ಬಿಎಂಟಿಸಿ ಬಸ್ನಲ್ಲಿ ಮರೆತುಬಿಟ್ಟ ಚಿನ್ನದ ಸರಗಳಿದ್ದ ಬ್ಯಾಗ್ ಹಿಂತಿರುಗಿಸಿದ ಸಿಬ್ಬಂದಿಗೆ ಸಲಾಂ ಎಂದ ಮಹಿಳೆ: ವಿಡಿಯೋ ವೈರಲ್
BMTC: ಈಗಿನ ಕಾಲದಲ್ಲಿ ಒಂದು ರೂಪಾಯಿ ಸಿಕ್ಕರೂ ಬಿಡುವುದಿಲ್ಲ. ಅದರಲ್ಲೂ ಹೆಚ್ಚಿನ ಪ್ರಮಾಣದ ಹಣ, ಚಿನ್ನ ಸಿಕ್ಕರಂತೂ ಅದನ್ನು ಯಾರಿಗೆ ಕಾಣದಂತೆ ತಮ್ಮ ಜೇಬಿಗಿಳಿಸಿರುವ ಘಟನೆಗಳು ನಡೆದಿವೆ. ಇಂತಹದ್ದರ ನಡುವೆ ಬಿಎಂಟಿಸಿ ಬಸ್ವೊಂದರಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಚಿನ್ನದ ಸರಗಳಿದ್ದ ಬ್ಯಾಗ್ ಅನ್ನು ಹಿಂತಿರುಗಿಸಿ ಚಾಲಕ, ನಿರ್ವಾಹಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಮಾಕರ ಬಳಿ ಸುಲಿಗೆ ಮಾಡುವುದನ್ನು ಕೇಳಿಯೇ ಇರುತ್ತೇವೆ. ಮತ್ತೊಂದೆಡೆ, ಸಿಕ್ಕ ವಸ್ತುಗಳನ್ನು ಮಾಲೀಕರಿಗೆ ಹಿಂತಿರುಗಿಸಿದ ಅಪರೂಪದ ಘಟನೆಗಳು ಕೂಡ ನಡೆದಿವೆ. ಹಾಗೆಯೇ ಇದೀಗ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ನಲ್ಲಿ ಮಹಿಳಾ ಪ್ರಯಾಣಿಕರಬ್ಬರು ಬಿಟ್ಟು ಹೋಗಿದ್ದ ಚಿನ್ನದ ಸರಗಳಿದ್ದ ಬ್ಯಾಗ್ ಹಿಂತಿರುಗಿಸಿದ ಚಾಲಕ ಹಾಗೂ ಕಂಡಕ್ಟರ್ಗೆ ಮೆಚ್ಚುಗೆಗಳ ಸುರಿಮಳೆಯೇ ಹರಿದುಬರುತ್ತಿದೆ.

ಹೌದು.. ಬೆಂಗಳೂರಿನಂತಹ ನಗರದಲ್ಲಿ ಯಾವುದಾದರೂ ವಸ್ತುಗಳು ಕಳೆದುಹೋದರೆ, ಅದು ಮತ್ತೆ ಸಿಗುತ್ತದೆ ಎಂಬ ಗ್ಯಾರಂಟಿ ಇರುವುದಿಲ್ಲ. ಇಂತಹದ್ದರ ನಡುವೆಯೂ ಈ ಕಾಲದಲ್ಲಿ ಮಾನವೀಯತೆ ಮೆರೆಯುವವರು ಇದ್ದಾರೆ ಎನ್ನುವುದಕ್ಕೆ ಈ ಬಿಎಂಟಿಸಿ ಸಿಬ್ಬಂದಿಯೇ ಸಾಕ್ಷಿ. ಮಹಿಳೆಯು ತಮ್ಮ ಬ್ಯಾಗ್ ಅನ್ನು KA57F-1591 ನಂಬರ್ನ ಬಸ್ನಲ್ಲಿ ಮರೆತು ಬಿಟ್ಟುಹೋಗಿದ್ದರು.
ಸಾರ್ವಜನಿಕರಿಂದ ಮೆಚ್ಚುಗೆಗಳ ಸುರಿಮಳೆ: ಬಳಿಕ, ಬಿಎಂಟಿಸಿ ಬಸ್ ಕಂಡಕ್ಟರ್ ಆ ಮಹಿಳೆಯ ಕರೆಸಿ ಬ್ಯಾಗ್ ಅನ್ನು ಹಿಂತಿರುಗಿಸಿ, ಮಾನವೀಯತೆ ಮೆರೆದಿದ್ದಾರೆ. ಬ್ಯಾಗ್ ನೋಡುತ್ತಿದ್ದಂತೆ ಮಹಿಳೆ ಭಾವುಕರಾಗಿ, ಅದರಲ್ಲಿದ್ದ ಬೆಲೆ ಬಾಳುವ ಆಭರಣ ಹುಡುಕಿ, ಅದನ್ನು ನೋಡಿ ಕಣ್ಣೀರಿಟ್ಟಿದ್ದಾರೆ. ಬಳಿಕ ಸಿಬ್ಬಂದಿಯ ಪ್ರಾಮಾಣಿಕತೆಗೆ ಧನ್ಯವಾದ ತಿಳಿಸಿದ್ದಾರೆ. ಆಗ ಅವರನ್ನು ಸಿಬ್ಬಂದಿ ಸಮಾಧಾನಪಡಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆಗಳ ಸುರಿಮಳೆಯೇ ಹರಿದುಬರುತ್ತಿದೆ.
ಪ್ರಾಮಾಣಿಕತೆ ಮೆರೆದ ಬಿಎಂಟಿಸಿ ಸಿಬ್ಬಂದಿ: ಬೆಂಗಳೂರು ನಗರದ ಬಿಎಂಟಿಸಿ ಬಸ್ನಲ್ಲಿ ಅಪರೂಪದ ಮಾನವೀಯತೆ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೊಬ್ಬರು ತಮ್ಮ ಚಿನ್ನದ ಸರಗಳಿರುವ ಬ್ಯಾಗ್ ಅನ್ನು KA57F-1591 ಸಂಖ್ಯೆಯ ಬಸ್ನಲ್ಲಿ ಮರೆತು ಬಿಟ್ಟುಹೋಗಿದ್ದರು. ಸಾಮಾನ್ಯವಾಗಿ ನಗರದಲ್ಲಿ ವಸ್ತುಗಳು ಮರಳಿ ಸಿಗುವುದಿಲ್ಲ. ಆದರೆ, ಈ ಬಸ್ ಚಾಲಕ ಮತ್ತು ಕಂಡಕ್ಟರ್ ಬ್ಯಾಗ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಬಿಎಂಟಿಸಿ ಬಸ್ ಸಿಬ್ಬಂದಿ ಬ್ಯಾಗ್ ಕಂಡು ಮಹಿಳೆಯನ್ನು ಸಂಪರ್ಕಿಸಿ, ಅದನ್ನು ಸುರಕ್ಷಿತವಾಗಿ ಹಿಂತಿರುಗಿಸಿದ್ದಾರೆ. ಬ್ಯಾಗ್ ನೋಡಿದ ಮಹಿಳೆ ಭಾವುಕರಾಗಿ ಕಣ್ಣೀರು ಹಾಕಿ ಧನ್ಯವಾದ ಸೂಚಿಸಿದ್ದಾರೆ. ಈ ಘಟನೆ ಸಮಾಜದಲ್ಲಿ ಮಾನವೀಯತೆ ಮತ್ತು ಪ್ರಾಮಾಣಿಕತೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications