BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) mhiL ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ ಯೋಜನೆ' ಕಾರಣದಿಂದಾಗಿ ಆರ್ಥಿಕವಾಗಿ ನಲುಗುವಂತಾಗಿದೆ. ಏಕೆಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಟಿಕೆಟ್ ಹಣವನ್ನು ರಾಜ್ಯ ಸರ್ಕಾರ ನೀಡುತ್ತದೆ. ಅದರಲ್ಲಿ ಸುಮಾರು 850 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ನಿಗಮವು ಸದ್ಯ ಹಣದ ಕೊರತೆ ಎದುರಿಸುತ್ತಿದೆ.
ವಿಧಾನಪರಿಷತ್ನಲ್ಲಿ ಎಂಎಲ್ಸಿ ಎಚ್.ಎಸ್. ಗೋಪಿನಾಥ್ಕೇಳಲಾದ ಮಹಿಳೆಯ ಉಚಿತ ಬಸ್ ಪ್ರಯಾಣ, ದರ ಮರುಪಾವತಿ ಕುರಿತು ಕೇಳಿದ ಪ್ರಶ್ನೆಗೆ ಸರ್ಕಾರ ನೀಡಿದ ಉತ್ತರದಲ್ಲಿ ಈ ಮಾಹಿತಿ, ಅಂಕಿ ಸಂಖ್ಯೆಗಳು ಲಭ್ಯವಾಗಿದೆ. ಮೂರು ವರ್ಷಗಳ ಹಿಂದೆ ಐದು ಗ್ಯಾರಂಟಿಗಳಲ್ಲಿ ಅನುಷ್ಠಾನಗೊಂಡ ಮೊದಲ ಯೊಜನೆ ಎಂದರೆ ಅದು 'ಶಕ್ತಿ ಯೋಜನೆ'. ಅಲ್ಲಿಂದ ಈವರೆಗೆ 680 ಕೋಟಿಗೂ ಅಧಿಕ ಮಹಿಳೆಯರು ಸಾರಿಗೆ ಬಸ್ಗಳಲ್ಲಿ ಓಡಾಡಿದ್ದಾರೆ. ಈ ಪೈಕಿ ಬಿಎಂಟಿಸಿಯು 217.62 ಕೋಟಿ ಟಿಕೆಟ್ಗಳನ್ನು ನೀಡಿದೆ.

ಸರ್ಕಾರದಿಂದ 850 ಕೋಟಿ ರೂ ಹಣ ಬಂದಿಲ್ಲ
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅವಕಾಶ ನೀಡಿದ ಬಿಎಂಟಿಸಿ ಸರ್ಕಾರದ ಕಡೆಯಿಂದ ಬರೋಬ್ಬರಿ 3,097.27 ಕೋಟಿ ರೂ. ಹಣ ಪಡೆಯಬೇಕಿದೆ. ಆದರೆ ಈವರೆಗೆ ರಾಜ್ಯ ಸರ್ಕಾರ ಕೇವಲ 2,247.35 ಕೋಟಿ ರೂ.ಗಳನ್ನು ಮರು ಪಾವತಿಸಿದೆ. ಉಳಿದ ಸುಮಾರು 850 ಕೋಟಿ ರೂ.ಗಳನ್ನು ಈವರೆಗೆ ನೀಡಿಲ್ಲ. ಇದರಿಂದ ಬಿಎಂಟಿಸಿಗೆ ಆರ್ಥಿಕ ಕೊರತೆ ಉಂಟಾಗಿದೆ. ಸದನಲ್ಲಿ ಈ ಬಗ್ಗೆ ದೊರೆತ ಅಂಕಿ ಅಂಶಗಳನ್ನು ನೋಡಿದರೆ ಶಕ್ತಿ ಯೋಜನೆಯಿಂದ ನಿಗಮ ತೊಂದರೆ ಅನುಭವಿಸುತ್ತಿರುವುದನ್ನು ಸರ್ಕಾರವೇ ಒಪ್ಪಿಕೊಂಡಂತಾಗಿದೆ.
ಹಣ ಬಾಕಿ ಪಾವತಿ ಆಗದ ಹಿನ್ನೆಲೆಯಲ್ಲಿ ಬಿಎಂಟಿಸಿ ಆರ್ಥಿಕ ಒತ್ತಡದಲ್ಲಿದೆ. ಶಕ್ತಿ ಯೋಜನೆ ಜಾರಿ ಮೊದಲೇ ಬಿಎಂಟಿಸಿ ನಿಗಮ ಕೋಟ್ಯಾಂತರ ರೂಪಾಯಿ ಹೊಣೆಗಾರಿಕೆ ಹೊಂದಿತ್ತು. ಇಂಧನ ಖರೀದಿಗೆ ಬಾಕಿ, ಭವಿಷ್ಯ ನಿಧಿ ಬಾಧ್ಯತೆ, ಸಿಬ್ಬಂದಿ ವೇತನ ಪರಿಷ್ಕರಣೆ, ನಿರ್ವಹಣೆ ವೆಚ್ಚಗಳು ಒಳಗೊಂಡು ಸುಮಾರು 1,383.86 ಕೋಟಿ ರೂ.ಗಳ ಹೊಣೆಗಾರಿಕೆ ಹೊಂದಿತ್ತು ಎಂದು ಮೂಲಗಳು ತಿಳಿಸಿವೆ.
ಇದರ ನಡುವೆ ಎಂದಿನಂತೆ ಬಿಎಂಟಿಸಿ ಬಸ್ಗಳು ನಗರಾದ್ಯಂತೆ ಸೇವೆ ನೀಡುತ್ತಿವೆ. ಹೀಗಿದ್ದರೂ ಸಹಿತ ಸರ್ಕಾರ ಕೋಟ್ಯಾಂತರ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಇದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ. ಸರ್ಕಾರ ಪ್ರತಿ ತಿಂಗಳು ಮುಂಚಿತವಾಗಿ ಹಣ ಬಿಡುಗಡೆ ಮಾಡುತ್ತದೆ. ಬಿಎಂಟಿಸಿ ಸಂಸ್ಥೆಯ ಹಣಕಾಸು ಸ್ಥಿತಿಗತಿ ಸ್ಥಿರವಾಗಿಸಲು ಸರ್ಕಾರ ಮರುಪಾವತಿಗೆ ಆರ್ಥಿಕ ಬೆಂಬಲ ನೀಡುವುದು, 589.20 ಕೋಟಿ ರೂ. ಸಾಲ ಸಂಗ್ರಹಕ್ಕೆ ಅನುಮತಿ ನೀಡುವುದು ಸೇರಿ ಕೆಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಬಗ್ಗೆ ಮಾಹಿತಿ ನೀಡಿದೆ.
ಬಿಎಂಟಿಸಿ ಹೊಸ ಬಸ್ ಖರೀದಿ, ಡೀಸೆಲ್ ಬಸ್ ಘೋಷಣೆ
ಅಗತ್ಯ ಹಣ ನೀಡಬಹುದಿತ್ತು. ಡೀಸೆಲ್ ಮತ್ತು ಎಲೆಕ್ಟ್ರಿಕ್ ಬಸ್ಗಳನ್ನು ನಿಗಮಕ್ಕೆ ಸೇರ್ಪಡೆಗೊಳಿಸುವ ಯೋಜನೆ ಪ್ರಗತಿಯಲ್ಲಿದೆ. ಪಿಎಂ ಇ-ಡ್ರೈವ್ ಅಡಿ 4,500 ಎಲೆಕ್ಟ್ರಿಕ್ ಬಸ್ಗಳ ಖರೀದಿಗೆ ಒಪ್ಪಿಗೆ, ಹೆಚ್ಚುವರಿ ಬಸ್ಗಳ ಪ್ಲೀಟ್ ವಿಸ್ತರಣೆಗೆ, ಆಧುನಿಕ ಸೌಲಭ್ಯ ಒದಗಿಸುವ ಸವಾಲುಗಳು ಸರ್ಕಾರದ ಮುಂದಿವೆ. ಪ್ರಸಕ್ತ ಹಣಕಾಸು ವರ್ಷದಲ್ಲಿ (2026-279 ಬಜೆಟ್ನಲ್ಲಿ ಹೆಚ್ಚುವರಿಯಾಗಿ 1,000 ಡೀಸೆಲ್ ಬಸ್ಗಳ ಸೇರ್ಪಡೆ ಬಗ್ಗೆ ಘೋಷಣೆ ಮಾಡಲಾಗಿದೆ. ಅದಕ್ಕೆಲ್ಲ ಕೋಟಿಗಟ್ಟಲೇ ಹಣ ವ್ಯಯಿಸಬೇಕಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಬಿಎಂಟಿಸಿ ಜೊತೆಗೆ ಕೆಎಸ್ಆರ್ಟಿಸಿ. ಎನ್ಡಬ್ಲುಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಗಳಿಗೆ ನೀಡುವ ಹಣದ ಕುರಿತು ವಿಪಕ್ಷಗಳು ಸಾಕಷ್ಟು ಆರೋಪಿಸಿದ್ದವು. ಶಕ್ತಿಯಿಂದ ರಾಜ್ಯದ ಸಾರಿಗೆ ನಿಗಮಗಳು ಆರ್ಥಿಕ ಶಕ್ತಿ ಕಳೆದುಕೊಂಡಿವೆ ಎಂದು ದೂರಿದ್ದರು.
-
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gas Bill: ಗ್ಯಾಸ್ ಬಿಲ್ ಹೆಸರಲ್ಲಿ 1 ಕೋಟಿ ರೂಪಾಯಿಗೂ ಹೆಚ್ಚು ಲೂಟಿ ಮಾಡಿದ ಸೈಬರ್ ವಂಚಕರು -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಜೆಎಎಲ್ ದಿವಾಳಿ ಪ್ರಕ್ರಿಯೆ ಬಗ್ಗೆ ವೇದಾಂತ ಆಕ್ಷೇಪ; ಅದಾನಿ ಬಿಡ್ಗೆ ಸಾಲದಾತರ ಸಮಿತಿ, ನ್ಯಾಯಮಂಡಳಿಗಳ ಬೆಂಬಲ ದಾಖಲೆಗಳಿಂದ ದೃಢ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು













Click it and Unblock the Notifications