BMTC: ಎರಡು ಬಿಎಂಟಿಸಿಗಳ ನಡುವೆ ಜಸ್ಟ್ ಮಿಸ್ ಆದ ಬೈಕ್ ಸವಾರ ವಿಡಿಯೋ ವೈರಲ್
ಬೆಂಗಳೂರು, ಡಿಸೆಂಬರ್ 04: ಬೆಂಗಳೂರಿನಲ್ಲಿ ಎಷ್ಟೇ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿದರೂ ಸಹಿತ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುತ್ತದೆ. ರಸ್ತೆ ತುಂಬೆಲ್ಲ ವಾಹನಗಳು ವೇಗವಾಗಿ ಓಡುತ್ತಿರುತ್ತವೆ. ಈ ಮಧ್ಯೆ ಇಲ್ಲೊಬ್ಬ ಬೈಕ್ ಸವಾರ ಅಜಾಗರೂಕತೆ ಮತ್ತು ವೇಗದ ಚಾಲನೆಯಿಂದ ಜೀವಕ್ಕೆ ಕುತ್ತು ತಂದೊಡ್ಡಿಕೊಳ್ಳುತ್ತಿದ್ದ ಘಟನೆ ಬನಶಂಕರಿಯ ಮುಖ್ಯ ರಸ್ತೆಯಲ್ಲಿ ನಡೆದಿದೆ. ಈ ಕುರಿತು 'ಕರ್ನಾಟಕ ಪೋರ್ಟ್ಫೋಲಿಯೋ' ವಿಡಿಯೋ ಹಂಚಿಕೊಂಡಿದ್ದು, ಅದು ವೈರಲ್ ಆಗುತ್ತಿದೆ.
ಬೆಂಗಳೂರಿನ ರಸ್ತೆಗಳಲ್ಲಿ ಚಾಲನೆ ಮಾಡುವಾಗ ಜಾಗರೂಕರಾಗಿರಬೇಕು. ವಿಶೇಷವಾಗಿ ಬಸ್ಸುಗಳು, ಲಾರಿಗಳು ಸೇರಿದಂತೆ ದೊಡ್ಡ ದೊಡ್ಡ ವಾಹನಗಳ ಅಕ್ಕಪಕ್ಕ, ಹಿಂದೆ ಮುಂದೆ ಚಲಿಸುವಾಗ ಅಗತ್ಯ ಎಚ್ಚರವಹಿಸಬೇಕು. ಇಲ್ಲವಾದರೆ ಈ ವಿಡಿಯೋದಲ್ಲಿ ಕಾಣುವಂತೆ ತೊಂದರೆಗೆ ಸಿಲುಕಬೇಕಾಗುತ್ತದೆ.

ಬನಶಂಕರಿ ಬಸ್ ನಿಲ್ದಾಣದ ಸಮೀಪ ಮಂಗಳವಾರ ಡಿಸೆಂಬರ್ 3 ರಂದು ಎರಡು ಬಿಎಂಟಿಸಿ ಬಸ್ಗಳು ಸಂಚರಿಸುವಾಗ ಮಧ್ಯದಲ್ಲಿ ವೇಗವಾಗಿ ತೆರಳಿ ದಾಟಿಬಿಡಬಹುದು ಎಂಬ ಧಾವಂತದಲ್ಲಿ ಬಂದ ಬೈಕ್ ಸವಾರ ರಸ್ತೆ ಮಧ್ಯೆ ಉರುಳಿ ಬಿದ್ದಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ.
ಧಾವಂತದ ಚಾಲನೆಯಿಂದ ಬೈಕ್ ಸವಾರನಿಗೆ ಕುತ್ತು
ರಸ್ತೆಯಲ್ಲಿ ಸಿಗ್ನಲ್ನಲ್ಲಿ ನಿಂತಿದ್ದ ಮತ್ತೊಂದು ಬಸ್ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಸಿಗ್ನಲ್ ಮುಂದಿನ ರಸ್ತೆಯಲ್ಲಿ ಬಿಎಂಟಿಸಿ ಬಸ್ ಸಂಚರಿಸುತ್ತಿದ್ದು, ಅದರ ಹಿಂದೆಯೇ ಅರೆ ಕ್ಷಣ ಅಂತರದಲ್ಲಿ ಮತ್ತೊಂದು ಬಿಎಂಟಿಸಿ ಎಸಿ ಬಸ್ ಬರುತ್ತಿದೆ. ಅದಕ್ಕು ಮೊದಲೇ ತಾನು ಓವರ್ಟೆಕ್ ಮಾಡಬೇಕೆಂದುಕೊಂಡ ಬೈಕ್ ಸವಾರು ವೇಗವಾಗಿ ಚಲಿಸಿದ್ದಾರೆ.

ಆದರೆ ಅರೇಕ್ಷಣದಲ್ಲಿ ಹಿಂದೆ ಬಸ್ ಸವಾರನ ಬೈಕಿಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಚಾಲಕ ಬ್ರೇಕ್ ಹಾಕಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಬಿಟ್ಟು ಸವಾರ ಉರುಳಿ ಬಿದ್ದಿದ್ದಾರೆ. ಬಸ್ ಚಾಲಕನ ಸಮಯ ಪ್ರಜ್ಞೆಗೆ ಜೀವಕ್ಕೆ ಅಪಾಯವಾಗಿಲ್ಲ ಎನ್ನಲಾಗಿದೆ. ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿ ಆಗಿದೆ. ಕೂಡಲೇ ಸವಾರನನ್ನು ಸಂಚಾರಿ ಪೊಲೀಸ್ ಕಾನ್ಸ್ಟೇಬಲ್ ರಸ್ತೆ ಬದಿಗೆ ಕೈ ಹಿಡಿದು ಕರೆದುಕೊಂಡು ಹೋಗಿದ್ದಾರೆ. ಸಂಚಾರ ಕುರಿತು ತಿಳಿ ಹೇಳಿದ್ದಾರೆ.
Be cautious while driving on the roads, especially when there are heavy vehicles like buses, trucks, or other large vehicles around. Such situations can quickly become dangerous and lead to accidents.
— Karnataka Portfolio (@karnatakaportf) December 4, 2024
For instance, on December 3rd near Banashankari bus stand, a tragic accident… pic.twitter.com/jnYkxHaVzE
ವಾಹನಗಳ ಚಾಲನೆ ವೇಳೆ ಅಂತರ ಕಾಯ್ದುಕೊಳ್ಳಬೇಕು
ಇಂತಹ ದೊಡ್ಡ ವಾಹನಗಳ ಅಕ್ಕ ಪಕ್ಕದಲ್ಲಿ ಚಲಿಸುವಾಗ ಅಂತರ ಕಾಯ್ದುಕೊಳ್ಳಬೇಕು. ನಿಧಾನವಾಗಿ ಚಲಿಸಬೇಕು. ಇಲ್ಲವಾದರೆ ಇಂತಹ ಘಟನೆಗಳು ಸಂಭವಿಸುತ್ತವೆ. ಜೀವ ಹಾನಿ ಸಾಧ್ಯತೆ ಇರುತ್ತದೆ ಎಂದು ಈ ವಿಡಿಯೋ ಜಾಗೃತಿ ಮೂಡಿಸುತ್ತದೆ.
ರಸ್ತೆ ಸುರಕ್ಷತೆ, ಸಂಚಾರ ನಿಯಮ ಪಾಲನೆ ಬಗ್ಗೆ ಸದಾ ಎಚ್ಚರ ವಹಿಸಬೇಕು. ಕೆಲವೊಮ್ಮೆ ಬಸ್ನಂತರ ದೊಡ್ಡ ವಾಹನಗಳ ಚಾಲನೆ ವೇಳೆ ಅಕ್ಕ ಪಕ್ಕದ ಬೈಕ್ಗಳು ಕಾಣದೇ ಹೋದಲ್ಲಿ ಇನ್ನೋ ದೊಡ್ಡ ಅಪಾಘಾತವಾಗಿಬಿಡುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ದ್ವಿಚಕ್ರ ವಾಹನ ಸವಾರರು, ಇತರ ವಾಹನಗಳು ಚಾಲಕರು ಅಗತ್ಯ ಎಚ್ಚರಿಕೆ ವಹಿಸುವುದು ಅಗತ್ಯವಿರುತ್ತದೆ. ಸುರಕ್ಷತೆಗೆ ಆದ್ಯತೆ ಕೊಟ್ಟು ಚಾಲನೆ ಮಾಡುವಂತೆ ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
-
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications