1500 ಬಸ್ಗಳಿಗೆ ಬಿಎಂಟಿಸಿ ಟೆಂಡರ್ ಆಹ್ವಾನ, ಖಾಸಗೀಕರಣ ಭಯ
ಬೆಂಗಳೂರು, ಮಾರ್ಚ್ 30: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸದ್ದಿಲ್ಲದೆ ಗುತ್ತಿಗೆ ಆಧಾರದಲ್ಲಿ 1500 ಡೀಸೆಲ್ ಬಸ್ ಪಡೆಯಲು ಟೆಂಡರ್ ಆಹ್ವಾನಿಸಿದೆ.
ಹಲವು ವರ್ಷಗಳ ಹಿಂದೆ ಖಾಸಗಿಯವರಿಂದ ಗುತ್ತಿಗೆಯಲ್ಲಿ ಒಂದು ಸಾವಿರ ಬಸ್ ಪಡೆದು ಕಾರ್ಯಾಚರಣೆ ಮಾಡುವ ಪ್ರಯೋಗ ನಡೆದಿತ್ತು. ಈ ಮಾದರಿ ಬಿಎಂಟಿಸಿ ನಿಗಮ ಹಾಗೂ ಖಾಸಗಿ ಸಂಸ್ಥೆಗಳಿಗೆ ಹೆಚ್ಚಿನ ಲಾಭ ನೀಡದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿತ್ತು.
ಇದೀಗ ಮತ್ತೆ ಖಾಸಗಿಯವರಿಂದ ಬಸ್ ಪಡೆದು ಕಾರ್ಯಾಚರಿಸುವ ಸಾಹಸಕ್ಕೆ ಬಿಎಂಟಿಸಿ ಮುಂದಾಗಿದೆ. ಈಗಾಗಲೇ ಕೇಂದ್ರದ ಫೇಮ್ ಯೋಜನೆಯ ಎರಡನೇ ಹಂತದಲ್ಲಿ ಅನುದಾನ ಬಳಸಿಕೊಂಡು ಗುತ್ತಿಗೆ ಮಾದರಿಯಲ್ಲಿ 300 ವಿದ್ಯುತ್ ಬಸ್ ಪಡೆಯುವ ಸಂಬಂಧ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇದರ ಬೆನ್ನಲ್ಲೇ ಗುತ್ತಿಗೆ ಮಾದರಿಯಲ್ಲಿ 1500 ಡೀಸೆಲ್ ಪಡೆಯುವ ಸಂಬಂಧ ಟೆಂಡರ್ ಆಹ್ವಾನಿಸಲಾಗಿದೆ.

ಗುತ್ತಿಗೆ ಮಾದರಿಯಲ್ಲಿ ಬಸ್ ಪೂರೈಸುವ ಕಂಪನಿಯೇ ಬಸ್ಗಳ ನಿರ್ವಹಣೆ ಮಾಡಬೇಕು. ಬಿಎಂಟಿಸಿ ಕಿ.ಮೀ ಲೆಕ್ಕದಲ್ಲಿ ಕಂಪನಿಗೆ ಹಣ ಪಾವತಿಸಲಿದೆ. ಟೆಂಡರ್ನಲ್ಲಿ ಭಾಗವಹಿಸುವ ಕಂಪನಿಗಳು ಎಷ್ಟು ಮೊತ್ತಕ್ಕೆ ಬಿಡ್ ಸಲ್ಲಿಸಲಿವೆ ಎಂಬುದರ ಮೇಲೆ ಬಿಎಂಟಿಸಿ ಕಿ.ಮೀಗೆ ದರ ನಿಗದಿ ಮಾಡಲಿದೆ.
ಟಿಕೆಟ್ ಮಾರಾದಿಂದ ಸಂಗ್ರಹಿಸುವ ಹಣವನ್ನು ಬಿಎಂಟಿಸಿ ಪಡೆದುಕೊಳ್ಳಲಿದೆ. ಈ ಗುತ್ತಿಗೆ ಮಾದರಿ ಬಸ್ಗಳ ಬಣ್ಣ ಕೂಡ ಬದಲಾಗಲಿದೆ. ಇದಕ್ಕೆ ಬಿಎಂಟಿಸಿ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
Recommended Video
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications