ಬೆಂಗಳೂರು ಸೆಂಟ್ರಲ್ ಸಿಲ್ಕ್ ಬೋರ್ಡ್ ಸೇರಿ ಈ ಪ್ರದೇಶಗಳ ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ನ್ಯೂಸ್
ಬೆಂಗಳೂರು: ಬೆಂಗಳೂರಿನ ಸಾರಿಗೆ ಜೀವನಾಡಿಯಾಗಿ ಬಿಎಂಟಿಸಿ ಇದೆ. ಬಿಎಂಟಿಸಿಯು ದಶಕಗಳಿಂದ ಬೆಂಗಳೂರಿನ ಸಾರಿಗೆ ಜೀವನಾಡಿಯಾಗಿದೆ. ಉದ್ಯೋಗಸ್ಥರು, ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳ ನೆಚ್ಚಿನ ಸಾರಿಗೆ ಸೇವೆಯಾಗಿ ಬಿಎಂಟಿಸಿ ಉಳಿದಿದೆ. ಬಿಎಂಟಿಸಿ ಬಸ್ ಸೇವೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಿವೆ. ಅದಕ್ಕೆ ಈಗ ಹೊಸ ಬಸ್ಗಳ ಸೇರ್ಪಡೆ ಆಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕರಿಗೆ ಮತ್ತೊಂದು ಗುಡ್ನ್ಯೂಸ್ ಕೊಟ್ಟಿದೆ. ನೂತನ ಹವಾನಿಯಂತ್ರಿತ ವಜ್ರ ಮಾರ್ಗಸಂಖ್ಯೆ ವಿ-ಎಂಎಫ್-5 ಅನ್ನು ಪರಿಚಯಿಸುವುದಕ್ಕೆ ಮುಂದಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 24 ರಿಂದ ಜಾರಿಗೆ ಬರುವಂತೆ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣದಿಂದ ಇಂದಿರಾ ನಗರ ಪೋಲಿಸ್ ಸ್ಟೇಷನ್, ಮಿಲಿಟರಿ ಬ್ರಿಡ್ಜ್, ಕೋರಮಂಗಲ ವಾಟರ್ ಟ್ಯಾಂಕ್, ಮಡಿವಾಳ, ಮಾರ್ಗವಾಗಿ ಸೆಂಟ್ರಲ್ ಸಿಲ್ಕ್ ಬೋರ್ಡ್ಗೆ ನೂತನವಾಗಿ ಹವಾನಿಯಂತ್ರಿತ ಸಾರಿಗೆಗಳನ್ನು ಮಾರ್ಗಸಂಖ್ಯೆ - ವಿ-ಎಂಎಫ್-5 ರಲ್ಲಿ 04 ಕಾರ್ಯಾಚರಣೆಗೊಳಿಸಲಾಗುವುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ತಿಳಿಸಿದೆ.
ಮಾರ್ಗಸಂಖ್ಯೆ ವಿ-ಎಂಎಫ್-5 ವೇಳಾಪಟ್ಟಿ (ನಿರ್ಗಮನ ಸಮಯ)
ಸರ್.ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ
0515, 0550, 0700, 0745, 0915, 1010, 1040, 1110, 1205, 1235, 1310, 1340, 1530, 1600, 1645, 1715, 1805,1835, 1905, 1935, 2115, 2145
ಸೆಂಟ್ರಲ್ ಸಿಲ್ಕ್ ಬೋರ್ಡ್
0605, 0640, 0800, 0830, 0850, 0910, 1050, 1120, 1150, 1220, 1410, 1440, 1510, 1540, 1650, 1720, 1745, 1815, 2010, 2040, 2210, 2240
ಪ್ರಯಾಣಿಕರಿಗೆ ಅನುಕೂಲ: ಇನ್ನು ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕರಿಗೆ ಗುಡ್ನ್ಯೂಸ್ ಕೊಟ್ಟಿದೆ. ಇದರಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಹಾಗೂ ಸರ್ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ ಹಾಗೂ ಸುತ್ತಮುತ್ತ ಹೋಗುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಈ ಭಾಗದಲ್ಲಿ ಸಮೂಹ ಸಾರಿಗೆಗಳಿಗೆ ಹೆಚ್ಚಿನ ಬೇಡಿಕೆ ಇದೆ. ಇದಕ್ಕೆ ಮುಖ್ಯ ಕಾರಣ ಈ ಭಾಗಗಲ್ಲಿ ದಿನಿ ನಿತ್ಯವೂ ಟ್ರಾಫಿಕ್ ಜಾಮ್ ಹೆಚ್ಚಾಗಿ ಇರುತ್ತದೆ. ಹೀಗಾಗಿ, ಈ ಭಾಗದಲ್ಲಿ ಜನ ಹೆಚ್ಚು ಸಮೂಹ ಸಾರಿಗೆಯನ್ನು ಬಳಸುತ್ತಿದ್ದಾರೆ. ಇದೀಗ ಈ ಮಾರ್ಗದಲ್ಲಿ ಹೊಸ ಬಸ್ಗಳ ಸೇವೆ ನೀಡುವ ಮೂಲಕ ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟಂತೆ ಆಗಿದೆ.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications