಶ್ ಸಹಾಯದಿಂದ ಚಾಲಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ದುರಾದೃಷ್ಟವಶಾತ್ ಕಿರಣ್ಕುಮಾರ್ ಅದಾಗಲೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಸಂಪೂರ್ಣ ವಿವರ
ಹಾಸನ ಮೂಲದ ಚಾಲಕ ಕಿರಣ್ ಕುಮಾರ್, ಬಿಎಂಟಿಸಿ ಡಿಪೋ 40ರಲ್ಲಿ ಕಳೆದ 6 ವರ್ಷದಿಂದ ಡೈವರ್ ಆಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಇಂದು ಕೂಡ ಕೆಲಸಕ್ಕೆ ಹಾಜರಾಗಿದ್ದಾರೆ. ಇಂದಿನ ಎಲ್ಲಾ ಟ್ರಿಪ್ಗಳನ್ನು ಮುಗಿಸಿ ಕೊನೆಯ ಟ್ರೀಪ್ ಓಡಿಸುತ್ತಿದ್ದರು. ನೆಲಮಂಗಲದಿಂದ ದಾಸನಪುರ ಘಟದತ್ತ ಬಸ್ ಚಲಾಯಿಸಿಕೊಂಡು ಬರಲಾಗುತ್ತಿತ್ತು. ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ದಿನವಿಡಿ ಬಸ್ ಚಲಾಯಿಸಿದ್ದ ಕಿರಣ್ ಕುಮಾರ್ ಅದಾಗಲೇ ಆಯಾಸಗೊಂಡಿದ್ದಾರೆ.
ಇನ್ನೇನು ಕೊನೆಯ ಟ್ರಿಪ್ ಮುಗಿಸಿ ವಿಶ್ರಾಂತಿ ಪಡೆಯಬಹುದು ಎಂದುಕೊಂಡು ದಾಸನಪುರದತ್ತ ತೆರಳುತ್ತಿದ್ದರು. ಈ ವೇಳೆ ಹೃದಯಘಾತವಾಗಿದ್ದು, ಬಸ್ ಚಲಿಸುತ್ತಿರುವಾಗಲೇ ಚಾಲಕನ ಸೀಟಿನಿಂದ ಬಿದ್ದಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಚಲಿಸಿದ್ದು, ಮುಂದೆ ಹೋಗುತ್ತಿದ್ದ ಮತ್ತೊಂದು ಬಸ್ಗೆ ಡಿಕ್ಕಿ ಹೊಡೆದಿದೆ. ಕೂಡಲೇ ಎಚ್ಚೆತ್ತುಕೊಂಡ ಬಸ್ ಕಂಡೆಕ್ಟರ್ ನೇರವಾಗಿ ಚಾಲಕನ ಸೀಟ್ಗೆ ಹೋಗಿ ಬಸ್ ನಿಲ್ಲಿಸಿದ್ದಾರೆ. ಇನ್ನೇನು ಡಿವೈಡರ್ಗೆ ಬಸ್ ಡಿಕ್ಕಿ ಹೊಡೆಯುತ್ತದೆ ಎನ್ನುವಷ್ಟರಲ್ಲಿ ಬಸ್ನಿಂತಿದೆ.
ಕೂಡಲೇ ಬಸ್ ನಿಂತ ಕಾರಣ 50ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಂಡಕ್ಟರ್ ಒಬಳೇಶ್ ಬಸ್ ನಿಲ್ಲಿಸಿ ಕೂಡಲೇ ಕಿರಣ್ ಕುಮಾರ್ನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಕಿರಣ್ ಕುಮಾರ್ ಬಸ್ನಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ದೃಶ್ಯಗಳು ಬಸ್ನಲ್ಲಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications