BMTC: ಟಿಕೆಟ್ ದರ ಏರಿಕೆ ಬಳಿಕ ಬಿಎಂಟಿಸಿ ದರ ಎಲ್ಲಿಗೆ, ಎಷ್ಟು?
ಬೆಂಗಳೂರು, ಜನವರಿ 05: ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದಂತೆ ರಾಜ್ಯದಲ್ಲಿ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಲು ಕರ್ನಾಟಕ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಜನವರಿ 5 ರಿಂದಲೇ ಪರಿಷ್ಕೃತ ದರಗಳು ಜಾರಿಗೆ ಬಂದಿವೆ. ಭಾನುವಾರ ಎಲ್ಲಿಂದ, ಎಲ್ಲಿಗೆ? ಎಷ್ಟು ದರ? ಎಂದು ಚರ್ಚೆಗಳು ಜೋರಾಗಿವೆ. ಪ್ರಯಾಣಿಕರು ಸರಿಯಾದ ಮಾಹಿತಿ ಇಲ್ಲದೇ ನಿರ್ವಾಹಕರ ಜೊತೆ ವಾಗ್ವಾದ ನಡೆಸುತ್ತಿರುವ ಪ್ರಕರಣಗಳು ಸಾಮಾನ್ಯವಾಗಿದೆ.
ಶನಿವಾರ ಕರ್ನಾಟಕ ಸರ್ಕಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಪರಿಷ್ಕರಿಸಲು ಅಂತಿಮ ಆದೇಶವನ್ನು ಹೊರಡಿಸಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಪುಷ್ಪ ವಿ. ಎಸ್. ಸರ್ಕಾರದ ಅಧೀನ ಕಾರ್ಯದರ್ಶಿ, ಸಾರಿಗೆ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಬಸ್ ಪ್ರಯಾಣ ದರವನ್ನು ಶೇಕಡ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ. ಈ ಆದೇಶವನ್ನು ಸಚಿವ ಸಂಪುಟವು ದಿನಾಂಕ 02.01.2025ರಲ್ಲಿ ನೀಡಿರುವ ಅನುಮೋದನೆಯನ್ವಯ ಹೊರಡಿಸಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬೆಂಗಳೂರು ನಗರದ ಜೀವನಾಡಿ. ಪ್ರತಿದಿನ ಲಕ್ಷಾಂತರ ಜನರು ಬಸ್ಗಳಲ್ಲಿ ಪ್ರಯಾಣ ಮಾಡುತ್ತಾರೆ. ಭಾನುವಾರದಿಂದಲೇ ಬಿಎಂಟಿಸಿ ಬಸ್ ದರ ಪರಿಷ್ಕರಣೆಯಾಗಿದೆ. ಪ್ರಕಟಣೆಯಲ್ಲಿ ಪ್ರಮುಖ ಮಾರ್ಗದಲ್ಲಿ ಎಷ್ಟು ದರ ಪರಿಷ್ಕರಣೆ? ಎಂದು ಬಿಎಂಟಿಸಿ ಮಾಹಿತಿ ನೀಡಿದೆ.
ಪ್ರಮುಖ ಮಾರ್ಗ, ಹಾಲಿ ಇರುವ, ಪರಿಷ್ಕೃತ ದರ ಪಟ್ಟಿ
* 15E ಮೆಜೆಸ್ಟಿಕ್- ಕುಮಾರಸ್ವಾಮಿ ಲೇಔಟ್: 25 ರೂ. ಇದ್ದ ದರ 28 ರೂ.ಗೆ ಏರಿಕೆ
* 25A ಮಜೆಸ್ಟಿಕ್- ಬಿಟಿಎಂ ಲೇಔಟ್: 25 ರೂ. ನಿಂದ 28 ರೂ.
* 45D ಮೆಜೆಸ್ಟಿಕ್- ಎಜಿಎಸ್ ಲೇಔಟ್: 25 ರೂ. ನಿಂದ 28 ರೂ.
* 80A ಮೆಜೆಸ್ಟಿಕ್- ನಂದಿನಿ ಲೇಔಟ್: 25 ರೂ. ನಿಂದ 28 ರೂ.
* 90E ಮೆಜೆಸ್ಟಿಕ್ - ಯಶವಂತಪುರ ರೈಲು ನಿಲ್ದಾಣ: 20 ರೂ. ನಿಂದ 23 ರೂ.
* 96G ಮೆಜೆಸ್ಟಿಕ್ - ಮೆಜೆಸ್ಟಿಕ್- ಶಂಕರ್ನಾಗ್ ಬಸ್ ನಿಲ್ದಾಣ: 20 ರೂ. ನಿಂದ 23 ರೂ.
* 143 ಕೆಆರ್ ಮಾರ್ಕೆಟ್ - ನೀಲಸಂದ್ರ ಬಸ್ ನಿಲ್ದಾಣ: 20 ರೂ. ನಿಂದ 23 ರೂ.
* 171G ಮೆಜೆಸ್ಟಿಕ್ - ಕೋರಮಂಗಲ ಮೊದಲ ಬ್ಲಾಕ್: 25 ರೂ. ನಿಂದ 28 ರೂ.
* 210N ಮೆಜೆಸ್ಟಿಕ್ - ಉತ್ತರಹಳ್ಳಿ: 25 ರೂ. ನಿಂದ 28 ರೂ.
* 252 ಮೆಜೆಸ್ಟಿಕ್ - ಪೀಣ್ಯ 2ನೇ ಹಂತ : 25 ರೂ. ನಿಂದ 28 ರೂ.
* 300E ಶಿವಾಜಿನಗರ ಬಸ್ ನಿಲ್ದಾಣ - ಕೆಆರ್ ಪುರ: 25 ರೂ. ನಿಂದ 28 ರೂ.
* 276 ಮೆಜೆಸ್ಟಿಕ್ - ವಿದ್ಯಾರಣ್ಯಪುರ ಬಸ್ ನಿಲ್ದಾಣ: 25 ರೂ. ನಿಂದ 28 ರೂ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications