ವೋಲ್ವೊ ಬಸ್ ಸಂಚಾರ ಇನ್ನು ಸುಗಮ: ಶೇ.37ರಷ್ಟು ದರ ಇಳಿಕೆ
ಬೆಂಗಳೂರು, ಡಿಸೆಂಬರ್ 30 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹೊಸ ವರ್ಷದ ಅಂಗವಾಗಿ ತನ್ನ ಪ್ರಯಾಣಿಕರಿಗೆ ಕೊಡುಗೆಯಾಗಿ ವೋಲ್ವೊ ಬಸ್ ಪ್ರಯಾಣ ದರವನ್ನು ಕಡಿತಗೊಳಿಸಲು ನಿರ್ಧರಿಸಿದೆ.
ದೇಶದಲ್ಲೇ ಲಾಭದಾಯಕ ಸಾರ್ವಜನಿಕ ಸಾರಿಗೆ ಸಂಸ್ಥೆ ಎನಿಸಿರುವ ಬಿಎಂಟಿಸಿ ಈಗಾಗಲೇ ಹಲವು ಸೇವೆಗಳ ಮೂಲಕ ಮುಂಚೂಣಿಯಲ್ಲಿದೆ. ಆದರೆ ಓಲ್ವೊ ಬಸ್ ಗಳ ಪ್ರಯಾಣಕ್ಕೆ , ಪ್ರಯಾಣಿಕರು ಹೆಚ್ಚು ಆಸಕ್ತಿ ತೋರದ ಹಿನ್ನೆಲೆಯಲ್ಲಿ ವೋಲ್ವೊ ಬಸ್ ಗಳು ನಷ್ಟದಲ್ಲಿತ್ತು.
ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ವೋಲ್ವೊ ಬಸ್ ಪ್ರಯಾಣ ದರವನ್ನು ಕಡಿತಗೊಳಸಲು ಚಿಂತನೆ ನಡೆದಿದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಹೇಳಿದ್ದರು.

ಇದೀಗ ವೋಲ್ವೊ ಬಸ್ ಪ್ರಯಾಣ ದರವನ್ನು ಕಡಿತ ಮಾಡಲು ಬಿಎಂಟಿಸಿ ನಿರ್ಧರಿಸಿದೆ. ಇಳಿಕೆಯಾಗಿರುವ ಪ್ರಯಾಣ ದರವನ್ನು ಶೀಘ್ರವೇ ಬಿಎಂಟಿಸಿ ಪ್ರಕಟಿಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಬಿಎಂಟಿಸಿ ಈಗಾಗಲೇ ಮೆಜೆಸ್ಟಿಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ನಗರದ ಪ್ರಮುಖ ಸ್ಥಳಗಳಿಗೆ ವೋಲ್ವೊ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆಯನ್ನು ಕಲ್ಪಿಸಿದೆ.
ಹೆಚ್ಚು ಆಸಕ್ತಿ ತೋರದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ವೋಲ್ವೊ ಬಸ್ ಗಳ ಕಡೆಗೆ ಸೆಳೆಯುವ ನಿಟ್ಟಿನಲ್ಲಿ ಪ್ರಯಾಣ ದರವನ್ನು ಕಡಿಮೆ ಮಾಡಲು ಬಿಎಂಇಟಿಸಿ ನಿರ್ಧರಿಸಿದೆ.
ಜನವರಿ ಒಂದು ತಿಂಗಳು ಪ್ರಾಯೋಗಿಕವಾಗಿ ದರವನ್ನು ಕಡಿಮೆ ಮಾಡಲು ಬಿಎಂಟಿಸಿ ನಿರ್ಧರಿಸಿದೆ. ಬಿಎಂಟಿಸಿ ಶೇ.37 ರಷ್ಟು ವೋಲ್ವೊ ಬಸ್ ಗಳ ಪ್ರಯಾಣದರವನ್ನು ಇಳಿಸಿರುವ ಹಿನ್ನೆಲೆಯಲ್ಲಿ ಇನ್ನುಮುಧಾದರೂ ಬೆಂಗಳೂರಿಗರು ನಗರ ಸಂಚಾರಕ್ಕೆ ವೋಲ್ವೊ ಬಸ್ ಗಳನ್ನು ಬಳಸುತ್ತಾರಾ ಎಂದು ಕಾದು ನೋಡಬೇಕಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications