ಬಸ್ ಮುಷ್ಕರ ಅಂತ್ಯ, ಮಾರ್ಗಸೂಚಿ ಬಗ್ಗೆ ಬಿಎಂಟಿಸಿ ಎಂಡಿ ಶಿಖಾ
ಬೆಂಗಳೂರು, ಏಪ್ರಿಲ್ 21: ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕವಾಗಿ ಅಂತ್ಯಗೊಂಡಿದೆ. ನಾಳೆಯಿಂದ ನೌಕರರು ಎಂದಿನಂತೆ ಹಾಜರಾಗುತ್ತಾರೆ ಎಂದು ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಇಂದು ಘೋಷಿಸಿದ್ದಾರೆ. ಈ ನಡುವೆ ಇದಕ್ಕೆ ಪ್ರತಿಕ್ರಿಯಿಸಿರುವ ಬಿಎಂಟಿಸಿ ಎಂಡಿ ಶಿಖಾ ಅವರು ''ಯಾರು ಯಾರು ಅಮಾನತಾಗಿಲ್ಲ ಎಲ್ಲರೂ ಎಂದಿನಂತೆ ಕೆಲಸಕ್ಕೆ ಹಾಜರಾಗಬಹುದು'' ಎಂದಿದ್ದಾರೆ.
ಸಾರಿಗೆ ನೌಕರರ ಮುಷ್ಕರದ ಮುಂದಾಳತ್ವ ವಹಿಸಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಲ್ಲರೂ ಕೆಲಸಕ್ಕೆ ಹೋಗಿ ಎಂದು ನ್ಯಾಯಾಲಯ ಹೇಳಿದೆ. ನಾಳೆಯಿಂದ ಎಲ್ಲರೂ ಕೆಲಸಕ್ಕೆ ಹಾಜರಾಗುತ್ತಾರೆ. ಆದರೆ, ಸರ್ಕಾರ ಯಾರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳುತ್ತದೆ. ಯಾರನ್ನು ಅಮಾನತ್ತಿಡಲಿದೆ ನೋಡಬೇಕು" ಎಂದರು.
ಕೊರೊನಾ ಮಿತಿಮೀರಿ ಹೋಗುತ್ತಿರುವ ಸಂದರ್ಭದಲ್ಲಿ ಮುಷ್ಕರ ಬೇಡ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಆಶ್ವಾಸನೆಗಳು ಇನ್ನೂ ಜಾರಿಯಾಗಿಲ್ಲವೇಕೆ
''ಇದು ಬರೀ ಸಂಬಳದ ವಿಚಾರವಲ್ಲ, ನೌಕರರ ಬೇಡಿಕೆ ಆಗ್ರಹಿಸಿ ನಡೆಸಿದ ಸತ್ಯಾಗ್ರಾಹ ಎಂದು ನಾಳೆ ನ್ಯಾಯಾಲಯಕ್ಕೂ ಮನವರಿಕೆ ಮಾಡಿಕೊಡಲಾಗುತ್ತದೆ, 2941 ಜನ ಅಮಾನತಾಗಿದ್ದಾರೆ. 7666 ಸಿಬ್ಬಂದಿ ಶೋಕಾಸ್ ನೋಟಿಸ್ ನೀಡಿದ್ದಾರೆ, ಸುಮಾರು 8000 ಜನ ವರ್ಗಾವಣೆ ಮಾಡಿದ್ದಾರೆ, ಒಟ್ಟಾರೆ 20 ಸಾವಿರ ಜನರ ಮೇಲೆ ಸರ್ಕಾರ ಕ್ರಮ ಕೈಗೊಂಡಿದೆ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕಾಗಿತ್ತು. ಶೇ 10ರಷ್ಟು ಸಂಬಳ ಏರಿಕೆ ಭರವಸೆ ಸೇರಿದಂತೆ ಅನೇಕ ಆಶ್ವಾಸನೆಗಳು ಇನ್ನೂ ಜಾರಿಯಾಗಿಲ್ಲವೇಕೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನಿಸಿದರು.

ಮಾರ್ಗಸೂಚಿಗೆ ಅನುಗುಣವಾಗಿ ಬಸ್ ಸಂಚಾರ
6500 ಬಸ್ಗಳ ಪೈಕಿ ಈಗಾಗಲೇ 2500 ಬಸ್ ಸಂಚರಿಸುತ್ತಿವೆ. ಕೊವಿಡ್ 19 ಮಾರ್ಗಸೂಚಿಗೆ ಅನುಗುಣವಾಗಿ ಬಸ್ ಸಂಚಾರ ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಣೆ ಜಾರಿಗೊಳಿಸಲಾಗುತ್ತಿದೆ.
ಮಾರ್ಗಸೂಚಿ ಪ್ರಕಾರ ಶೇ 50 ರಷ್ಟು ಮಾತ್ರ ಹಾಜರಾಗಲು ಅನುಮತಿ ಇದೆ. ಸದ್ಯ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಓಡಿಸಬೇಕು ಎಂದರು.

ಬಸ್ ಸುಸ್ಥಿತಿಯಲ್ಲಿವೆ:
ಮುಷ್ಕರ ಸಂದರ್ಭದಲ್ಲಿ ಡಿಪೋಗಳಲ್ಲಿದ್ದ ಬಸ್ ಸುಸ್ಥಿತಿಯಲ್ಲಿವೆ. ಬಿಎಂಟಿಸಿ ಗ್ಯಾರೇಜಿನಲ್ಲಿ ರಿಪೇರಿಯಲ್ಲಿದ ವಾಹನಗಳನ್ನು ಸುಸ್ಥಿತಿಗೆ ತರಲಾಗಿದ್ದು, ಈ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದರು. ಈ ನಡುವೆ ಬಸ್ ಪಾಸ್ ಪಡೆದವರು ಆತಂಕ ಪಡಬೇಕಾಗಿಲ್ಲ, ಈ ಹಿಂದೆ ಅನುಸರಿಸಿದಂತೆ, ಈ ಬಾರಿಯೂ ನಿಮ್ಮ ಪಾಸ್ ಅವಧಿಯನ್ನು ವಿಸ್ತರಿಸಲಾಗುತ್ತದೆ. ಈ ಬಗ್ಗೆ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಶಿಖಾ ಹೇಳಿದರು.

ಅಮಾನತಾದವರ ಕತೆ ಏನು?
ಯಾರು ಯಾರು ಅಮಾನತಾಗಿಲ್ಲ ಎಲ್ಲರೂ ಎಂದಿನಂತೆ ಕೆಲಸಕ್ಕೆ ಹಾಜರಾಗಬಹುದು. ಟ್ರೈನಿಗಳು, ಪ್ರೊಬೆಷನರಿ ಅವಧಿಯ ಸಿಬ್ಬಂದಿಗಳನ್ನು ಅಮಾನತಲ್ಲ, ಕೆಲಸದಿಂದ ತೆಗೆದು ಹಾಕಲಾಗಿದೆ. ಅವರು ಅಪೀಲ್ ಮಾಡಲು ಆಗುವುದಿಲ್ಲ. ಶೋಕಾಸ್ ನೋಟಿಸ್ ಪಡೆದಿರುವ ಸಿಬ್ಬಂದಿ ಸೂಕ್ತ ಕಾರಣ ನೀಡಿ, ನಮ್ಮ ನೋಟಿಸ್ಗೆ ಉತ್ತರಿಸಬೇಕಾಗುತ್ತದೆ. ಅಮಾನತಾಗಿರುವವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳುವ ಬಗ್ಗೆ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ. ಕೋರ್ಟ್ ಆದೇಶದ ಬಗ್ಗೆ ತಿಳಿದಿಲ್ಲ ಎಂದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications