ಬಿಎಂಟಿಸಿ ನೌಕರರ ಪ್ರತಿಭಟನೆ: ಬಸ್ ಸಂಚಾರದಲ್ಲಿ ವ್ಯತ್ಯಯವಿಲ್ಲ
ಬೆಂಗಳೂರು, ಜನವರಿ 27: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಸರ್ಕಾರ ಪರಿಗಣಿಸಬೇಕು ಎಂದು ಒತ್ತಾಯಿಸಿ ಬಿಎಂಟಿಸಿ ಬಸ್ ನೌಕರರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದು, ಆದರೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ.
ಬಿಎಂಟಿಸಿ ಚಾಲಕರು ಹಾಗೂ ನಿರ್ವಾಹಕರು ಪ್ರತಿಭಟನೆಯಲ್ಲಿ ಭಾಗವಹಿಸಿದರೆ ಬಿಎಂಟಿಸಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದೆಂಬ ಆತಂಕದಲ್ಲಿ ಸಾರ್ವಜನಿಕರಿದ್ದರು.
ಆದರೆ ಇದ್ಯಾವುದಕ್ಕೂ ಬಿಎಂಟಿಸಿ ನೌಕರರು ಅವಕಾಶ ನೀಡದೆ ಒಂದೆಡೆ ಉಪವಾಸ ಪ್ರತಿಭಟನೆ ಆರಂಭಿಸಿದ್ದು, ಇನ್ನೊಂದೆಡೆ ಒಂದಷ್ಟು ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಒಟ್ಟಿನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುತ್ತಿಲ್ಲ.

ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 7.00 ಗಂಟೆಯಿಂದ ಆರಂಭಿಸಿದ್ದು, ಸಂಜೆ 5.00 ಗಂಟೆಯವರೆಗೆ ಕುಟುಂಬ ಸದಸ್ಯರೊಂದಿಗೆ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ. ಉಪವಾಸ ಸತ್ಯಾಗ್ರಹದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಸೆಕೆಂಡ್ ಶಿಫ್ಟ್ ನಲ್ಲಿರುವವರು ಭಾಗವಹಿಸುತ್ತಾರೆ.
ಮಾರ್ನಿಂಗ್ ಶಿಫ್ಟ್ ನಲ್ಲಿ ಕೆಲಸ ಮಾಡಿರುವವರು ಮಧ್ಯಾಹ್ನದ ನಂತರ ಹೋಗಿ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಲಿದ್ದಾರೆಂದು ಬಿಎಂಟಿಸಿ ಮೂಲಗಳಿಂದ ತಿಳಿದು ಬಂದಿದೆ.
ಕಳೆದ ಸಮ್ಮಿಶ್ರ ಸರ್ಕಾರ ಬಿಎಂಟಿಸಿ ನೌಕಕರರ ಒತ್ತಾಯಕ್ಕೆ ಮಣಿಯದೇ ಇದ್ದ ಕಾರಣ ಮತ್ತೆ ಬಿಎಂಟಿಸಿ ನೌಕರರು ಉಪವಾಸ ಸತ್ಯಾಗ್ರಹ ಮಾಡುವುದರ ಮೂಲಕ ಸರ್ಕಾರದ ಮೇಲೆ ಒತ್ತಡ ಏರಲು ತೀರ್ಮಾನಿಸಿದ್ದಾರೆ.
ಬಿಎಂಟಿಸಿ ನೌಕರರು ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನ ನೀಡಲಿದ್ದಾರೆ. ಕಳೆದ ಬಾರಿ ಸಮ್ಮಿಶ್ರ ಸರ್ಕಾರ ಇದ್ದ ಸಂದರ್ಭದಲ್ಲಿ ಪತ್ರ ಚಳುವಳಿ ಮಾಡಿ ನಮ್ಮನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications