ಶುಕ್ರವಾರ ಬಿಎಂಟಿಸಿ ಬಸ್ ದಿನ ಮಿಸ್ ಮಾಡ್ಬೇಡಿ
ಬೆಂಗಳೂರು, ಜು.3: ಸಾರ್ವಜನಿಕ ಸಾರಿಗೆ ಬಗ್ಗೆ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ವಾಹನದಟ್ಟಣೆ ಕಡಿಮೆ ಕಡಿಮೆ ಮಾಡುವ ದೃಷ್ಟಿಯಿಂದ ಪ್ರತಿ ತಿಂಗಳಂತೆ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ತನ್ನ 53ನೇ ಬಸ್ ದಿನವನ್ನು ಜು.4 ಶುಕ್ರವಾರದಂದು ಆಚರಿಸಲಿದೆ.
ಈ ದಿನದ ಅಂಗವಾಗಿ ಹಳೆ ವಿಮಾನ ನಿಲ್ದಾಣ ರಸ್ತೆ, ಸರ್ಜಾಪುರ ರಸ್ತೆ, ಹೊಸೂರು ರಸ್ತೆ, ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ, ಮೈಸೂರು ರಸ್ತೆ, ಮಾಗಡಿ ರಸ್ತೆ, ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಥಣಿಸಂದ್ರ ರಸ್ತೆ, ಹೆಣ್ಣೂರು ರಸ್ತೆ, ಮತ್ತು ಹಳೇ ಮದ್ರಾಸ್ ರಸ್ತೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬಿಎಂಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ರಾತ್ರಿ 10ರವರೆಗೂ ಸುಮಾರು 1,500ಕ್ಕೂ ಹೆಚ್ಚು ಸಾಮಾನ್ಯ ಪಾಳಿ ಅನುಸೂಚಿಗಳನ್ನು ವಿಸ್ತರಿಸಲಾಗುತ್ತಿದೆ. ಇದರಿಂದ ಅಂದು ಪ್ರಯಾಣಿಕರಿಗೆ ಹೆಚ್ಚುವರಿ ಸೇವೆ ದೊರೆಯಲಿದೆ ಎಂದು ಬಿಎಂಟಿಸಿ ತಿಳಿಸಿದೆ.[ಬಿಎಂಟಿಸಿ ಬಸ್ಸಿನ ಕ್ಷಣ-ಕ್ಷಣದ ಮಾಹಿತಿ ಇನ್ನು ಲಭ್ಯ]

ಹೊಸದಾಗಿ ಪರಿಚಯಿಸಲಾದ ಮಾರ್ಗಸೂಚಿಗಳು:
ಮಾರ್ಗಸಂಖ್ಯೆ 375-ಇ : ಕೆಂಗೇರಿ ಟಿಟಿಎಂಸಿಯಿಂದ ಮೈಲಸಂದ್ರ ಗೇಟ್, ಮೂಕಾಂಬಿಕಾನಗರ, ಬಿಜಿಎಸ್ ಹೆಲ್ತ್ ಸಿಟಿ, ಉತ್ತರಹಳ್ಳಿ, ಕದಿರೇನಹಳ್ಳಿ ವಿಲೇಜ್ ಮಾರ್ಗವಾಗಿ ಬನಶಂಕರಿ ಟಿಟಿಎಂಸಿಗೆ
ಹೊಸ ಮಾರ್ಗಸಂಖ್ಯೆ ಜಿ-3ಎ: ಶಿವಾಜಿನಗರ ಬಸ್ ನಿಲ್ದಾಣದಿಂದ ಮಹಾತ್ಮ ಗಾಂಧಿ ಪ್ರತಿಮೆ, ಕ್ಯಾಷ್ ಪಾರ್ಮಸಿ, ಬ್ರಿಗೇಡ್ ರಸ್ತೆ, ಆಡುಗೋಡಿ ಹಾಗೂ ಬೊಮ್ಮನಹಳ್ಳಿ ಮಾರ್ಗವಾಗಿ ಎಲೆಕ್ಟ್ರಾನಿಕ್ ವಿಪ್ರೋಗೇಟ್ ಗೆ 5.
ಮಾರ್ಗಸಂಖ್ಯೆ 340-ಎಎ : ಕೆಂಪೇಗೌಡ ಬಸ್ ನಿಲ್ದಾಣದಿಂದ ಕಾರ್ಪೋರೇಷನ್, ಶಾಂತಿನಗರ, ಲಕ್ಕಸಂದ್ರ, ಡೈರಿ ಸರ್ಕಲ್, ಆಡುಗೋಡಿ ಮುಂದುವರೆದು ಮಾರ್ಗಸಂಖ್ಯೆ 171 ರಲ್ಲಿ ಕೋರಮಂಗಲ ಕೊನೆ ನಿಲ್ದಾಣವರೆಗೆ ಬಂದು ನಂತರ ಜಕ್ಕಸಂದ್ರ, ಅಗರ, ಹೆಚ್ಎಸ್ಆರ್ ಬಡಾವಣೆ 24ನೇ ಮುಖ್ಯರಸ್ತೆ, ಸಿ.ಪಿ.ಡಬ್ಲ್ಯೂ.ಡಿ ಕ್ವಾಟರ್ಸ್ ಹಾಗೂ ಪರಂಗಿಪಾಳ್ಯ ಮಾರ್ಗವಾಗಿ ಹೆಚ್ಎಸ್ಆರ್ ಬಡಾವಣೆ 2ನೇ ಸೆಕ್ಟರ್ (ಹಳೇ ಕೇಂಬ್ರಿಡ್ಜ್ ಶಾಲೆ) [810 ಹೊಸ ಬಸ್ ಖರೀದಿಗೆ ಮುಂದಾದ ಬಿಎಂಟಿಸಿ]
ಮಾರ್ಗಸಂಖ್ಯೆ 289-ಝಡ್: ಕೆಂಪೇಗೌಡ ಬಸ್ ನಿಲ್ದಾಣದಿಂದ ಮೇಖ್ರಿ ಸರ್ಕಲ್, ಹೆಬ್ಬಾಳ, ಯಲಹಂಕ, ವೆಂಕಟಾಲ, ಸಾತನೂರು ಹಾಗೂ ಬಾಗಲೂರು ಮಾರ್ಗವಾಗಿ ಬಂಡಿಕೊಡಗೆಹಳ್ಳಿಗೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications