ಬಿಎಂಟಿಸಿ ಬಸ್ನಲ್ಲಿ ಮರೆತುಬಿಟ್ಟ ಚಿನ್ನದ ಸರಗಳಿದ್ದ ಬ್ಯಾಗ್ ಹಿಂತಿರುಗಿಸಿದ ಸಿಬ್ಬಂದಿಗೆ ಸಲಾಂ ಎಂದ ಮಹಿಳೆ: ವಿಡಿಯೋ ವೈರಲ್
BMTC: ಈಗಿನ ಕಾಲದಲ್ಲಿ ಒಂದು ರೂಪಾಯಿ ಸಿಕ್ಕರೂ ಬಿಡುವುದಿಲ್ಲ. ಅದರಲ್ಲೂ ಹೆಚ್ಚಿನ ಪ್ರಮಾಣದ ಹಣ, ಚಿನ್ನ ಸಿಕ್ಕರಂತೂ ಅದನ್ನು ಯಾರಿಗೆ ಕಾಣದಂತೆ ತಮ್ಮ ಜೇಬಿಗಿಳಿಸಿರುವ ಘಟನೆಗಳು ನಡೆದಿವೆ. ಇಂತಹದ್ದರ ನಡುವೆ ಬಿಎಂಟಿಸಿ ಬಸ್ವೊಂದರಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಚಿನ್ನದ ಸರಗಳಿದ್ದ ಬ್ಯಾಗ್ ಅನ್ನು ಹಿಂತಿರುಗಿಸಿ ಚಾಲಕ, ನಿರ್ವಾಹಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಮಾಕರ ಬಳಿ ಸುಲಿಗೆ ಮಾಡುವುದನ್ನು ಕೇಳಿಯೇ ಇರುತ್ತೇವೆ. ಮತ್ತೊಂದೆಡೆ, ಸಿಕ್ಕ ವಸ್ತುಗಳನ್ನು ಮಾಲೀಕರಿಗೆ ಹಿಂತಿರುಗಿಸಿದ ಅಪರೂಪದ ಘಟನೆಗಳು ಕೂಡ ನಡೆದಿವೆ. ಹಾಗೆಯೇ ಇದೀಗ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ನಲ್ಲಿ ಮಹಿಳಾ ಪ್ರಯಾಣಿಕರಬ್ಬರು ಬಿಟ್ಟು ಹೋಗಿದ್ದ ಚಿನ್ನದ ಸರಗಳಿದ್ದ ಬ್ಯಾಗ್ ಹಿಂತಿರುಗಿಸಿದ ಚಾಲಕ ಹಾಗೂ ಕಂಡಕ್ಟರ್ಗೆ ಮೆಚ್ಚುಗೆಗಳ ಸುರಿಮಳೆಯೇ ಹರಿದುಬರುತ್ತಿದೆ.

ಹೌದು.. ಬೆಂಗಳೂರಿನಂತಹ ನಗರದಲ್ಲಿ ಯಾವುದಾದರೂ ವಸ್ತುಗಳು ಕಳೆದುಹೋದರೆ, ಅದು ಮತ್ತೆ ಸಿಗುತ್ತದೆ ಎಂಬ ಗ್ಯಾರಂಟಿ ಇರುವುದಿಲ್ಲ. ಇಂತಹದ್ದರ ನಡುವೆಯೂ ಈ ಕಾಲದಲ್ಲಿ ಮಾನವೀಯತೆ ಮೆರೆಯುವವರು ಇದ್ದಾರೆ ಎನ್ನುವುದಕ್ಕೆ ಈ ಬಿಎಂಟಿಸಿ ಸಿಬ್ಬಂದಿಯೇ ಸಾಕ್ಷಿ. ಮಹಿಳೆಯು ತಮ್ಮ ಬ್ಯಾಗ್ ಅನ್ನು KA57F-1591 ನಂಬರ್ನ ಬಸ್ನಲ್ಲಿ ಮರೆತು ಬಿಟ್ಟುಹೋಗಿದ್ದರು.
ಸಾರ್ವಜನಿಕರಿಂದ ಮೆಚ್ಚುಗೆಗಳ ಸುರಿಮಳೆ: ಬಳಿಕ, ಬಿಎಂಟಿಸಿ ಬಸ್ ಕಂಡಕ್ಟರ್ ಆ ಮಹಿಳೆಯ ಕರೆಸಿ ಬ್ಯಾಗ್ ಅನ್ನು ಹಿಂತಿರುಗಿಸಿ, ಮಾನವೀಯತೆ ಮೆರೆದಿದ್ದಾರೆ. ಬ್ಯಾಗ್ ನೋಡುತ್ತಿದ್ದಂತೆ ಮಹಿಳೆ ಭಾವುಕರಾಗಿ, ಅದರಲ್ಲಿದ್ದ ಬೆಲೆ ಬಾಳುವ ಆಭರಣ ಹುಡುಕಿ, ಅದನ್ನು ನೋಡಿ ಕಣ್ಣೀರಿಟ್ಟಿದ್ದಾರೆ. ಬಳಿಕ ಸಿಬ್ಬಂದಿಯ ಪ್ರಾಮಾಣಿಕತೆಗೆ ಧನ್ಯವಾದ ತಿಳಿಸಿದ್ದಾರೆ. ಆಗ ಅವರನ್ನು ಸಿಬ್ಬಂದಿ ಸಮಾಧಾನಪಡಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆಗಳ ಸುರಿಮಳೆಯೇ ಹರಿದುಬರುತ್ತಿದೆ.
ಪ್ರಾಮಾಣಿಕತೆ ಮೆರೆದ ಬಿಎಂಟಿಸಿ ಸಿಬ್ಬಂದಿ: ಬೆಂಗಳೂರು ನಗರದ ಬಿಎಂಟಿಸಿ ಬಸ್ನಲ್ಲಿ ಅಪರೂಪದ ಮಾನವೀಯತೆ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೊಬ್ಬರು ತಮ್ಮ ಚಿನ್ನದ ಸರಗಳಿರುವ ಬ್ಯಾಗ್ ಅನ್ನು KA57F-1591 ಸಂಖ್ಯೆಯ ಬಸ್ನಲ್ಲಿ ಮರೆತು ಬಿಟ್ಟುಹೋಗಿದ್ದರು. ಸಾಮಾನ್ಯವಾಗಿ ನಗರದಲ್ಲಿ ವಸ್ತುಗಳು ಮರಳಿ ಸಿಗುವುದಿಲ್ಲ. ಆದರೆ, ಈ ಬಸ್ ಚಾಲಕ ಮತ್ತು ಕಂಡಕ್ಟರ್ ಬ್ಯಾಗ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಬಿಎಂಟಿಸಿ ಬಸ್ ಸಿಬ್ಬಂದಿ ಬ್ಯಾಗ್ ಕಂಡು ಮಹಿಳೆಯನ್ನು ಸಂಪರ್ಕಿಸಿ, ಅದನ್ನು ಸುರಕ್ಷಿತವಾಗಿ ಹಿಂತಿರುಗಿಸಿದ್ದಾರೆ. ಬ್ಯಾಗ್ ನೋಡಿದ ಮಹಿಳೆ ಭಾವುಕರಾಗಿ ಕಣ್ಣೀರು ಹಾಕಿ ಧನ್ಯವಾದ ಸೂಚಿಸಿದ್ದಾರೆ. ಈ ಘಟನೆ ಸಮಾಜದಲ್ಲಿ ಮಾನವೀಯತೆ ಮತ್ತು ಪ್ರಾಮಾಣಿಕತೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications