ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸಲು ನಿರ್ಧಾರ: ಡಿಸಿಎಂ ಲಕ್ಷ್ಮಣ ಸವದಿ!
ಬೆಂಗಳೂರು, ಫೆ. 25: ಡಿಸೇಲ್ ದರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಾಲ್ಕೂ ಸಾರಿಗೆ ನಿಗಮಗಳ ಪ್ರಯಾಣಿಕರ ಟಿಕೆಟ್ ದರ ಹೆಚ್ಚಳ ಮಾಡುವ ಪ್ರಸ್ತಾವನೆ ಇದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ. ವಿಕಾಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕಳೆದ ವರ್ಷ ಮೂರು ನಿಗಮಗಳಲ್ಲಿ ಶೇಕಡಾ 12ರಷ್ಟು ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ ಟಿಕೆಟ್ ದರ ಹೆಚ್ಚಳ ಮಾಡಲು ಪ್ರಸ್ತಾವನೆ ಇದೆ ಎಂದಿದ್ದಾರೆ.
ಬಿಎಂಟಿಸಿ ಟಿಕೆಟ್ ದರ ಹೆಚ್ಚಳ: ಬಿಎಂಟಿಸಿ ಬಸ್ಗಳ ಟಿಕೆಟ್ ದರ ಹೆಚ್ಚಿಸುವ ಕುರಿತು ಮಾತನಾಡಿರುವ ಡಿಸಿಎಂ ಸವದಿ ಅವರು, ಬಿಎಂಟಿಸಿ ಟಿಕೆಟ್ ದರ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚೆರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಶೇಕಡಾ 15 ರಿಂದ 18ರಷ್ಟು ದರ ಹೆಚ್ಚಳ ಪ್ರಸ್ತಾವನೆ ಇದೆ ಎಂದಿದ್ದಾರೆ. ಬಸ್ಗಳ ಬಿಡಿಭಾಗಗಳು, ನಿವೃತ್ತಿ ಹಣ ಪಾವತಿಗಾಗಿ ಸಾರಿಗೆ ಇಲಾಖೆಗೆ 560 ಕೋಟಿ ರೂ. ಬ್ಯಾಂಕ್ ಸಾಲ ಪಡೆದಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಸವದಿ ವಿವರಿಸಿದರು. ಜೊತೆಗೆ ಈ ಮೊದಲೇ ಜೊತೆಗೆ ಸಿಟಿ ಟ್ಯಾಕ್ಸಿ ಪ್ರಯಾಣ ದರವನ್ನು ಶೇಕಡಾ15ರಷ್ಟು ಹೆಚ್ಚಳ ಮಾಡಲಾಗಿತ್ತು. ಓಲಾ ಮತ್ತು ಊಬರ್ ಪ್ರಯಾಣ ದರ ಹೆಚ್ಚಳಕ್ಕೆ ಮನವಿ ಬಂದಿದೆ. ಮಾತುಕತೆ ಬಳಿಕ ದರ ಹೆಚ್ಚಳ ಅನುಮೋದನೆ ನೀಡಲಾಗುವುದು ಎಂದಿದ್ದಾರೆ.

ಖಾಸಗಿ ಬಸ್ಗಳ ಮಾದರಿಯಲ್ಲಿ ಸಾರಿಗೆ ನಿಗಮದ ಬಸ್ಗಳ ಮೂಲಕ ಕಾರ್ಗೋ ಮತ್ತು ಕೋರಿಯರ್ ಸೇವೆ ನೀಡಲು ತೀರ್ಮಾನ ಮಾಡಲಾಗಿದೆ. ಅದರಂತೆ 109 ಸ್ಥಳಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗುತ್ತಿದೆ. ಕಾರ್ಗೋ ಮತ್ತು ಕೊರಿಯರ್ ಸೇವೆಯ ಮೂಲಕ ಪ್ರತಿವರ್ಷ 70 ರಿಂದ 80 ಕೋಟಿ ರೂ ಆದಾಯ ನಿರೀಕ್ಷಿಸಲಾಗಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Recommended Video
ಇಲಾಖೆಗೆ ಕೊರೊನಾವೈರಸ್ ಲಾಕ್ಡೌನ್ ಸೇರಿದಂತೆ ಉಳಿದ ಕಾರಣಗಳಿಂದಾಗಿ ಒಟ್ಟು ಸುಮಾರು 4 ಸಾವಿರ ಕೋಟಿ ರೂ.ಗಳಷ್ಟು ಆದಾಯ ಕೊರತೆಯಾಗಿದೆ. ಜೊತೆಗೆ ನಾಲ್ಕೂ ನಿಗಮಗಳಿಂದ ಒಟ್ಟು 2,710 ಕೋಟಿ ರೂ. ಗಳಷ್ಟು ನಷ್ಠವಾಗಿದೆ. ಕೋವಿಡ್ ಸಂದರ್ಭದಲ್ಲಿ ಸಿಬ್ಬಂದಿ ವೇತನ ಪಾವತಿಗಾಗಿ ಸರ್ಕಾರದಿಂದ 1,780 ಕೋಟಿ ರೂ ಅನುದಾನ ಪಡೆದು 1.3 ಲಕ್ಷ ಸಿಬ್ಬಂದಿಗೆ ವೇತನ ಪಾವತಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications