ಜನವರಿಯಿಂದ ಬಿಎಂಟಿಸಿ ಸ್ಮಾರ್ಟ್ ಕಾರ್ಡ್
ನಗದು ರಹಿತ ಸೇವೆ ಒದಗಿಸಲು ಬಿಎಂಟಿಸಿ ಸಜ್ಜಾಗಿದ್ದು, ಜನವರಿಯಿಂದ ಸ್ಮಾರ್ಟ್ ಕಾರ್ಡ್ ಸೇವೆ ಒದಗಿಸಲು ಮುಂದಾಗಿದೆ. ಈ ಸ್ಮಾರ್ಟ್ ಕಾರ್ಡ್ ಮೂಲಕ ಮೆಟ್ರೊದಲ್ಲೂ ಪ್ರಯಾಣಿಸಬಹುದಾಗಿದೆ.
ಬೆಂಗಳೂರು, ನವೆಂಬರ್, 18: ಪ್ರಯಾಣಿಕರಿಗೆ ಮತ್ತು ನಿರ್ವಾಹಕರಿಗೆ ಚಿಲ್ಲರೆ ಸಮಸ್ಯೆಯಿಂದ ಮುಕ್ತಿ ನೀಡಲು ನಗದು ರಹಿತ ಸೇವೆ ಒದಗಿಸುವತ್ತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹೆಜ್ಜೆ ಇಟ್ಟಿದೆ.
ಇದಕ್ಕಾಗಿ ಸಿದ್ಧತೆ ನಡೆಸಿರುವ ಬಿಎಂಟಿಸಿ, ಸ್ಮಾರ್ಟ್ ಕಾರ್ಡ್ ಅಭಿವೃದ್ಧಿ ಪಡಿಸಿದೆ. ಜನವರಿಯಿಂದ ಸ್ಮಾರ್ಟ್ ಕಾರ್ಡ್ ಯೋಜನೆ ಜಾರಿಗೆ ತರಲು ನಿರ್ಧರಿಸಿದೆ.[ಬಿಎಂಟಿಸಿ ಬಸ್ಸುಗಳಲ್ಲಿ ಟಿಕೆಟ್ ಪಡೆಯಲು ಸ್ಮಾರ್ಟ್ ಕಾರ್ಡ್]

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಏಕ್ ರೂಪ್ ಕೌರ್ ಅವರು 'ನಗದು ರಹಿತ ಸೇವೆ ಒದಗಿಸುವುದಕ್ಕಾಗಿ ಬಿಎಂಟಿಸಿ ಸ್ಮಾರ್ಡ್ ಕಾರ್ಡ್ ಅನ್ನು ಮುಂದಿನ ಜನವರಿಯಿಂದ ಜಾರಿಗೊಳಿಸಲಾಗುವುದು" ಎಂದು ತಿಳಿಸಿದರು.
'ಈ ಕಾರ್ಡ್ ಬಿಎಂಟಿಸಿ ಪ್ರಯಾಣಕ್ಕೆ ಮಾತ್ರವಲ್ಲ. ಇದನ್ನು ಮೆಟ್ರೋ ಟ್ರೈನ್, ವಾಹನ ನಿಲುಗಡೆ ಪಾರ್ಕಿಂಗ್ ಶುಲ್ಕ, ವ್ಯಾಪಾರಿ ಮಳಿಗೆಗಳಲ್ಲೂ ಇದನ್ನು ಹಣ ಪಾವತಿಗಾಗಿ ಬಳಸಿಕೊಳ್ಳಬಹುದಾಗಿದೆ" ಎಂದು ಅವರು ಹೇಳಿದರು.[ಬೆಂಗಳೂರು ಸಾರ್ವಜನಿಕ ಸಾರಿಗೆ ಎಲ್ಲ ಮಾಹಿತಿ ಅಂಗೈನಲ್ಲಿ]
ಗ್ರಾಹಕರ ಅನುಕೂಲಕ್ಕಾಗಿ ಓಪನ್ ಲೂಪ್ ಸ್ಮಾರ್ಟ್ ಕಾರ್ಡ್ ಅಭಿವೃದ್ಧಿಪಡಿಸಲಾಗಿದೆ. ನಿಗದಿತ ಹಣವನ್ನು ರೀಚಾರ್ಜ್ ಮಾಡಿ ಅದನ್ನು ಇತರ ಪಾವತಿಗಳಿಗೂ ಬಳಸಹಬುದು ಎಂದು ಅವರು ಹೇಳಿದರು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications