ಬಿಎಂಟಿಸಿ ಕಾರ್ಯಾರಂಭ ಮಾಡುವ ಆತುರದಲ್ಲಿ ಎಡವಟ್ಟು
ಬೆಂಗಳೂರು, ಮೇ 16: ಬಿಎಂಟಿಸಿ ಕಾರ್ಯಾರಂಭ ಮಾಡುವ ಆತುರದಲ್ಲಿ ಎಡವಟ್ಟು ಮಾಡಿಕೊಂಡಿದೆ.
Recommended Video
ಸೋಮವಾರದಿಂದ ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿಯಿಂದ ನೌಕರರಿಗೆ ಸೂಚಿಸಿದೆ, ಇದಕ್ಕೆ ವೈದ್ಯಕೀಯ ಪ್ರಮಾಣ ಪತ್ರ ಕಡ್ಡಾಯ ಎಂದು ಹೇಳಿರುವುದರಿಂದ ಬಿಎಂಟಿಸಿ ನೌಕರರು ಪ್ರಮಾಣ ಪತ್ರ ಪಡೆಯಲು ಮುಗಿಬಿದ್ದಿದ್ದಾರೆ.
ಸಾಮಾಜಿಕ ಅಂತರ ಮರೆತು ವೈದ್ಯಕೀಯ ಪ್ರಮಾಣಪತ್ರ ಪಡೆಯಲು ಕೆಂಗೇರಿ ಬಸ್ ನಿಲ್ದಾಣದಲ್ಲಿ ನೂರಾರು ಮಂದಿ ಸೇರಿದ್ದಾರೆ. ಬಿಎಂಟಿಸಿಯ ನಿರ್ಲಕ್ಷ್ಯದಿಂದ ಇದೀಗ ಆತಂಕ ಎದುರಾಗಿದೆ.

ಕೇವಲ ಭಾನುವಾರದವರೆಗೆ ಪ್ರಮಾಣ ಪತ್ರ ಪಡೆಯಲು ಸಮಯ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನೌಕರರಿಗೆ ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣ, ಶಾಂತಿನಗರ ಸಾರಿಗೆ ಘಟಕ, ಶಾಂತಿ ನಗರ ಬಿಎಂಟಿಸಿ ಆಸ್ಪತ್ರೆ, ಯಶವಂತಪುರ ಬಿಎಂಟಿಸಿ ಘಟಕ, ಕೆಂಗೇರಿ ಟಿಟಿಎಂಸಿ ಹಾಗೂ ಹೆಣ್ಣೂರು ಘಟಕಗಳಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.
ಶುಕ್ರವಾರ ಸುತ್ತೋಲೆ ಹೊರಡಿಸಿದ್ದ ಬಿಎಂಟಿಸಿ, ಲಾಕ್ಡೌನ್ನಿಂದ ಸ್ಥಗಿತಗೊಂಡಿದ್ದ ಬಸ್ ಸೇವೆ ಮತ್ತೆ ಆರಂಭವಾಗುವ ಸುಳಿವನ್ನು ನೀಡಿತ್ತು. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್ಡೌನ್ ಜಾರಿಗೊಳಿಸಿದ ಹಿನ್ನೆಲೆ ಬಿಎಂಟಿಸಿ ಸೇರಿದಂತೆ ಎಲ್ಲಾ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.
ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಂಡಿದ್ದವು. ಕೆಲ ಬಿಎಂಟಿಸಿ ಬಸ್ಗಳು ತುರ್ತು ಆರೋಗ್ಯ ಸೇವೆಗಾಗಿ ರಸ್ತೆಗೆ ಇಳಿದಿದ್ದವು.
ಈಗ ಸರ್ಕಾರವು ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆ ಸಾರಿಗೆ ಇಲಾಖೆಯನ್ನು ಅಗತ್ಯ ಸೇವೆ ಸಲ್ಲಿಸುವ ಇಲಾಖೆ ಎಂದು ಪರಿಗಣಿಸಿದೆ. ಸದರಿ ಇಲಾಖೆಯಲ್ಲಿ ಬಿಎಂಟಿಸಿಯು ಒಳಪಡುತ್ತದೆ.
ಆದ್ದರಿಂದ ಮೇ 17ರಂದು ಲಾಕ್ಡೌನ್ ಅವಧಿ ಪೂರ್ಣಗೊಳ್ಳಲಿದ್ದು, ಮೇ 18ರಿಂದ ಅಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿತ್ತು.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications