3 ಹೊಸ ಮಾರ್ಗವನ್ನು ಪರಿಚಯಿಸಿದ ಬಿಎಂಟಿಸಿ, ಬಸ್ ಸಂಖ್ಯೆ ವಿವರ
ಬೆಂಗಳೂರು, ಜೂನ್ 27: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೊಸ ಮಾರ್ಗವನ್ನು ಪರಿಚಯಿಸಿದೆ. ಪ್ರಯಾಣಿಕರ ಬೇಡಿಕೆ ಹಿನ್ನಲೆಯಲ್ಲಿ ಮೂರು ಹೊಸ ಮಾರ್ಗದಲ್ಲಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ.
1/7/2024 ರಿಂದ ಬಿಎಂಟಿಸಿಯ ನಾನ್ ಎಸಿ ಬಸ್ಗಳು ಹೊಸ ಮಾರ್ಗದಲ್ಲಿ ಸಂಚಾರ ನಡೆಸಲಿವೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಪ್ರಯಾಣಿಕರು ಬಸ್ ಸೇವೆಯ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಚಕ್ರ-1, ಚಕ್ರ-1ಎ, 225-ಎಫ್ ಎಂಬು ಮಾರ್ಗವನ್ನು ವಿಭಾಗ ಮಾಡಲಾಗಿದೆ. ಈ ಮಾರ್ಗದ ಬಸ್ಗಳು ನೆಲಮಂಗಲ-ನೆಲಮಂಗಲವನ್ನು ವಿವಿಧ ಮಾರ್ಗದ ಮೂಲಕ, ಜಾಲಹಳ್ಳಿ ಕ್ರಾಸ್-ನೆಲಮಂಗಲವನ್ನು ಸಂಪರ್ಕ ಕಲ್ಪಿಸುತ್ತಿವೆ.
ಬಸ್ ಮಾರ್ಗದ ವಿವರ: ಚಕ್ರ-1ಎ ಮಾರ್ಗದ ಬಸ್ ನೆಲಮಂಗಲ-ನೆಲಮಂಗಲ ನಡುವೆ ಸಂಚಾರ ನಡೆಸಲಿವೆ. 1 ಬಸ್ 9 ಟ್ರಿಪ್ ಸಂಚಾರ ನಡೆಸಲಿದೆ. ಈ ಬಸ್ ಬಸವನಹಳ್ಳಿ, ಬೊಮ್ಮಶೆಟ್ಟಿಹಳ್ಳಿ ಕ್ರಾಸ್, ಹಸ್ಕೂರು ಕ್ರಾಸ್, ಹೊನ್ನಸಂದ್ರ ಕ್ರಾಸ್, ನಾಗನೂರು ಕ್ರಾಸ್, ನಾಗನೂರು, ನಂದರಾಮಪಾಳ್ಯ, ಬಿನ್ನಿಮಂಗಲ ಮಾರ್ಗದಲ್ಲಿ ಸಂಚಾರ ನಡೆಸಲಿದೆ.
ಚಕ್ರ-2ಎ ಮಾರ್ಗ ಬಸ್. ನೆಲಮಂಗಲ-ನೆಲಮಂಗಲ ನಡುವೆ ಸಂಚಾರ ನಡೆಸಲಿದೆ. 1 ಬಸ್ ಈ ಮಾರ್ಗದಲ್ಲಿ 9 ಟ್ರಿಪ್ ಸಂಚಾರ ನಡೆಸಲಿದೆ. ಈ ಬಸ್ ಬಿನ್ನಿಮಂಗಲ, ನಂದರಾಮಪಾಳ್ಯ, ನಾಗನೂರು, ನಾಗನೂರು ಕ್ರಾಸ್, ಹೊನ್ನಸಂದ್ರ ಕ್ರಾಸ್, ಹಸ್ಕೂರು ಕ್ರಾಸ್, ಬೊಮ್ಮಶೆಟ್ಟಿಹಳ್ಳಿ ಕ್ರಾಸ್, ಬಸವನಹಳ್ಳಿ ಮೂಲಕ ಸಂಚಾರ ನಡೆಸುತ್ತದೆ.
225-ಎಫ್ ಬಸ್. ಜಾಲಹಳ್ಳಿ ಕ್ರಾಸ್-ನೆಲಮಂಗಲ ನಡುವೆ ಸಂಚಾರ ನಡೆಸಲಿದೆ. ಈ ಮಾರ್ಗದಲ್ಲಿ 1 ಬಸ್ 8 ಟ್ರಿಪ್ ಸಂಚಾರ ನಡೆಸಲಿದೆ. ಮಾರಿಷನ್ ಫ್ಯಾಕ್ಟರಿ, ಮಾದನಾಯಕನಹಳ್ಳಿ, ಮಾಕಳಿ, ನಾಗನೂರು ಕ್ರಾಸ್, ನಾಗನೂರು, ನಂದರಾಮನಪಾಳ್ಯ, ಬಿನ್ನಿಮಂಗಲ ಮೂಲಕ ಸಂಚಾರ ನಡೆಸಲಿದೆ.
ಚಕ್ರ-1 ಮಾರ್ಗದ ಬಸ್ ನೆಲಮಂಗಲದಿಂದ 7.30, 8.30, 9.35, 11.05, 12.05, 13.30, 14.30, 15.55 ಮತ್ತು 17 ಗಂಟೆಗೆ ಹೊರಡಲಿದೆ.
ಚಕ್ರ-1ಎ ಮಾರ್ಗದ ಬಸ್ ನೆಲಮಂಗಲದಿಂದ 8, 9, 10.05, 11.35, 12.35, 14.00, 15.00, 16.30, 17.35ಕ್ಕೆ ಹೊರಡಲಿದೆ.
225-ಎಫ್ ಬಸ್ ಜಾಲಹಳ್ಳಿ ಕ್ರಾಸ್ನಿಂದ 10.10, 12.45, 15.20 ಮತ್ತು 17.40ಕ್ಕೆ ಹೊರಡಲಿದೆ. ನೆಮಲಂಗಲದಿಂದ 09.05, 11.40, 14.15, 16.35ಕ್ಕೆ ಹೊರಡಲಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪ್ರಯಾಣಿಕರ ಬೇಡಿಕೆಯಂತೆ ಜೂನ್ 22ರಂದು ಹೊಸ ಮಾರ್ಗವನ್ನು ಪರಿಚಯಿಸಿತ್ತು. ಬಸ್ ಹೊರಡುವ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಒಂದು ಮಾರ್ಗದ ಬಸ್ 302-ಕೆ ಶಿವಾಜಿನಗರ- ಕೆ ಚನ್ನಸಂದ್ರ ನಡುವೆ ಸಂಚಾರ ನಡೆಸುತ್ತದೆ. ಈ ಮಾರ್ಗದ ಬಸ್ ಐಟಿಸಿ, ಸೇವಾನಗರ, ಬಾಣಸವಾಡಿ, ಹೊರಮಾವು, ಜಯಂತಿ ನಗರ, ಕಲ್ಕೆರೆ ಮೂಲಕ ಸಂಚಾರ ನಡೆಸುತ್ತದೆ.
2ನೇ ಮಾರ್ಗ 401-ಎನ್. ಬನಶಂಕರಿ ಬಸ್ ನಿಲ್ದಾಣ- ಮಲ್ಲೇಶ್ವರ ಬಸ್ ನಿಲ್ದಾಣ 18ನೇ ಕ್ರಾಸ್. ಈ ಮಾರ್ಗದ ಬಸ್ ವಿಜಯನಗರ, ಮಾಗಡಿ ರಸ್ತೆ ಟೋಲ್ಗೇಟ್, ಇಎಸ್ಐ, ನವರಂಗ್ ಮೂಲಕ ಸಂಚಾರ ನಡೆಸುತ್ತದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications