ಎರಡು ಹೊಸ ಮಾರ್ಗದಲ್ಲಿ ವಜ್ರ ಬಸ್ ಸಂಚಾರ
ಬೆಂಗಳೂರು, ಮೇ 26 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎರಡು ನೂತನ ಮಾರ್ಗಗಳಲ್ಲಿ ವಜ್ರ ಬಸ್ ಸೇವೆಯನ್ನು ಆರಂಭಿಸಿದೆ. ಮಾರ್ಗ ಸಂಖ್ಯೆ ವಿ401ಕೆ ಮತ್ತು ವಿ435ಇಯಲ್ಲಿ ಸೋಮವಾರಿಂದ ಸಂಚಾರ ಆರಂಭವಾಗಿದೆ. ಕೆಂಗೇರಿ ಮತ್ತು ಕಾಡುಗೋಡಿಗೆ ಪ್ರಯಾಣಿಸುವವರಿಗೆ ಈ ಸೇವೆಯನ್ನು ಆರಂಭಿಸಲಾಗಿದೆ.
ಈಗಾಗಲೇ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ವಜ್ರ ಸೇವೆಯನ್ನು ಆರಂಭಿಸುತ್ತಿರುವ ಬಿಎಂಟಿಸಿ, ಮೇ 26ರ ಸೋಮವಾರದಿಂದ ಎರಡು ನೂತನ ಮಾರ್ಗದಲ್ಲಿ ಬಸ್ ಸಂಚಾರವನ್ನು ಆರಂಭಿಸಿದೆ. ಈ ಎರಡೂ ಮಾರ್ಗಗಳಲ್ಲಿ 25 ನಿಮಿಷಕ್ಕೆ ಒಂದರಂತೆ ವಜ್ರ ಬಸ್ಸುಗಳು ಸಂಚರಿಸಲಿವೆ.

ಮಾರ್ಗ ವಿ401ಕೆ : ವಿ401ಕೆ ಮಾರ್ಗ ಕೆಂಗೇರಿ ಟಿಟಿಎಂಸಿಯಿಂದ ಯಲಹಂಕದವರೆಗೆ ಸಂಪರ್ಕ ಕಲ್ಪಿಸುತ್ತದೆ. ನಾಗರಬಾಬಿ ಸರ್ಕಲ್, ವಿಜಯನಗರ, ರಾಜಾಜಿನಗರ, ಯಶವಂತಪುರ,ಬಿಇಎಲ್ ಸರ್ಕಲ್, ವಿದ್ಯಾರಣ್ಯಪುರ, ಮದರ್ ಡೈರಿ, ಯಲಹಂಕ ನ್ಯೂಟೌನ್ ಮೂಲಕ ವಜ್ರ ಬಸ್ ಸಂಚರಿಸಲಿದೆ. ಈ ಮಾರ್ಗದಲ್ಲಿ 25 ನಿಮಿಷಕ್ಕೆ ಒಂದರಂತೆ ಒಟ್ಟು 10 ಬಸ್ಸುಗಳು ಸಂಚರಿಸಲಿವೆ.
ಮಾರ್ಗ ವಿ435ಇ : ವಿ435ಈ ಮಾರ್ಗ ಕೆಂಪೇಗೌಡ ಬಸ್ ನಿಲ್ದಾಣದಿಂದ ಕಾಡುಗೋಡಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಿದೆ. ರಿಚ್ಮಂಡ್ ಸರ್ಕಲ್, ಹಲಸೂರು, ಬೆನ್ನಗಾನಹಳ್ಳಿ, ಕೆ.ಆರ್.ಪುರಂ ರೈಲ್ವೆ ನಿಲ್ದಾಣ, ಗರುಡಾಚಾರ್ ಪಾಳ್ಯ, ಹೂಡಿ ಜಂಕ್ಷನ್, ಐಟಿಪಿಎಲ್ ಮಾರ್ಗವಾಗಿ ಸಂಚರಿಸಲಿದೆ. ಪ್ರತಿ 25 ನಿಮಿಷಕ್ಕೆ ಒಂದರಂತೆ 8 ಬಸ್ಸುಗಳು ಈ ಮಾರ್ಗದಲ್ಲಿ ಸಂಚರಿಸಲಿವೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣದರ ಏರಿಕೆ ಮಾಡಿರುವುದನ್ನು ಖಂಡಿಸಿ ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಭಾನುವಾರ ಶಾಂತಿನಗರ ಬಸ್ ನಿಲ್ದಾಣದಿಂದ ಸಚಿವ ರಾಮಲಿಂಗಾ ರೆಡ್ಡಿ ನಿವಾಸದವರೆಗೆ ಜಾಥಾ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು. [ಬಿಬಿಪಿವಿ ಪ್ರತಿಭಟನೆಯ ಚಿತ್ರಗಳು]
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications