ವಿರಳ ಸಂಚಾರ ದಿನ : ಸಾರಿಗೆ ಪ್ರಯಾಣ ದರ ಕಡಿತ
ಬೆಂಗಳೂರು, ಡಿಸೆಂಬರ್ 14 : ಪ್ರತಿ ತಿಂಗಳ ಎರಡನೇ ಭಾನುವಾರ ಬೆಂಗಳೂರಿನಲ್ಲಿ ವಾಹನ ವಿರಳ ಸಂಚಾರ ದಿನವಾಗಿ (ಲೆಸ್ ಟ್ರಾಫಿಕ್ ಡೇ) ಆಚರಿಸಲಾಗುವುದು. ಅಂದು ಬಿಎಂಟಿಸಿ ಮತ್ತು ಮೆಟ್ರೊ ಪ್ರಯಾಣ ದರ ಕಡಿಮೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಹೇಳಿದರು.
ವಾಹನ ಸಂಚಾರ ದಟ್ಟಣೆ, ವಾಯು ಮಾಲಿನ್ಯ ನಿಯಂತ್ರಣದ ಜತೆಗೆ ಸ್ವಂತ ವಾಹನಗಳ ಬದಲಿಗೆ ಸಾರ್ವಜನಿಕ ಸಾರಿಗೆ ಬಳಕೆಗೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಫೆಬ್ರವರಿಯಿಂದ ತಿಂಗಳ ಎರಡನೇ ಭಾನುವಾರ ವಿರಳ ಸಂಚಾರ ಅಭಿಯಾನವನ್ನು ರಾಜ್ಯ ಸರ್ಕಾರ ಆಯೋಜಿಸದೆ.
ಪ್ರತಿ ತಿಂಗಳ ಎರಡನೇ ಭಾನುವಾರದಂದು ಬಿಎಂಟಿಸಿ ವೋಲ್ವೊ ಮತ್ತು ಸಾಮಾನ್ಯ ಬಸ್ಗಳ ಟಿಕೆಟ್ ಮತ್ತು ದೈನಂದಿನ ಪಾಸ್ ದರವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದೆ. ಆದರೆ, ಎಷ್ಟು ಕಡಿಮೆ ಮಾಡಬೇಕು ಎಂಬುದನ್ನು ಚರ್ಚಿಸಲಾಗುತ್ತದೆ. ಅದೇ ರೀತಿ ಮೆಟ್ರೊ ರೈಲು ಪ್ರಯಾಣ ದರವನ್ನೂ ಇಳಿಸುವಂತೆ ನಿಗಮದ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುತ್ತಿದೆ ಎಂದು ರೇವಣ್ಣ ವಿವರಿಸಿದರು.

ಕಾನೂನು ಮಾಡುವುದಿಲ್ಲ: ಸಾರ್ವಜನಿಕರು ಎರಡನೇ ಭಾನುವಾರ ಸ್ವಂತ ವಾಹನ ಹೊರಗೆ ತೆಗೆಯಬಾರದು ಎಂದು ಕಾನೂನು ಮಾಡಲು ಸಾಧ್ಯವಿಲ್ಲ. ಇಂತಹ ಕಾನೂನು ತಂದರೆ ಅದು ನ್ಯಾಯಾಲಯಗಳಲ್ಲಿ ನಿಲ್ಲುವುದಿಲ್ಲ. ಹೀಗಾಗಿ ಜಾಗೃತಿಯ ಮೂಲಕವೇ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.
ತಾರೆಗಳು ರಾಯಭಾರಿಗಳು: ವಿರಳ ಸಂಚಾರ ಅಭಿಯಾನಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಸಿನಿಮಾ ತಾರೆಯರನ್ನು ರಾಯಭಾರಿಗಳಾಗಿ ನಿಯೋಜಿಸಿಕೊಳ್ಳಲಾಗುತ್ತದೆ. ಕನ್ನಡ ಚಿತ್ರನಟರಾದ ಪುನೀತ್ ರಾಜ್ ಕುಮಾರ್, ಯಶ್ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.
ವಿರಳ ಸಂಚಾರ ದಿನ ಆಟೋ, ಆಪ್ ಆಧಾರಿತ ಬಾಡಿಗೆ ವಾಹನ ಸಂಚಾರಕ್ಕೆ ನಿರ್ಭಂದ ಇರುವುದಿಲ್ಲ. ಒಟ್ಟಾರೆಯಾಗಿ ಸಂಚಾರ ಒತ್ತಡ ನಿಯಂತ್ರಿಸಲು ಐಟಿ, ಬಿಟಿ ಸಂಸ್ಥೆ ಮುಖ್ಯಸ್ಥರೊಂದಿಗೆ ಮಾಡತುಕತೆ ನಡೆಸಲಾಗುತ್ತದೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications