ಬೆಂಗಳೂರು ರಸ್ತೆಗಿಳಿದ ಯುಡಿ ವೋಲ್ವೊ ಬಸ್ ವಿಶೇಷತೆ ಏನು?
ಬೆಂಗಳೂರು, ಜೂ.23 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಯುಡಿ ವೋಲ್ವೊ ಬಸ್ ಸಂಚಾರವನ್ನು ಪ್ರಾಯೋಗಿಕವಾಗಿ ನಗರದಲ್ಲಿ ಆರಂಭಿಸಿದೆ. ಯುಡಿ ಬಸ್ ಸಂಚಾರ ಆರಂಭಿಸಿರುವ ಮೊದಲ ನಗರ ಎಂಬ ಖ್ಯಾತಿಗೆ ಬೆಂಗಳೂರು ಪಾತ್ರವಾಗಿದೆ.
ಯುಡಿ (ಅಲ್ಟಿಮೇಟ್ ಡಿಪೆಂಡೆಬಿಲಿಟಿ) ವೋಲ್ವೊ ಬಸ್ಗಳ ಪ್ರಾಯೋಗಿಕ ಸಂಚಾರ ಭಾನುವಾರದಿಂದ ಬೆಂಗಳೂರು ನಗರದಲ್ಲಿ ಆರಂಭವಾಗಿದೆ. ಬಿಎಂಟಿಸಿ ಪ್ರಾಯೋಗಿಕವಾಗಿ ಈ ಬಸ್ ಸಂಚಾರವನ್ನು ಮೆಜೆಸ್ಟಿಕ್-ಸರ್ಜಾಪುರ ಮಾರ್ಗದಲ್ಲಿ (ಮಾರ್ಗ ಸಂಖ್ಯೆ 342 ಎಫ್) ಆರಂಭಿಸಿದರು. [ಅವೆನ್ಯೂ ರಸ್ತೆಗಿಳಿದ ಬಿಎಂಟಿಸಿ ಬಸ್ಸುಗಳು!]

2014ರಲ್ಲಿ ವೋಲ್ವೋ ಯುಡಿ ಬಸ್ಸನ್ನು ಮಾರುಕಟ್ಟೆಗೆ ಪರಿಚಯಿಸಿತು. 700ಕ್ಕೂ ಅಧಿಕ ವೋಲ್ವೊ ಬಸ್ಗಳನ್ನು ಹೊಂದಿರುವ ಬಿಎಂಟಿಸಿ ಪ್ರಾಯೋಗಿಕ ಸಂಚಾರಕ್ಕಾಗಿ ಇದನ್ನು ನಗರಕ್ಕೆ ತೆಗೆದುಕೊಂಡು ಬಂದಿದೆ. ಎರಡು ತಿಂಗಳು ಈ ಬಸ್ ಸಂಚಾರ ನಡೆಸಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. [ಮೂರು ನೂತನ ಮಾರ್ಗಗಳನ್ನು ಪರಿಚಯಿಸಿದ ಬಿಎಂಟಿಸಿ]

ಯುಡಿ ವೋಲ್ವೊ ಬಸ್ ವಿಶೇಷತೆ : ಯುಡಿ ವೋಲ್ವೊ ಬಸ್ 12 ಮೀಟರ್ ಉದ್ದವಿದ್ದು, ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಆರಾಮದಾಯಕ ಹಾಗೂ ಸುರಕ್ಷಿತ ಪ್ರಯಾಣದ ಅನುಭವವನ್ನು ಇದು ನೀಡುತ್ತದೆ. [ಅಂದ ಹಾಗೆ ಈ ಕಂಡಕ್ಟರ್ ಹೆಸರು ತಾಂಡಚಂದ್!]
ಬಸ್ಸಿನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬಸ್ಸಿನ ಮುಂದಿನ ಚಕ್ರ ಡಿಸ್ಕ್ ಬ್ರೇಕ್, ಹಿಂದಿನ ಚಕ್ರಗಳು ಡ್ರಮ್ ಬ್ರೇಕ್ ವ್ಯವಸ್ಥೆಯನ್ನು ಹೊಂದಿವೆ. ಮುಂಭಾಗ ಹಾಗೂ ಮಧ್ಯಭಾಗದಲ್ಲಿ ಒಂದೇ ಮೆಟ್ಟಿಲಿನ ಪ್ರವೇಶದ್ವಾರವಿದ್ದು, ಅಂಗವಿಕಲರಿಗೂ ಬಸ್ ಹತ್ತಲು ಇದು ಸಹಾಯಕವಾಗಿದೆ.

-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications