BMTC: ಧಗಧಗಿಸಿದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್
ಬೆಂಗಳೂರು, ಏಪ್ರಿಲ್, 05: ಇತ್ತೀಚಿನ ದಿನಗಳಲ್ಲಿ ಎಲೆಕ್ಷ್ರಾನಿಕ್ ವಾಹನಗಳು ಇದ್ದಕ್ಕಿದ್ದಂತೆ ಹೊತ್ತಿ ಉರಿದಿರುವ ಘಟನೆಗಳು ನಡೆದಿವೆ. ಅದೇ ರೀತಿ ಇಂದು (ಏಪ್ರಿಲ್ 05) ಮಧ್ಯಾಹ್ನ ಬೆಂಗಳೂರಿನ ಹೊರವಲಯದ ಬಿಡದಿಯ ರೈಲ್ವೆ ನಿಲ್ದಾಣದ ಹತ್ತಿರ ಬಿಎಂಟಿಸಿ ಇ.ವಿ.ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸುತ್ತಲೂ ಮಂಜಿನಂತೆ ದಟ್ಟ ಹೊಗೆ ಆವರಿಸಿದೆ. ಸದ್ಯ ಬಸ್ನಲ್ಲಿ ಯಾರೂ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಅನಾಹುತಗಳು ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಇಂದು ಸುಮಾರು 3.40ರ ವೇಳೆಗೆ ಈ ಘಟನೆ ನಡೆದಿದ್ದು, ಬಿಡಡಿ ಬಳಿಯ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಪೋ ಆವರಣದಲ್ಲಿ ನಿಲ್ಲಿಸಿದ್ದ ವೇಳೆ ಬಸ್ನಲ್ಲಿದ್ದ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗ ಬಸ್ನಲ್ಲಿ ದಿಢೀರ್ ಹೊಗೆ ಕಾಣಿಸಿಕೊಂಡ ತಕ್ಷಣ ಡಿಪೋ ಸಿಬ್ಬಂದಿ ಈ ದೃಶ್ಯವನ್ನು ಕಂಡು ಆತಂಕಕ್ಕೆ ಒಳಗಾಗಿದ್ದರು. ಇನ್ನು ಈ ವೇಳೆ ತಕ್ಷಣ ತಾಂತ್ರಿಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿತ್ತು.

ಅದರಲ್ಲೂ ಇದೀಗ ದಿನದಿಂದ ದಿನಕ್ಕೆ ತಾಪಮಾನದ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದ ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಇನ್ನು ನಗರದಲ್ಲಿ ವಾಹನಗಳನ್ನು ನಿಲ್ಲಿಸಲು ಎಲ್ಲಿ ನೆರಳು ಸಿಗುತ್ತದೆಯೋ ಎಂದು ಕಾಯುತ್ತಿರುತ್ತಾರೆ. ಇನ್ನು ಬೆಂಗಳೂರಿನ ಜೀನನಾಡಿ ಸಾರಿಗೆಯಲ್ಲೊಂದಾದ ಬಿಎಂಟಿಸಿ ಬಸ್ಗಳು ದಿನದ ಬೆಳ್ಳಗೆಯಿಂದಲೂ ಸಂಜೆವರೆಗೂ ಯಾವುದೇ ಬಿಸಿಲನ್ನೂ ಲೆಕ್ಕಿಸದೇ ಪ್ರಯಾಣಿಕರನ್ನು ಒಂದು ಕಡೆಯಿಂದ ಮತ್ತೊಂದೆಡೆಗೆ ಹೊತ್ತೊಯ್ಯುತ್ತಲೇ ಇರುತ್ತವೆ.
A BMTC Switch (AL) non-AC electric bus caught fire at Bidadi depot (49). No injuries have been reported@BMTC_BENGALURU pic.twitter.com/coxy0UM8kO
— ChristinMathewPhilip (@ChristinMP_) April 5, 2024
ಈ ಸಾರಿಗಗಳಲ್ಲಿ ಕೆಸಲ ಮಾಡುವ ಚಾಲಕ ಮತ್ತು ನಿರ್ವಾಹಕರ ಪಾಡಂತೂ ಹೇಳತೀರದಾಗಿರುತ್ತದೆ. ಯಾವಾಗ ವಿಶ್ರಾಂತಿಗೆ ನೆಲ ಸಿಗುತ್ತದೆಯೋ ಎನ್ನುವ ಪರಿಸ್ಥಿತಿಯಲ್ಲಿರುತ್ತಾರೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
BMTC: 3 ನಿಲ್ದಾಣಗಳಿಂದ ಮೆಟ್ರೋ ಫೀಡರ್ ಬಸ್ ಸೇವೆ ಆರಂಭ: ಸಂಚಾರ ಮಾರ್ಗ, ಸಮಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications