ಬಿಎಂಟಿಸಿ ಜಾಗದಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೆ ಚಿಂತನೆ
ಬೆಂಗಳೂರು, ಜು.2: ರಾಜಧಾನಿಯಲ್ಲಿ ಬಿಎಂಟಿಸಿಯ ನಿವೇಶನಗಳಿರುವ ಜಾಗದಲ್ಲಿ ಐಟಿ ಪಾರ್ಕ್ ನಿರ್ಮಿಸುವ ಕುರಿತು ಚರ್ಚೆ ಆರಂಭವಾಗಿದೆ. ಬಿಎಂಟಿಸಿ ನಾರಾರು ಕೋಟಿ ನಷ್ಟದಲ್ಲಿದೆ ಅದನ್ನು ಲಾಭದೆಡೆಗೆ ಕೊಂಡೊಯ್ಯಲು ಸಾರಿಗೆ ಸಚಿವರು ವಿನೂತನ ಪ್ರಯತ್ನಕ್ಕೆ ಕೈಹಾಕಿದ್ದಾರೆ.
ಬೃಹತ್ ವಾಣಿಜ್ಯ ಮಳಿಗೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಿ ಭೋಗ್ಯ ಅಥವಾ ಬಾಡಿಗೆ ರೂಪದಲ್ಲಿ ಐಟಿ ಕಂಪನಿಗಳಿಗೆ ನೀಡುವ ಮೂಲಕ ನಿಗಮಕ್ಕೆ ನೂರಾರು ಕೋಟಿ ರೂ ಆದಾಯ ತರುವ ಕುರಿತು ಸಾರಿಗೆ ಸಚಿವರು ಅಧಿಕಾರಿಗಳಿಗೆ ಜತೆ ಚರ್ಚಿಸಿದ್ದಾರೆ.
ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳು ನಷ್ಟದಲ್ಲಿದೆ. ಕೇವಲ ಬಸ್ ಕಾರ್ಯಾಚರಣೆಯಿಂದ ಲಾಭ ಸಾಧ್ಯವಿಲ್ಲ. ನಿವೇಶನಗಳಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವುದರ ಮೂಲಕ ನಷ್ಟವನ್ನು ಸರಿದೂಗಿಸುವ ಚಿಂತನೆಯಿದ್ದು, ಸರ್ಕಾರ ಒಪ್ಪಿಗೆ ನೀಡಿದರೆ ರೂಪುರೇಷೆ ಸಿದ್ಧಪಡಿಸುತ್ತೇವೆ ಎಂದು ಸಚಿವ ತಮ್ಮಣ್ಣ ತಿಳಿಸಿದ್ದಾರೆ.

2016-17ರಲ್ಲಿ 80 ಕೋಟಿ ರೂ. ಹಾಗೂ 2017-18ರಲ್ಲಿ 192 ಕೋಟಿ ರೂ. ಸಾಲವನ್ನು ನಿಗಮ ಮಾಡಿಕೊಂಡಿದೆ. ಸ್ವತಃ ಬಂಡವಾಳ ಹೂಡಿ ಇಂತಹ ಪಾರ್ಕ್ ನಿರ್ಮಿಸಲು ನಿಗಮ ಆರ್ಥಿಕವಾಗಿ ಸಶಕ್ತವಾಗಿಲ್ಲ. ಹೀಗಾಗಿ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಜಾರಿಗೆ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.
ಬಿಎಂಆರ್ಸಿಎಲ್ ಈಗಾಗಲೇ ಬೈಯಪ್ಪನಹಳ್ಳಿ ಬಳಿಯ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಸಮೀಪ ಮೆಟ್ರೋ ಭವನ ನಿರ್ಮಾಣಕ್ಕೆ ರೂಪು ರೇಷೆ ಸಿದ್ಧಪಡಿಸಿದೆ. ಬಿಎಂಟಿಸಿಗೆ ಪ್ರತಿ ತಿಂಗಳು 1.48 ಕೋಟಿ ರೂ. ಬಾಡಿಗೆ ನೀಡುತ್ತಿರುವ ಸಾರಿಗೆ ಇಲಾಖೆಯೂ ಶಾಂತಿನಗರದಲ್ಲೇ ಇರುವ ಬಿಎಂಟಿಸಿಯ 1.4 ಎಕರೆ ಜಾಗ ಖರೀದಿಸಲು ಚಿಂತನೆ ನಡೆಸಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications