BMTC: ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಕುರಿತು ಬಿಎಂಸಿಟಿ ಮಹತ್ವದ ಮಾಹಿತಿ
BMTC: ಬೆಂಗಳೂರಿನ ಜೀವನಾಡಿ ಸಾರಿಗೆಗಳಲ್ಲಿ ಬಿಎಂಟಿಸಿ ಸಹ ಒಂದಾಗಿದೆ. ಪ್ರಯಾಣಿಕರಿಗೆ ಅನುಕೂಲಕ್ಕೆ ತಕ್ಕಂತೆ ಸೇವೆ ನೀಡುವುದಲ್ಲದೇ ಹೊಸ ಯೋಜನೆಗಳನ್ನು ನೀಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ವಿದ್ಯಾರ್ಥಿಗಳಿಗೆ ಪಾಸ್ ಕುರಿತು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ವಿದ್ಯಾರ್ಥಿಗಳಿಗೆ ಬಿಎಂಟಿಸಿ ನೀಡುವ ಬಸ್ ಪಾಸ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತೆ ಆರಂಭ ಆಗಲಿದೆ. ಈ ಬಾರಿ 2025-26ನೇ ಶೈಕ್ಷಣಿಕ ಸಾಲಿನ ಪಾಸ್ಗಾಗಿ ವಿದ್ಯಾರ್ಥಿಗಳು ಮೇ 26ರಿಂದ ಸೇವಾಸಿಂಧು (https://sevasindhu.karnataka.gov.in) ಪೋರ್ಟಲ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಬಿಎಂಟಿಸಿ ತಿಳಿಸಿದೆ.

ಈ ಪಾಸ್ಗಳನ್ನು ಜೂನ್ 1ರಿಂದ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ಸಂಜೆ 6:30ರ ವರೆಗೆ ವಿತರಣೆ ಮಾಡಲಾಗುವುದು. ಮೆಜೆಸ್ಟಿಕ್, ಕೆಂಗೇರಿ, ಶಾಂತಿನಗರ, ಎಲೆಕ್ಟ್ರಾನಿಕ್ಸ್ ಸಿಟಿ ಡಿಪೋ-19, ಹೊಸಕೋಟೆ ಮತ್ತು ಕೆಎಸ್ಆರ್ಟಿಸಿ ಆನೇಕಲ್ ಬಸ್ ನಿಲ್ದಾಣದಲ್ಲಿನ ಬಿಎಂಟಿಸಿ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಬಸ್ ಪಾಸ್ಗಳನ್ನು ಪಡೆಯಬುದು ಎಂದು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಬಿಎಂಟಿಸಿ ವೆಬ್ಸೈಟ್ ಅಥವಾ ಕಾಲ್ ಸೆಂಟರ್ (080-22483777) ಸಂಪರ್ಕಿಸಬಹುದು ಎಂದು ತಿಳಿಸಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಡಿ ರಾಜ್ಯದ ವಿದ್ಯಾರ್ಥಿನಿಯರಿಗೆ ಸಾಮಾನ್ಯ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಇದೆ. ಈ ಯೋಜನೆಯ ಮೂಲಕ ಮಹಿಳಾ ವಿದ್ಯಾರ್ಥಿಗಳಿಗೆ ಭಾರೀ ನೆರವು ಒದಗಿಸುತ್ತಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಜೊತೆಗೆ ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಬೆಂಗಳೂರಿಗೆ 4,500 ಇ-ಬಸ್ಗಳ ಅನುಮೋದನೆಯನ್ನು ಕೇಂದ್ರ ಸರ್ಕಾರ ನೀಡಿದೆ. ಮುಂದಿನ 2 ವರ್ಷಗಳಲ್ಲಿ ಬಿಎಂಟಿಸಿ ಬಸ್ ಸಂಖ್ಯೆ 10,000ಕ್ಕೆ ಏರಲಿದ್ದು, ಇದು ಬೆಂಗಳೂರಿನಲ್ಲಿ ಮಾಲಿನ್ಯ ಸಮಸ್ಯೆ ನಿಯಂತ್ರ ಆದಂತಾಗಲಿದೆ. ಈ ಯೋಜನೆ ಅಡಿಯಲ್ಲಿ ದೆಹಲಿ 2,800, ಹೈದರಾಬಾದ್ 2,000, ಅಹಮದಾಬಾದ್ 1,000 ಮತ್ತು ಸೂರತ್ಗೆ 600 ಇ-ಬಸ್ಗಳನ್ನೂ ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರೇ ಮಾಹಿತಿ ನೀಡಿದ್ದಾರೆ.
ಒಟ್ಟಿನಲ್ಲಿ ಹೇಳುವುದಾದರೆ, ಬಿಎಂಟಿಸಿ ಬಸ್ಗಳು ಪ್ರತಿನಿತ್ಯ ಸಾವಿರಾರು ಪ್ರಯಾಣಿಕರನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಕರೆದೊಯ್ತುತ್ತಲೇ ಇರುತ್ತವೆ. ಈ ಮೂಲಕ ನಗರದ ಜೀವನಾಡಿ ಅಂತಲೇ ಬಿಎಂಟಿಸಿ ಬಸ್ಗಳು ಪ್ರಖ್ಯಾತಿ ಪಡದುಕೊಂಡಿವೆ. ಇವುಗಳು ಇಲ್ಲದಿದ್ದರೆ ನಗರದಲ್ಲಿನ ಸಾಮನ್ಯ ಜನರು ಹಾಗೂ ಹಳ್ಳಿಗಳಿಂದ ಬಂರುವಂತಹ ಜನರು ಬೆಂಗಳೂರಿನಲ್ಲಿ ಒಂದೆಡೆಯಿಂದ ಮತ್ತೊಂದೆಡೆಗೆ ಹೋಗಬೇಕೆಂದ್ರೆ ತುಂಬಾ ಕಷ್ಟ ಪಡಬೇಕಾಗುತ್ತದೆ. ಆದರೆ, ಬಿಎಂಟಿಸಿ ಬಸ್ಗಳು ಎಲ್ಲಾ ರೀತಿಯ ಪ್ರಯಾಣಿಕರಿಗೂ ಉತ್ತಮ ಸೇವೆ ನೀಡುವುದಲ್ಲದೆ, ಸುರಕ್ಷತೆಯ ಜವಾಬ್ದಾರಿ ಹೊತ್ತುಕೊಂಡು ಸಂಚಾರ ಮಾಡುತ್ತಿವೆ.
ಪ್ರತಿನಿತ್ಯ ಏನಿಲ್ಲ ಅಂದರೂ ಹಳ್ಳಿಗಳಿಂದ ಬೆಂಗಳೂರಿಗೆ ಸಾವಿರಕ್ಕೂ ಅಧಿಕ ಮಂದಿ ಭೇಟಿ ನೀಡುತ್ತಲೇ ಇರುತ್ತಾರೆ. ಇವರಿಗೆಲ್ಲಾ ಮೊದಲಿಗೆ ನೆನಪಾಗುವುದೇ ಜಿವನಾಡಿ ಸಾರಿಗೆ ಬಿಎಂಟಿಸಿ. ಜೊತೆಗೆ ಕಾಲೇಜು ವಿದ್ಯಾರ್ಥಿಗಳಿಗೂ ಉತ್ತಮ ಸೇವೆ ನೀಡುತ್ತಾ ಬಂದಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications