ಬಿಎಂಟಿಸಿ ವೋಲ್ವೋ ಬಸ್ ಮಾಸಿಕ ಪಾಸು ದರ ಇಳಿಕೆ
ಬೆಂಗಳೂರು, ಆ.09 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವೋಲ್ವೋ ಬಸ್ ಮಾಸಿಕ ಪಾಸುಗಳ ದರವನ್ನು ಇಳಿಕೆ ಮಾಡಿದೆ. ಪರಿಷ್ಕೃತ ದರ ಜಾರಿಗೆ ಬರುವ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬಸ್ ಪಾಸುಗಳ ದರ ಇಳಿಕೆ ಮಾಡಲು ಒಪ್ಪಿಗೆ ನೀಡಿದ್ದಾರೆ. ಶೇ 10ರಷ್ಟು ದರವನ್ನು ಕಡಿಮೆ ಮಾಡಲಾಗಿದೆ.

ದರ ಕಡಿಮೆ ಆಗುವುದರಿಂದ3,910 ರೂ. ಇರುವ ಪಾಸು ದರ3,570 ರೂ., 4,197 ರೂ. ಇದ್ದ ದರ 3,832 ರೂ., 4,600 ರೂ. ಇದ್ದ ದರ 3,990 ರೂ. ಆಗಲಿದೆ. ಪರಿಷ್ಕೃತ ದರ ಎಂದಿನಿಂದ ಜಾರಿಗೆ ಬರಲಿದೆ ಎಂಬುದನ್ನು ಇನ್ನು ಪ್ರಕಟಿಸಿಲ್ಲ.
ದರ ಇಳಿಕೆಗೆ ಕಾರಣವೇನು? : ನಮ್ಮ ಮೆಟ್ರೊ ಮೊದಲ ಹಂತದ ಯೋಜನೆ ಪೂರ್ಣಗೊಂಡ ಬಳಿಕ, ವೋಲ್ವೋ ಬಸ್ಸುಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗಿದೆ. ಇದರಿಂದ ಸಂಸ್ಥೆಗೆ ನಷ್ಟ ಉಂಟಾಗುತ್ತಿದೆ.
ವೋಲ್ವೋ ಬಸ್ ಪಾಸ್ ದರ ಇಳಿಕೆ ಮಾಡುವ ಕುರಿತು ಜುಲೈನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕಳೆದ ವರ್ಷದಿಂದ ಶೇ 15ರಷ್ಟು ಸೇವಾ ತೆರಿಗೆ ವಿಧಿಸಲಾಗುತ್ತಿತ್ತು. ಅದನ್ನು ಶೇ 5ಕ್ಕೆ ಇಳಿಸಲು ಪ್ರಸ್ತಾವ ಸಲ್ಲಿಸಲಾಗಿತ್ತು.
ಬಿಎಂಟಿಸಿ ವೋಲ್ವೋ ಬಸ್ಸುಗಳ ದಟ್ಟಣೆ ಅವಧಿಗೊಂದು ಹಾಗೂ ಉಳಿದ ಅವಧಿಗೊಂದು ಪ್ರಯಾಣ ದರ ನಿಗದಿಪಡಿಸಲು ಮುಂದಾಗಿದೆ. ಬೆಳಗ್ಗೆ ಹಾಗೂ ಸಂಜೆ ಹೊತ್ತಿನಲ್ಲಿ ವೋಲ್ವೋ ಬಸ್ಸುಗಳಲ್ಲಿ ಪ್ರಯಾಣಿಕರ ದಟ್ಟಣೆ ಇರುತ್ತದೆ.
-
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications