ಎರಡು ಹೊಸ ಮಾರ್ಗದಲ್ಲಿ ವಜ್ರ ಬಸ್ ಸಂಚಾರ
ಬೆಂಗಳೂರು, ಮೇ 26 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎರಡು ನೂತನ ಮಾರ್ಗಗಳಲ್ಲಿ ವಜ್ರ ಬಸ್ ಸೇವೆಯನ್ನು ಆರಂಭಿಸಿದೆ. ಮಾರ್ಗ ಸಂಖ್ಯೆ ವಿ401ಕೆ ಮತ್ತು ವಿ435ಇಯಲ್ಲಿ ಸೋಮವಾರಿಂದ ಸಂಚಾರ ಆರಂಭವಾಗಿದೆ. ಕೆಂಗೇರಿ ಮತ್ತು ಕಾಡುಗೋಡಿಗೆ ಪ್ರಯಾಣಿಸುವವರಿಗೆ ಈ ಸೇವೆಯನ್ನು ಆರಂಭಿಸಲಾಗಿದೆ.
ಈಗಾಗಲೇ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ವಜ್ರ ಸೇವೆಯನ್ನು ಆರಂಭಿಸುತ್ತಿರುವ ಬಿಎಂಟಿಸಿ, ಮೇ 26ರ ಸೋಮವಾರದಿಂದ ಎರಡು ನೂತನ ಮಾರ್ಗದಲ್ಲಿ ಬಸ್ ಸಂಚಾರವನ್ನು ಆರಂಭಿಸಿದೆ. ಈ ಎರಡೂ ಮಾರ್ಗಗಳಲ್ಲಿ 25 ನಿಮಿಷಕ್ಕೆ ಒಂದರಂತೆ ವಜ್ರ ಬಸ್ಸುಗಳು ಸಂಚರಿಸಲಿವೆ.

ಮಾರ್ಗ ವಿ401ಕೆ : ವಿ401ಕೆ ಮಾರ್ಗ ಕೆಂಗೇರಿ ಟಿಟಿಎಂಸಿಯಿಂದ ಯಲಹಂಕದವರೆಗೆ ಸಂಪರ್ಕ ಕಲ್ಪಿಸುತ್ತದೆ. ನಾಗರಬಾಬಿ ಸರ್ಕಲ್, ವಿಜಯನಗರ, ರಾಜಾಜಿನಗರ, ಯಶವಂತಪುರ,ಬಿಇಎಲ್ ಸರ್ಕಲ್, ವಿದ್ಯಾರಣ್ಯಪುರ, ಮದರ್ ಡೈರಿ, ಯಲಹಂಕ ನ್ಯೂಟೌನ್ ಮೂಲಕ ವಜ್ರ ಬಸ್ ಸಂಚರಿಸಲಿದೆ. ಈ ಮಾರ್ಗದಲ್ಲಿ 25 ನಿಮಿಷಕ್ಕೆ ಒಂದರಂತೆ ಒಟ್ಟು 10 ಬಸ್ಸುಗಳು ಸಂಚರಿಸಲಿವೆ.
ಮಾರ್ಗ ವಿ435ಇ : ವಿ435ಈ ಮಾರ್ಗ ಕೆಂಪೇಗೌಡ ಬಸ್ ನಿಲ್ದಾಣದಿಂದ ಕಾಡುಗೋಡಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಿದೆ. ರಿಚ್ಮಂಡ್ ಸರ್ಕಲ್, ಹಲಸೂರು, ಬೆನ್ನಗಾನಹಳ್ಳಿ, ಕೆ.ಆರ್.ಪುರಂ ರೈಲ್ವೆ ನಿಲ್ದಾಣ, ಗರುಡಾಚಾರ್ ಪಾಳ್ಯ, ಹೂಡಿ ಜಂಕ್ಷನ್, ಐಟಿಪಿಎಲ್ ಮಾರ್ಗವಾಗಿ ಸಂಚರಿಸಲಿದೆ. ಪ್ರತಿ 25 ನಿಮಿಷಕ್ಕೆ ಒಂದರಂತೆ 8 ಬಸ್ಸುಗಳು ಈ ಮಾರ್ಗದಲ್ಲಿ ಸಂಚರಿಸಲಿವೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣದರ ಏರಿಕೆ ಮಾಡಿರುವುದನ್ನು ಖಂಡಿಸಿ ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಭಾನುವಾರ ಶಾಂತಿನಗರ ಬಸ್ ನಿಲ್ದಾಣದಿಂದ ಸಚಿವ ರಾಮಲಿಂಗಾ ರೆಡ್ಡಿ ನಿವಾಸದವರೆಗೆ ಜಾಥಾ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು. [ಬಿಬಿಪಿವಿ ಪ್ರತಿಭಟನೆಯ ಚಿತ್ರಗಳು]
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications