ಜನವರಿ 26ರಂದು BMTCಯ "ನಿಮ್ ಬಸ್" ಆ್ಯಪ್ ಆರಂಭ, ಉದ್ದೇಶವೇನು?, ಇಲ್ಲಿದೆ ವಿವರ
ಬೆಂಗಳೂರು, ಜನವರಿ, 23: ಬಿಎಂಟಿಸಿ ಬಸ್ ಎಲ್ಲಿದೆ ಎಂದು ತಿಳಿಸುವ "Nim bus" ಅಪ್ಲಿಕೇಶನ್ ಜನವರಿ 26 ಗಣರಾಜ್ಯೋತ್ಸವದ ದಿನದಂದು ಪ್ರಾರಂಭವಾಗಲಿದೆ. ಸೋಮವಾರ (ಡಿಸೆಂಬರ್ 23) ರಂದು ಈ ಆ್ಯಪ್ ಅನ್ನು ಬಿಡುಗಡೆ ಮಾಡಲು ಬಿಎಂಟಿಸಿ ನಿರ್ಧರಿಸಿತ್ತು. ಆದರೆ ರಸ್ತೆ ಸಾರಿಗೆ ನಿಗಮವು ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸಲು ಮತ್ತು ಅದರ ನಿಖರತೆಯನ್ನು ಸುಧಾರಿಸಲು ಈ ಯೋಜನೆಯನ್ನು ಜನವರಿ 26ಕ್ಕೆ ಜಾರಿಗೆ ತರಲು ಮುಂದಾಗಿದೆ.
"Nim bus"ಅಪ್ಲಿಕೇಶನ್ ಬಳಕೆದಾರರಿಗೆ ನೈಜ ಸಮಯದಲ್ಲಿ (BMTC)ಬಸ್ಗಳನ್ನು ಟ್ರ್ಯಾಕ್ ಮಾಡಲು ಸಹಾಯ ಮಾಡುತ್ತದೆ. ಪ್ರಯಾಣವನ್ನು ತೊಂದರೆಯಿಂದ ಮುಕ್ತವಾಗಿಸಲು ಇತರ ಆಯ್ಕೆಗಳ ಜೊತೆಗೆ ಬಸ್ ದರದ ವಿವರಗಳು, ಮಾರ್ಗಗಳು ಮತ್ತು ವೇಳಾಪಟ್ಟಿಗಳ ಮಾಹಿತಿಯನ್ನು ಸಹ ಇಲ್ಲಿ ತಿಳಿದುಕೊಳ್ಳಬಹುದಾಗಿದೆ. ಅದರ ಸಾಫ್ಟ್ ಲಾಂಚ್ನಲ್ಲಿ ಅಪ್ಲಿಕೇಶನ್ ಅನ್ನು ಪರೀಕ್ಷಿಸಲು ಪ್ರವೇಶವನ್ನು ನೀಡಿದ ಬಳಕೆದಾರರು ನೀಡಿದ ಪ್ರತಿಕ್ರಿಯೆಯನ್ನು ಆಧರಿಸಿ ಆ್ಯಪ್ ಅನ್ನು ಉತ್ತಮಗೊಳಿಸಲಾಗುತ್ತಿದೆ ಎಂದು ಸಂಸ್ಥೆಯ ಮೂಲಗಳಿಂದ ತಿಳಿದುಬಂದಿದೆ.

ಎರಡು ಬಾರಿ ಪ್ರಯತ್ನಗಳು ವಿಫಲ
ಹಲವು ತಾಂತ್ರಿಕ ದೋಷಗಳಿಂದ ಕೂಡಿದ್ದರಿಂದ ಈ ಆ್ಯಪ್ ಅನ್ನು ಪ್ರಾರಂಭಿಸಲು ಬಿಎಂಟಿಸಿ ಈ ಹಿಂದೆಯೂ ಸಹ ಎರಡು ಬಾರಿ ಮಾಡಿದ ಪ್ರಯತ್ನಗಳು ವಿಫಲವಾಗಿದ್ದವು. ಇದೀಗ ಕಾಲ ಕೂಡಿಬಂದಿದ್ದು, ಜನವರಿ 26ರಂದು ಈ ಯೋಜನೆಯನ್ನು ಜಾರಿಗೊಳಿಸಲು ನಿರ್ಧಾರ ಮಾಡಿದೆ.

BMTC ಮೂಲಗಳು ಹೇಳುವುದೇನು?
"ನಿಮ್ ಬಸ್" ಮೂರನೇ ಅಪ್ಲಿಕೇಶನ್ ಆಗಿದ್ದು, ಈ ಬಾರಿ ಅದನ್ನು ವಿಫಲಗೊಳ್ಳಲು ನಾವು ಬಯಸುವುದಿಲ್ಲ. ಕಳೆದ ಕೆಲವು ವಾರಗಳಿಂದ ಅಪ್ಲಿಕೇಶನ್ ಪರೀಕ್ಷೆಯಲ್ಲಿದೆ. ನಾವು ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕಾಗಿದೆ ಎಂದು ಬಿಎಂಟಿಸಿ ತಿಳಿಸಿದೆ. ನಾವು 400 ವೋಲ್ವೋ ಬಸ್ಗಳು ಸೇರಿದಂತೆ ಪ್ರತಿದಿನ ಸುಮಾರು 5,600 ಬಸ್ಗಳನ್ನು ನಿರ್ವಹಿಸುತ್ತೇವೆ. ಆದರೆ, ಮುಂಬರುವ ತಿಂಗಳುಗಳಲ್ಲಿ ಸ್ಕ್ರ್ಯಾಪ್ ಆಗಲಿರುವ ಬಸ್ಗಳಲ್ಲಿ ಲೈವ್ ಟ್ರ್ಯಾಕಿಂಗ್ ಲಭ್ಯವಿರುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Bengaluru BMTC: ಡ್ರೈವರ್ ಸಾಹೇಬ್ರೆ ಶಾಲಾ ಮಕ್ಕಳು ಕಾಣಿಸಿದರೆ ಬಸ್ ನಿಲ್ಲಿಸಿ: ಕಂಡಕ್ಟರ್ ವಿಡಿಯೋ ವೈರಲ್ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ












Click it and Unblock the Notifications