ಪ್ರಯಾಣಿಕ ಸ್ನೇಹಿಯಾಗಲು ಬಿಎಂಟಿಸಿ ಸಿದ್ಧತೆ!
ಬೆಂಗಳೂರು, ಸೆ.17 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಲು ಸಿದ್ಧತೆ ನಡೆಸಿದೆ. ಇಂಟಲಿಜೆಂಟ್ ಟ್ರಾನ್ಸ್ಪೋರ್ಟ್ ಸಿಸ್ಟಮ್ ಅನುಷ್ಠಾನಕ್ಕೆ ತರುವ ಮೂಲಕ ಸಾರ್ವಜನಿಕರಿಂದ ಬರುವ ದೂರಿನಿಂದ ಮುಕ್ತಿ ಪಡೆಯಲು ಚಿಂತನೆ ಆಲೋಚಿಸಿದೆ.
ಬಸ್ ನಿರ್ವಹಣಾ ವ್ಯವಸ್ಥೆ, ಪ್ರಯಾಣಿಕರು ಮತ್ತು ನಿರ್ವಾಹಕರ ಜಟಾಪಟಿ, ಕೊನೆ ಕ್ಷಣದಲ್ಲಿ ಬಸ್ ರದ್ದು, ಸಮಯಕ್ಕೆ ಸರಿಯಾಗಿ ಬಸ್ ಆಗಮಿಸದೆ ಇರುವುದು ಮುಂತಾದ ದೂರುಗಳಿಂದ ಬೇಸತ್ತ ಬಿಎಂಟಿಸಿ ಇಂಟಲಿಜೆಂಟ್ ಟ್ರಾನ್ಸ್ಪೋರ್ಟ್ ಸಿಸ್ಟಮ್ ಅನುಷ್ಠಾನಕ್ಕೆ ತರಲು ಮುಂದಾಗಿದೆ.

ಈ ಮೂಲಕ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಬಗ್ಗೆ ಕ್ಷಣ ಕ್ಷಣದ ಮಾಹಿತಿ ನೀಡಿ ಜನಸ್ನೇಹಿ ಆಗಲಿದೆ. ಈ ತಂತ್ರಜ್ಞಾನ ಅಳವಡಿಕೆಯಿಂದ ನಿಯಂತ್ರಣ ಕೊಠಡಿಯಲ್ಲೇ ಬಸ್ ಎಲ್ಲಿದೆ? ಎಷ್ಟು ಹೊತ್ತಿಗೆ ನಿಲ್ದಾಣಕ್ಕೆ ಬರುತ್ತದೆ? ಮುಂತಾದ ಮಾಹಿತಿಗಳು ದೊರೆಯಲಿದ್ದು, ಇವು ಪ್ರಯಾಣಿಕರಿಗೂ ಲಭ್ಯವಾಗಲಿವೆ.
ಬಿಎಂಟಿಸಿ ಪ್ರಾಯೋಗಿಕವಾಗಿ ಅತೀ ಹೆಚ್ಚು ಸಮಸ್ಯೆ ಇರುವ ಯಲಹಂಕ ಡಿಪೋದಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಮುಂದಿನ 3-4ತಿಂಗಳಿನಲ್ಲಿ ಇಂಟಲಿಜೆಂಟ್ ಟ್ರಾನ್ಸ್ಪೋರ್ಟ್ ಸಿಸ್ಟಮ್ ಯೋಜನೆ ಅನುಷ್ಠಾನಗೊಳ್ಳಲಿದೆ.
ಪ್ರಾಯೋಗಿಕ ಯೋಜನೆಯ ಯಶಸ್ಸಿನ ನಂತರ, ಉಳಿದ ಡಿಪೋಗಳಿಗೆ ಈ ವ್ಯವಸ್ಥೆ ವಿಸ್ತರಣೆ ಮಾಡಲು ಬಿಎಂಟಿಸಿ ಯೋಜನೆ ರೂಪಿಸಿದೆ. ಈ ವ್ಯವಸ್ಥೆ ಅನ್ವಯ ಎಲ್ಲಾ ಬಸ್ ಗಳಿಗೂ ಜಿಪಿಎಸ್ ಅಳವಡಿಸಿ, ಬಸ್ ಗಳ ಪ್ರತಿಯೊಂದು ಮಾಹಿತಿ ಸಂಗ್ರಹಿಸಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ಹೇಳಿದ್ದಾರೆ.
ಹೈದರಾಬಾದ್ ಮೂಲದ ಕಂಪನಿಯೊಂದಕ್ಕೆ ಈ ಯೋಜನೆಯ ಟೆಂಡರ್ ನೀಡಲಾಗಿದೆ. ಇದರ ಪ್ರಕಾರ ಸಂಸ್ಥೆ ಯೋಜನೆಯ ವಿನ್ಯಾಸ ರೂಪಿಸಿ ಅಭಿವೃದ್ಧಿ, ಪರೀಕ್ಷೆ, ತಪಾಸಣೆ, ಅಳವಡಿಕೆ, ಕಾರ್ಯನಿರ್ವಹಣೆ, ಸಂವಹನ, ಜಾಲ, ತರಬೇತಿ ಮುಂತಾದವುಗಳ ನಿರ್ವಹಣೆ ನೋಡಿಕೊಳ್ಳಬೇಕಿದೆ.
ಈ ಯೋಜನೆ ಜಾರಿಗೆ ಬಂದ ನಂತರ, ಕೇಂದ್ರ ಕಚೇರಿಯ ನಿಯಂತ್ರಣಾ ಕೊಠಡಿಯಿಂದಲೇ ಬಸ್ ಗಳ ಮೇಲ್ವಿಚಾರಣೆ ನಡೆಯಲಿದೆ. ಇದರಿಂದ ಬಸ್ಗಳ ಸ್ಥಿತಿಯ ಕ್ಷಣ ಕ್ಷಣದ ಮಾಹಿತಿಯನ್ನು ನಿಯಂತ್ರಣ ಕೊಠಡಿಯಲ್ಲೇ ಪಡೆದುಕೊಳ್ಳಬಹುದು.
ಯೋಜನೆ ಅನ್ವಯ 10,000 ಎಲೆಕ್ಟ್ರಾನಿಕ್ ಟಿಕೆಟಿಂಗ್ ಮೆಷಿನ್ಗಳು (ಇಟಿಎಂ) ಗಳನ್ನು ವಿತರಿಸಲು ನಿರ್ಧರಿಸಲಾಗಿದ್ದು, ಇದರಿಂದ ಹಳೆಯ ಟಿಕೆಟ್ ನೀಡಿ, ಪ್ರಯಾಣಿಕರನ್ನು ವಂಚಿಸುವ ನಿರ್ವಾಹಕರಿಗೆ ಕಡಿವಾಣ ಬೀಳಲಿದೆ.
ಸದ್ಯ ಬಿಎಂಟಿಸಿ 6,500 ಬಸ್ ಗಳನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ 8,500 ಆಗುವ ಸಾಧ್ಯತೆ ಇದೆ. ಆದ್ದರಿಂದ ಇಂಟಲಿಜೆಂಟ್ ಟ್ರಾನ್ಸ್ಪೋರ್ಟ್ ಸಿಸ್ಟಮ್ ಜಾರಿಗೆ ತರಲು ಬಿಎಂಟಿಸಿ ಸಿದ್ಧತೆ ನಡೆಸಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications