ಬೆಂಗಳೂರು ಸೆಂಟ್ರಲ್ ಸಿಲ್ಕ್ ಬೋರ್ಡ್ ಸೇರಿ ಈ ಪ್ರದೇಶಗಳ ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ನ್ಯೂಸ್
ಬೆಂಗಳೂರು: ಬೆಂಗಳೂರಿನ ಸಾರಿಗೆ ಜೀವನಾಡಿಯಾಗಿ ಬಿಎಂಟಿಸಿ ಇದೆ. ಬಿಎಂಟಿಸಿಯು ದಶಕಗಳಿಂದ ಬೆಂಗಳೂರಿನ ಸಾರಿಗೆ ಜೀವನಾಡಿಯಾಗಿದೆ. ಉದ್ಯೋಗಸ್ಥರು, ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳ ನೆಚ್ಚಿನ ಸಾರಿಗೆ ಸೇವೆಯಾಗಿ ಬಿಎಂಟಿಸಿ ಉಳಿದಿದೆ. ಬಿಎಂಟಿಸಿ ಬಸ್ ಸೇವೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಿವೆ. ಅದಕ್ಕೆ ಈಗ ಹೊಸ ಬಸ್ಗಳ ಸೇರ್ಪಡೆ ಆಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕರಿಗೆ ಮತ್ತೊಂದು ಗುಡ್ನ್ಯೂಸ್ ಕೊಟ್ಟಿದೆ. ನೂತನ ಹವಾನಿಯಂತ್ರಿತ ವಜ್ರ ಮಾರ್ಗಸಂಖ್ಯೆ ವಿ-ಎಂಎಫ್-5 ಅನ್ನು ಪರಿಚಯಿಸುವುದಕ್ಕೆ ಮುಂದಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 24 ರಿಂದ ಜಾರಿಗೆ ಬರುವಂತೆ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣದಿಂದ ಇಂದಿರಾ ನಗರ ಪೋಲಿಸ್ ಸ್ಟೇಷನ್, ಮಿಲಿಟರಿ ಬ್ರಿಡ್ಜ್, ಕೋರಮಂಗಲ ವಾಟರ್ ಟ್ಯಾಂಕ್, ಮಡಿವಾಳ, ಮಾರ್ಗವಾಗಿ ಸೆಂಟ್ರಲ್ ಸಿಲ್ಕ್ ಬೋರ್ಡ್ಗೆ ನೂತನವಾಗಿ ಹವಾನಿಯಂತ್ರಿತ ಸಾರಿಗೆಗಳನ್ನು ಮಾರ್ಗಸಂಖ್ಯೆ - ವಿ-ಎಂಎಫ್-5 ರಲ್ಲಿ 04 ಕಾರ್ಯಾಚರಣೆಗೊಳಿಸಲಾಗುವುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ತಿಳಿಸಿದೆ.
ಮಾರ್ಗಸಂಖ್ಯೆ ವಿ-ಎಂಎಫ್-5 ವೇಳಾಪಟ್ಟಿ (ನಿರ್ಗಮನ ಸಮಯ)
ಸರ್.ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ
0515, 0550, 0700, 0745, 0915, 1010, 1040, 1110, 1205, 1235, 1310, 1340, 1530, 1600, 1645, 1715, 1805,1835, 1905, 1935, 2115, 2145
ಸೆಂಟ್ರಲ್ ಸಿಲ್ಕ್ ಬೋರ್ಡ್
0605, 0640, 0800, 0830, 0850, 0910, 1050, 1120, 1150, 1220, 1410, 1440, 1510, 1540, 1650, 1720, 1745, 1815, 2010, 2040, 2210, 2240
ಪ್ರಯಾಣಿಕರಿಗೆ ಅನುಕೂಲ: ಇನ್ನು ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕರಿಗೆ ಗುಡ್ನ್ಯೂಸ್ ಕೊಟ್ಟಿದೆ. ಇದರಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಹಾಗೂ ಸರ್ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ ಹಾಗೂ ಸುತ್ತಮುತ್ತ ಹೋಗುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಈ ಭಾಗದಲ್ಲಿ ಸಮೂಹ ಸಾರಿಗೆಗಳಿಗೆ ಹೆಚ್ಚಿನ ಬೇಡಿಕೆ ಇದೆ. ಇದಕ್ಕೆ ಮುಖ್ಯ ಕಾರಣ ಈ ಭಾಗಗಲ್ಲಿ ದಿನಿ ನಿತ್ಯವೂ ಟ್ರಾಫಿಕ್ ಜಾಮ್ ಹೆಚ್ಚಾಗಿ ಇರುತ್ತದೆ. ಹೀಗಾಗಿ, ಈ ಭಾಗದಲ್ಲಿ ಜನ ಹೆಚ್ಚು ಸಮೂಹ ಸಾರಿಗೆಯನ್ನು ಬಳಸುತ್ತಿದ್ದಾರೆ. ಇದೀಗ ಈ ಮಾರ್ಗದಲ್ಲಿ ಹೊಸ ಬಸ್ಗಳ ಸೇವೆ ನೀಡುವ ಮೂಲಕ ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟಂತೆ ಆಗಿದೆ.
-
Bengaluru: ಬೆಂಗಳೂರು ಸ್ವಚ್ಛ ಸರ್ವೇಕ್ಷಣಾ ಅಭಿಯಾನ: ನಟ ಅನಿರುದ್ಧ್ ಜಟ್ಕರ್ ಸೇರಿ 6 ರಾಯಭಾರಿಗಳ ಆಯ್ಕೆ -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
ಬೆಂಗಳೂರಲ್ಲಿ 1010 ಆಸ್ತಿದಾರರಿಂದ 33.89 ಕೋಟಿ ರೂ. ಆಸ್ತಿ ತೆರಿಗೆ ಬಾಕಿ: ಆಸ್ತಿದಾರರಿಗೆ ಜಿಬಿಎ ಫೈನಲ್ ವಾರ್ನಿಂಗ್ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers











Click it and Unblock the Notifications